ಬ್ರೇಕಿಂಗ್ ನ್ಯೂಸ್
21-08-21 01:19 pm Mangaluru Correspondent ಕರಾವಳಿ
ಕತಾರ್, ದೋಹಾ, ಆಗಸ್ಟ್ 21: ಇತ್ತೀಚೆಗೆ ಕತಾರ್ ವಿಶ್ವವಿದ್ಯಾಲಯದಿಂದ ಭಾರತೀಯ ಮೂಲದ ಮಹಿಳೆ, ಹರ್ಷಿತಾ ಶೈಲೇಶ್ ಅವರು ಗೌರವಾನ್ವಿತ ಪಿಎಚ್ಡಿ ಪದವಿ ಪಡೆದಿದ್ದಾರೆ. “Role of Protein Arginine Methyltransferase5 (PRMT5) in WNT/β-CATENIN" ಎಂಬ ಸ್ತನ ಕಾನ್ಸರ್ ಪ್ರಸರಣ ಸಂಕೇತಕ್ಕೆ ಸಂಬಂಧಪಟ್ಟ ಮಹಾ ಪ್ರಬಂಧಕ್ಕೆ ಈ ಗೌರವ ಸಂದಿದೆ.

ಕತಾರ್ ವಿಶ್ವವಿದ್ಯಾಲಯದ ಜೈವಿಕ ಮತ್ತು ಪರಿಸರ ವಿಜ್ಞಾನದ ವಿಭಾಗಸ್ಥ ಪ್ರೊಫೆಸರ್ ಸಯೀದ್ ಸಿಫ್ ಅವರು ಮಾರ್ಗದರ್ಶನ ನೀಡಿರುತ್ತಾರೆ. ಈ ಮೊದಲು 2020 ರ ಪದವಿ ಸಮಾರಂಭದಲ್ಲಿ ಹರ್ಷಿತಾ ಅವರು ಕತಾರ್ ಎಮಿರ್ ಶೇಖ್ ತಮೀಮ್ ಹಮದ್ ಬಿನ್ ಅಲ್ಥಾನಿಯವರ ಪತ್ನಿ ಹರ್ ಹೈನೆಸ್ ಶೇಖಾ ಜವಾಹರ್ ಬಿಂಟ್ ಹಮಾದ್ ಬಿನ್ ಸುಹೈಮ್ ಅಲ್ಥಾನಿ ಅವರಿಂದ ಚಿನ್ನದ ಪದಕವನ್ನು ಪಡೆದು ಶ್ರೇಷ್ಠ ಮಹಿಳಾ ಪದವಿ ವಿದ್ಯಾರ್ಥಿಯಾಗಿ ಹೊರಹೊಮ್ಮಿದ್ದರು.
ಹರ್ಷಿತಾ, ಕರ್ನಾಟಕ ರಾಜ್ಯದ ಕಾರ್ಕಳದ ತಾಲೂಕಿನ ಸಣ್ಣ ಪಟ್ಟಣದಿಂದ ಬಂದವರು. ಬಾಲ್ಯದಿಂದಲೇ ಅತ್ಯುತ್ತಮ ಸಾಧಕಿಯಾಗಿದ್ದ ಆಕೆ ತನ್ನ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ವಿಜೇತೆ. ಮಂಗಳೂರಿನ ವಿಶ್ವವಿದ್ಯಾನಿಲಯದಿಂದ ಬಯೋಟೆಕ್ನಾಲಜಿಯಲ್ಲಿ ಅತ್ಯುನ್ನತ ಅಂಕ ಗಳಿಸಿದ್ದರು. ನಂತರ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು. ಆಬಳಿಕ ಕತಾರ್ ವಿಶ್ವವಿದ್ಯಾಲಯಕ್ಕೆ ಸೇರಿದ್ದು ಪಿಎಚ್ಡಿ ಮುಗಿಸಿದ್ದಾರೆ.

ಪಿಎಚ್ಡಿ ಆಕ್ರಮಣಕಾರಿ ಸ್ತನ ಕ್ಯಾನ್ಸರ್ ಕೋಶಗಳ ಪ್ರಸರಣ ಮತ್ತು ಬೆಳವಣಿಗೆಯಲ್ಲಿ ಪಿಆರ್ಎಂಟಿ 5 ಪ್ರಮುಖ ಎಪಿಜೆನೆಟಿಕ್ ಕಿಣ್ವದ ಪಾತ್ರವನ್ನು ಅರ್ಥ ಮಾಡಿಕೊಳ್ಳಲು ಅಧ್ಯಯನವು ಕೇಂದ್ರೀಕರಿಸಿದೆ. ಅವರ ವ್ಯವಸ್ಥಿತ ಅಧ್ಯಯನವು PRMT5 ಅಭಿವ್ಯಕ್ತಿಯು ಆಕ್ರಮಣಕಾರಿ ಸ್ತನ ಕ್ಯಾನ್ಸರ್ಗಳ ಪೈಕಿ ಹೆಚ್ಚಿದೆ ಎಂದು ತೋರಿಸಿದೆ. ಅಧ್ಯಯನದಿಂದ ಕಂಡುಕೊಂಡ ಅಂಶಗಳು ವಿಶ್ವದಾದ್ಯಂತ ಆಕ್ರಮಣಕಾರಿ ಸ್ತನ ಕ್ಯಾನ್ಸರ್ನಿಂದ ಬಳಲುತ್ತಿರುವ ಜನರಿಗೆ ಒಂದು ಪರಿಣಾಮಕಾರಿ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲು ಪ್ರಮುಖ ಅಡಿಪಾಯವಾಗಿದೆ. ಇವರ ಸಂಶೋಧನಾ ಪ್ರಬಂಧ ಜಾಗತಿಕ ಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.
Harshitha from karkala gets Phd by Qatar University in Qatar.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm