ಬ್ರೇಕಿಂಗ್ ನ್ಯೂಸ್
17-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಡೀ ರಾಜ್ಯದಲ್ಲೇ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿರುವಾಗಲೇ ಆರೋಗ್ಯ ಇಲಾಖೆಯಿಂದ ಹೊಸತೊಂದು ಸುದ್ದಿ ಹೊರಬಿದ್ದಿದೆ. ಕೇರಳದಿಂದ ನೆಗೆಟಿವ್ ರಿಪೋರ್ಟ್ ತೋರಿಸಿ ಬಂದ ವಿದ್ಯಾರ್ಥಿಗಳೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ.
ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಹತ್ತು ದಿನಗಳಲ್ಲಿ ಕೇರಳದಿಂದ 390 ಮಂದಿ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಕೋವಿಡ್ ನೆಗೆಟಿವ್ ವರದಿ ತೋರಿಸಿಕೊಂಡೇ ಕರ್ನಾಟಕ ಪ್ರವೇಶ ಮಾಡಿದ್ದ ಈ ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಂದರೆ, ತಾವು ಉಳಿದುಕೊಳ್ಳುವ ಆಯಾ ಕೇಂದ್ರಗಳಲ್ಲೇ ಐಸೋಲೇಶನ್ ಇರುವಂತೆ ಸೂಚಿಸಿ, ಹೊರಗೆ ಅಡ್ಡಾಡದಂತೆ ಉಳಿದುಕೊಳ್ಳುವಂತೆ ಸೂಚಿಸಲಾಗಿತ್ತು.
ಅದರಂತೆ, ಏಳು ದಿನಗಳ ಬಳಿಕ ಹೀಗೆ ಉಳಿದುಕೊಂಡ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬಂದಿ ಪರೀಕ್ಷೆ ಮಾಡಿದ್ದು ಸ್ವತಃ ಅಚ್ಚರಿಗೆ ಒಳಗಾಗಿದ್ದಾರೆ. ಪರೀಕ್ಷೆ ವೇಳೆ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆ. ಒಟ್ಟು 229 ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಒಂದ್ಕಡೆ ವಿದ್ಯಾರ್ಥಿಗಳು ಹಿಡಿದುಕೊಂಡು ಬಂದ ಕೋವಿಡ್ ನೆಗೆಟಿವ್ ರಿಪೋರ್ಟ್ ಬಗ್ಗೆಯೇ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಹೀಗೆ ಬಂದು ಉಳಿದುಕೊಂಡ ಹಾಸ್ಟೆಲ್ ಇನ್ನಿತರ ಪ್ರದೇಶಗಳಲ್ಲಿ ಇತರರಿಗೂ ಕೋವಿಡ್ ಹರಡುವ ಆತಂಕ ಉಂಟಾಗಿದೆ.
ಕೇರಳದ ವಿದ್ಯಾರ್ಥಿಗಳನ್ನು ಕೋವಿಡ್ ನೆಗೆಟಿವ್ ವರದಿ ಇದ್ದ ಕಾರಣಕ್ಕೆ ಒಳಗೆ ಬಿಡಲಾಗಿತ್ತು. ಗಡಿಭಾಗದಲ್ಲಿ ನಿರ್ಬಂಧ ವಿಧಿಸಿ ಕೋವಿಡ್ ಹರಡದಂತೆ ಹರಸಾಹಸ ಪಟ್ಟಿದ್ದು ಒಂದೆಡೆ ಆಗಿದ್ದರೆ, ಇದೇ ವೇಳೆ ನೆಗೆಟಿವ್ ಎಂದು ಹೇಳಿಕೊಂಡು ಬಂದಿದ್ದ ಮಂದಿಯೇ ಮಂಗಳೂರಿನಲ್ಲಿ ಕೋವಿಡ್ ಹರಡಲು ಮತ್ತು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದ್ದಾರೆ ಎನ್ನೋದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
Mangalore Among 390 students from Kerala 229 tested Covid Positive with Negative report
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am