ಬ್ರೇಕಿಂಗ್ ನ್ಯೂಸ್
21-08-21 01:19 pm Mangaluru Correspondent ಕರಾವಳಿ
ಕತಾರ್, ದೋಹಾ, ಆಗಸ್ಟ್ 21: ಇತ್ತೀಚೆಗೆ ಕತಾರ್ ವಿಶ್ವವಿದ್ಯಾಲಯದಿಂದ ಭಾರತೀಯ ಮೂಲದ ಮಹಿಳೆ, ಹರ್ಷಿತಾ ಶೈಲೇಶ್ ಅವರು ಗೌರವಾನ್ವಿತ ಪಿಎಚ್ಡಿ ಪದವಿ ಪಡೆದಿದ್ದಾರೆ. “Role of Protein Arginine Methyltransferase5 (PRMT5) in WNT/β-CATENIN" ಎಂಬ ಸ್ತನ ಕಾನ್ಸರ್ ಪ್ರಸರಣ ಸಂಕೇತಕ್ಕೆ ಸಂಬಂಧಪಟ್ಟ ಮಹಾ ಪ್ರಬಂಧಕ್ಕೆ ಈ ಗೌರವ ಸಂದಿದೆ.

ಕತಾರ್ ವಿಶ್ವವಿದ್ಯಾಲಯದ ಜೈವಿಕ ಮತ್ತು ಪರಿಸರ ವಿಜ್ಞಾನದ ವಿಭಾಗಸ್ಥ ಪ್ರೊಫೆಸರ್ ಸಯೀದ್ ಸಿಫ್ ಅವರು ಮಾರ್ಗದರ್ಶನ ನೀಡಿರುತ್ತಾರೆ. ಈ ಮೊದಲು 2020 ರ ಪದವಿ ಸಮಾರಂಭದಲ್ಲಿ ಹರ್ಷಿತಾ ಅವರು ಕತಾರ್ ಎಮಿರ್ ಶೇಖ್ ತಮೀಮ್ ಹಮದ್ ಬಿನ್ ಅಲ್ಥಾನಿಯವರ ಪತ್ನಿ ಹರ್ ಹೈನೆಸ್ ಶೇಖಾ ಜವಾಹರ್ ಬಿಂಟ್ ಹಮಾದ್ ಬಿನ್ ಸುಹೈಮ್ ಅಲ್ಥಾನಿ ಅವರಿಂದ ಚಿನ್ನದ ಪದಕವನ್ನು ಪಡೆದು ಶ್ರೇಷ್ಠ ಮಹಿಳಾ ಪದವಿ ವಿದ್ಯಾರ್ಥಿಯಾಗಿ ಹೊರಹೊಮ್ಮಿದ್ದರು.
ಹರ್ಷಿತಾ, ಕರ್ನಾಟಕ ರಾಜ್ಯದ ಕಾರ್ಕಳದ ತಾಲೂಕಿನ ಸಣ್ಣ ಪಟ್ಟಣದಿಂದ ಬಂದವರು. ಬಾಲ್ಯದಿಂದಲೇ ಅತ್ಯುತ್ತಮ ಸಾಧಕಿಯಾಗಿದ್ದ ಆಕೆ ತನ್ನ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ವಿಜೇತೆ. ಮಂಗಳೂರಿನ ವಿಶ್ವವಿದ್ಯಾನಿಲಯದಿಂದ ಬಯೋಟೆಕ್ನಾಲಜಿಯಲ್ಲಿ ಅತ್ಯುನ್ನತ ಅಂಕ ಗಳಿಸಿದ್ದರು. ನಂತರ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು. ಆಬಳಿಕ ಕತಾರ್ ವಿಶ್ವವಿದ್ಯಾಲಯಕ್ಕೆ ಸೇರಿದ್ದು ಪಿಎಚ್ಡಿ ಮುಗಿಸಿದ್ದಾರೆ.

ಪಿಎಚ್ಡಿ ಆಕ್ರಮಣಕಾರಿ ಸ್ತನ ಕ್ಯಾನ್ಸರ್ ಕೋಶಗಳ ಪ್ರಸರಣ ಮತ್ತು ಬೆಳವಣಿಗೆಯಲ್ಲಿ ಪಿಆರ್ಎಂಟಿ 5 ಪ್ರಮುಖ ಎಪಿಜೆನೆಟಿಕ್ ಕಿಣ್ವದ ಪಾತ್ರವನ್ನು ಅರ್ಥ ಮಾಡಿಕೊಳ್ಳಲು ಅಧ್ಯಯನವು ಕೇಂದ್ರೀಕರಿಸಿದೆ. ಅವರ ವ್ಯವಸ್ಥಿತ ಅಧ್ಯಯನವು PRMT5 ಅಭಿವ್ಯಕ್ತಿಯು ಆಕ್ರಮಣಕಾರಿ ಸ್ತನ ಕ್ಯಾನ್ಸರ್ಗಳ ಪೈಕಿ ಹೆಚ್ಚಿದೆ ಎಂದು ತೋರಿಸಿದೆ. ಅಧ್ಯಯನದಿಂದ ಕಂಡುಕೊಂಡ ಅಂಶಗಳು ವಿಶ್ವದಾದ್ಯಂತ ಆಕ್ರಮಣಕಾರಿ ಸ್ತನ ಕ್ಯಾನ್ಸರ್ನಿಂದ ಬಳಲುತ್ತಿರುವ ಜನರಿಗೆ ಒಂದು ಪರಿಣಾಮಕಾರಿ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲು ಪ್ರಮುಖ ಅಡಿಪಾಯವಾಗಿದೆ. ಇವರ ಸಂಶೋಧನಾ ಪ್ರಬಂಧ ಜಾಗತಿಕ ಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.
Harshitha from karkala gets Phd by Qatar University in Qatar.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am