ಬ್ರೇಕಿಂಗ್ ನ್ಯೂಸ್
19-08-21 05:45 pm Richard, Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಅಫ್ಘಾನಿಸ್ತಾನದಲ್ಲಿ ಮಂಗಳೂರು ಮೂಲದ ಸಿಸ್ಟರ್ ಒಬ್ಬರು ಸಿಕ್ಕಿಬಿದ್ದಿದ್ದಾರೆ. ಮೂರು ವರ್ಷಗಳ ಹಿಂದೆ ಸಿಸ್ಟರ್ ಆಗಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳಲು ತೆರಳಿದ್ದ 50 ವರ್ಷದ ಸಿಸ್ಟರ್ ಥೆರೆಸಾ ಕ್ರಾಸ್ತಾ ಕಾಬೂಲಿನಲ್ಲಿ ಸಿಕ್ಕಿಬಿದ್ದಿದ್ದು, ಮರಳಿ ಬರಲಾಗದೆ ಒದ್ದಾಡುತ್ತಿದ್ದಾರೆ.
ಸಿಸ್ಟರ್ ಥೆರೆಸಾ ಕ್ರಾಸ್ತಾ, ಮೂರು ವರ್ಷಗಳ ಹಿಂದೆ ಇಟಲಿ ಮೂಲದ ಎನ್ ಜಿಓ ಸಂಸ್ಥೆಯೊಂದರಲ್ಲಿ ಸಿಸ್ಟರ್ ಆಗಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿಗೆ ತೆರಳಿದ್ದರು. ಮೂಲತಃ ಕಾಸರಗೋಡು ಜಿಲ್ಲೆಯ ಬೇಳ ನಿವಾಸಿಯಾಗಿರುವ ಥೆರೆಸಾ ಈ ಹಿಂದೆ ನೆಲ್ಯಾಡಿಯ ಕಾನ್ವೆಂಟ್ ಒಂದರಲ್ಲಿ ಸಿಸ್ಟರ್ ಆಗಿದ್ದರು. ಆನಂತರ ಜಪ್ಪು ನಲ್ಲಿರುವ ಪ್ರಶಾಂತ ನಿವಾಸ ಆಶ್ರಮದಲ್ಲಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದರು.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿಯಲ್ಲಿದ್ದ ಥೆರೆಸಾ ಅವರನ್ನು ಇಟಲಿಯ ಸೇವಾ ಸಂಸ್ಥೆಯು ಕರೆದ ಕಾರಣ ಮೂರು ವರ್ಷಗಳ ಹಿಂದೆ ಕಳಿಸಿಕೊಡಲಾಗಿತ್ತು. ಅವರಿಗೆ ಕಾಬೂಲಿನಲ್ಲಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳಲು ಜವಾಬ್ದಾರಿ ನೀಡಲಾಗಿತ್ತು. ಇತರ ಪಾಕಿಸ್ಥಾನಿ ಮೂಲದ ಸಿಸ್ಟರ್ ಗಳ ಜೊತೆ ಥೆರೆಸಾ ಅಲ್ಲಿದ್ದರು. ಆದರೆ, ಈಗ ತಾಲಿಬಾನಿಗಳು ಅಲ್ಲಿನ ಸರಕಾರವನ್ನು ಕಿತ್ತು ಅಧಿಕಾರಕ್ಕೇರುತ್ತಿದ್ದಂತೆ ಆತಂಕ ಮನೆಮಾಡಿದೆ.

ರಾಜಧಾನಿ ಕಾಬೂಲಿನ ಏರ್ಪೋರ್ಟ್ ಬಳಿಯಲ್ಲೇ ಸಿಸ್ಟರ್ ಥೆರೆಸಾ ಇದ್ದಾರೆ. ಆದರೆ, ಆಶ್ರಮದಿಂದ ಹೊರಗೆ ಬರುವಂತೆ ಇಲ್ಲ. ಹೊರಗೆ ಏನಾಗುತ್ತಿದೆ ಎಂದು ನೋಡುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ. 30 ಜನ ಅನಾಥ ಬುದ್ಧಿಮಾಂದ್ಯ ಮಕ್ಕಳ ರಕ್ಷಣೆ ಮತ್ತು ಪಾಲನೆಯ ಹೊಣೆ ಹೊತ್ತಿರುವ ಸಿಸ್ಟರ್ ಅಲ್ಲಿಂದ ಹೇಗೆ ಬರುವುದು ಎನ್ನುವ ಚಿಂತೆಯಲ್ಲಿದ್ದಾರೆ. ಥೆರೆಸಾ ಇರುವ ಕಟ್ಟಡದ ಹೊರಭಾಗದಲ್ಲಿ ಮಿಲಿಟರಿ ಸೆಕ್ಯುರಿಟಿ ಇದ್ದಾರೆ. ಹೀಗಾಗಿ ಹೊರಗೆ ಹೋಗುವುದು ಸಾಧ್ಯವಿಲ್ಲ. ಸದ್ಯಕ್ಕೆ ಸುರಕ್ಷಿತವಾಗಿರುವುದಾಗಿ ಮಂಗಳೂರಿನ ಸಿಸ್ಟರ್ಸ್ ಆಫ್ ಚಾರಿಟಿಯ ಉಸ್ತುವಾರಿಗೆ ಥೆರೆಸಾ ತಿಳಿಸಿದ್ದಾರೆ. ಥೆರೆಸಾ ತಂಗಿಯರು ಕೂಡ ಮಂಗಳೂರಿನಲ್ಲಿ ಸಿಸ್ಟರ್ ಆಗಿದ್ದು ಸೇವಾ ಕಾರ್ಯ ನಡೆಸುತ್ತಿದ್ದಾರೆ.
Convent Sister Theresa Crasta from Sisters of Charity Mangaluru has been Stranded in Kabul Afghan. It is said that sister Theresa had left Mangaluru three years back and went to Kabul. She has been working under a NGO to look after Mentally challenged children. Theresa hails from Bela, Kasaragod. The sister of charity are now desperately seeking help from Govt of India.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 07:56 pm
HK News Staffer
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am