ಬ್ರೇಕಿಂಗ್ ನ್ಯೂಸ್
17-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಡೀ ರಾಜ್ಯದಲ್ಲೇ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿರುವಾಗಲೇ ಆರೋಗ್ಯ ಇಲಾಖೆಯಿಂದ ಹೊಸತೊಂದು ಸುದ್ದಿ ಹೊರಬಿದ್ದಿದೆ. ಕೇರಳದಿಂದ ನೆಗೆಟಿವ್ ರಿಪೋರ್ಟ್ ತೋರಿಸಿ ಬಂದ ವಿದ್ಯಾರ್ಥಿಗಳೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ.
ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಹತ್ತು ದಿನಗಳಲ್ಲಿ ಕೇರಳದಿಂದ 390 ಮಂದಿ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಕೋವಿಡ್ ನೆಗೆಟಿವ್ ವರದಿ ತೋರಿಸಿಕೊಂಡೇ ಕರ್ನಾಟಕ ಪ್ರವೇಶ ಮಾಡಿದ್ದ ಈ ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಂದರೆ, ತಾವು ಉಳಿದುಕೊಳ್ಳುವ ಆಯಾ ಕೇಂದ್ರಗಳಲ್ಲೇ ಐಸೋಲೇಶನ್ ಇರುವಂತೆ ಸೂಚಿಸಿ, ಹೊರಗೆ ಅಡ್ಡಾಡದಂತೆ ಉಳಿದುಕೊಳ್ಳುವಂತೆ ಸೂಚಿಸಲಾಗಿತ್ತು.
ಅದರಂತೆ, ಏಳು ದಿನಗಳ ಬಳಿಕ ಹೀಗೆ ಉಳಿದುಕೊಂಡ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬಂದಿ ಪರೀಕ್ಷೆ ಮಾಡಿದ್ದು ಸ್ವತಃ ಅಚ್ಚರಿಗೆ ಒಳಗಾಗಿದ್ದಾರೆ. ಪರೀಕ್ಷೆ ವೇಳೆ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆ. ಒಟ್ಟು 229 ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಒಂದ್ಕಡೆ ವಿದ್ಯಾರ್ಥಿಗಳು ಹಿಡಿದುಕೊಂಡು ಬಂದ ಕೋವಿಡ್ ನೆಗೆಟಿವ್ ರಿಪೋರ್ಟ್ ಬಗ್ಗೆಯೇ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಹೀಗೆ ಬಂದು ಉಳಿದುಕೊಂಡ ಹಾಸ್ಟೆಲ್ ಇನ್ನಿತರ ಪ್ರದೇಶಗಳಲ್ಲಿ ಇತರರಿಗೂ ಕೋವಿಡ್ ಹರಡುವ ಆತಂಕ ಉಂಟಾಗಿದೆ.
ಕೇರಳದ ವಿದ್ಯಾರ್ಥಿಗಳನ್ನು ಕೋವಿಡ್ ನೆಗೆಟಿವ್ ವರದಿ ಇದ್ದ ಕಾರಣಕ್ಕೆ ಒಳಗೆ ಬಿಡಲಾಗಿತ್ತು. ಗಡಿಭಾಗದಲ್ಲಿ ನಿರ್ಬಂಧ ವಿಧಿಸಿ ಕೋವಿಡ್ ಹರಡದಂತೆ ಹರಸಾಹಸ ಪಟ್ಟಿದ್ದು ಒಂದೆಡೆ ಆಗಿದ್ದರೆ, ಇದೇ ವೇಳೆ ನೆಗೆಟಿವ್ ಎಂದು ಹೇಳಿಕೊಂಡು ಬಂದಿದ್ದ ಮಂದಿಯೇ ಮಂಗಳೂರಿನಲ್ಲಿ ಕೋವಿಡ್ ಹರಡಲು ಮತ್ತು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದ್ದಾರೆ ಎನ್ನೋದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
Mangalore Among 390 students from Kerala 229 tested Covid Positive with Negative report
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm