ಬ್ರೇಕಿಂಗ್ ನ್ಯೂಸ್
19-08-21 05:45 pm Richard, Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಅಫ್ಘಾನಿಸ್ತಾನದಲ್ಲಿ ಮಂಗಳೂರು ಮೂಲದ ಸಿಸ್ಟರ್ ಒಬ್ಬರು ಸಿಕ್ಕಿಬಿದ್ದಿದ್ದಾರೆ. ಮೂರು ವರ್ಷಗಳ ಹಿಂದೆ ಸಿಸ್ಟರ್ ಆಗಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳಲು ತೆರಳಿದ್ದ 50 ವರ್ಷದ ಸಿಸ್ಟರ್ ಥೆರೆಸಾ ಕ್ರಾಸ್ತಾ ಕಾಬೂಲಿನಲ್ಲಿ ಸಿಕ್ಕಿಬಿದ್ದಿದ್ದು, ಮರಳಿ ಬರಲಾಗದೆ ಒದ್ದಾಡುತ್ತಿದ್ದಾರೆ.
ಸಿಸ್ಟರ್ ಥೆರೆಸಾ ಕ್ರಾಸ್ತಾ, ಮೂರು ವರ್ಷಗಳ ಹಿಂದೆ ಇಟಲಿ ಮೂಲದ ಎನ್ ಜಿಓ ಸಂಸ್ಥೆಯೊಂದರಲ್ಲಿ ಸಿಸ್ಟರ್ ಆಗಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿಗೆ ತೆರಳಿದ್ದರು. ಮೂಲತಃ ಕಾಸರಗೋಡು ಜಿಲ್ಲೆಯ ಬೇಳ ನಿವಾಸಿಯಾಗಿರುವ ಥೆರೆಸಾ ಈ ಹಿಂದೆ ನೆಲ್ಯಾಡಿಯ ಕಾನ್ವೆಂಟ್ ಒಂದರಲ್ಲಿ ಸಿಸ್ಟರ್ ಆಗಿದ್ದರು. ಆನಂತರ ಜಪ್ಪು ನಲ್ಲಿರುವ ಪ್ರಶಾಂತ ನಿವಾಸ ಆಶ್ರಮದಲ್ಲಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದರು.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿಯಲ್ಲಿದ್ದ ಥೆರೆಸಾ ಅವರನ್ನು ಇಟಲಿಯ ಸೇವಾ ಸಂಸ್ಥೆಯು ಕರೆದ ಕಾರಣ ಮೂರು ವರ್ಷಗಳ ಹಿಂದೆ ಕಳಿಸಿಕೊಡಲಾಗಿತ್ತು. ಅವರಿಗೆ ಕಾಬೂಲಿನಲ್ಲಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳಲು ಜವಾಬ್ದಾರಿ ನೀಡಲಾಗಿತ್ತು. ಇತರ ಪಾಕಿಸ್ಥಾನಿ ಮೂಲದ ಸಿಸ್ಟರ್ ಗಳ ಜೊತೆ ಥೆರೆಸಾ ಅಲ್ಲಿದ್ದರು. ಆದರೆ, ಈಗ ತಾಲಿಬಾನಿಗಳು ಅಲ್ಲಿನ ಸರಕಾರವನ್ನು ಕಿತ್ತು ಅಧಿಕಾರಕ್ಕೇರುತ್ತಿದ್ದಂತೆ ಆತಂಕ ಮನೆಮಾಡಿದೆ.

ರಾಜಧಾನಿ ಕಾಬೂಲಿನ ಏರ್ಪೋರ್ಟ್ ಬಳಿಯಲ್ಲೇ ಸಿಸ್ಟರ್ ಥೆರೆಸಾ ಇದ್ದಾರೆ. ಆದರೆ, ಆಶ್ರಮದಿಂದ ಹೊರಗೆ ಬರುವಂತೆ ಇಲ್ಲ. ಹೊರಗೆ ಏನಾಗುತ್ತಿದೆ ಎಂದು ನೋಡುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ. 30 ಜನ ಅನಾಥ ಬುದ್ಧಿಮಾಂದ್ಯ ಮಕ್ಕಳ ರಕ್ಷಣೆ ಮತ್ತು ಪಾಲನೆಯ ಹೊಣೆ ಹೊತ್ತಿರುವ ಸಿಸ್ಟರ್ ಅಲ್ಲಿಂದ ಹೇಗೆ ಬರುವುದು ಎನ್ನುವ ಚಿಂತೆಯಲ್ಲಿದ್ದಾರೆ. ಥೆರೆಸಾ ಇರುವ ಕಟ್ಟಡದ ಹೊರಭಾಗದಲ್ಲಿ ಮಿಲಿಟರಿ ಸೆಕ್ಯುರಿಟಿ ಇದ್ದಾರೆ. ಹೀಗಾಗಿ ಹೊರಗೆ ಹೋಗುವುದು ಸಾಧ್ಯವಿಲ್ಲ. ಸದ್ಯಕ್ಕೆ ಸುರಕ್ಷಿತವಾಗಿರುವುದಾಗಿ ಮಂಗಳೂರಿನ ಸಿಸ್ಟರ್ಸ್ ಆಫ್ ಚಾರಿಟಿಯ ಉಸ್ತುವಾರಿಗೆ ಥೆರೆಸಾ ತಿಳಿಸಿದ್ದಾರೆ. ಥೆರೆಸಾ ತಂಗಿಯರು ಕೂಡ ಮಂಗಳೂರಿನಲ್ಲಿ ಸಿಸ್ಟರ್ ಆಗಿದ್ದು ಸೇವಾ ಕಾರ್ಯ ನಡೆಸುತ್ತಿದ್ದಾರೆ.
Convent Sister Theresa Crasta from Sisters of Charity Mangaluru has been Stranded in Kabul Afghan. It is said that sister Theresa had left Mangaluru three years back and went to Kabul. She has been working under a NGO to look after Mentally challenged children. Theresa hails from Bela, Kasaragod. The sister of charity are now desperately seeking help from Govt of India.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm