ಬ್ರೇಕಿಂಗ್ ನ್ಯೂಸ್
22-08-21 10:40 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದಿದ್ದ ಮತ್ತೆ ಐದು ಮಂದಿ ಮಂಗಳೂರು ಮೂಲದ ನಿವಾಸಿಗಳು ಭಾರತದ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಬಂದಿದ್ದಾರೆ.
ವಾಯುಪಡೆ ವಿಮಾನದಲ್ಲಿ ಭಾರತ ಮೂಲದ ನೂರಾರು ನಿವಾಸಿಗಳನ್ನು ಕಾಬೂಲಿನಿಂದ ತಜಕಿಸ್ತಾನಕ್ಕೆ ಒಯ್ಯಲಾಗಿತ್ತು. ತಜಕಿಸ್ತಾನ ಭಾರತದ ಮಿತ್ರರಾಷ್ಟ್ರ ಆಗಿರುವುದರಿಂದ ಕಾಬೂಲಿನಿಂದ ಹತ್ತಿರ ಇರುವ ತಜಕಿಸ್ತಾನಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಕಾಬೂಲ್ ಏರ್ಪೋರ್ಟ್ ನಲ್ಲಿ ವಿವಿಧ ದೇಶಗಳ ವಿಮಾನಗಳು ತಮ್ಮ ನಿವಾಸಿಗಳನ್ನು ಒಯ್ಯಲು ಸರದಿಯಂತೆ ಸಾಲು ಗಟ್ಟಿರುವುದರಿಂದ ದೊಡ್ಡ ಗಾತ್ರದ ವಿಮಾನಗಳು ಇಳಿಯಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ.
ಸದ್ಯ ಕೆಲವು ಅಫ್ಘನ್ ನಿವಾಸಿಗಳು ಸೇರಿದಂತೆ 150 ಕ್ಕೂ ಹೆಚ್ಚು ಮಂದಿಯನ್ನು ಭಾರತೀಯ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಕರೆತರಲಾಗಿದೆ. ಅದರಲ್ಲಿ ಮಂಗಳೂರಿನ ಐದು ಮಂದಿ ಇದ್ದಾರೆಂದು ವಿಮಾನ ಯಾನ ಸಚಿವಾಲಯ ದೃಢಪಡಿಸಿದೆ. ಇದನ್ನು ಮಂಗಳೂರು ಪೊಲೀಸರು ಕೂಡ ಖಚಿಪಡಿಸಿದ್ದಾರೆ.
ಮೂಡುಬಿದ್ರೆ ನಿವಾಸಿ ಜಗದೀಶ ಪೂಜಾರಿ, ದಿನೇಶ್ ರೈ ಬಜ್ಪೆ, ತೊಕ್ಕೊಟ್ಟಿನ ಪ್ರಸಾದ್ ಆನಂದ್, ಕಿನ್ನಿಗೋಳಿಯ ಡೆಸ್ಮಂಡ್ ಡೇವಿಡ್ ಡಿಸೋಜ, ಮಂಗಳೂರು ಉರ್ವಾ ನಿವಾಸಿ ಶ್ರವಣ್ ಅಂಚನ್ ಈಗ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರು ಬೆಂಗಳೂರು ಮೂಲಕ ಮಂಗಳೂರಿಗೆ ಬರಲಿದ್ದಾರೆ. ಇವರ ಜೊತೆಗೆ ಒಬ್ಬ ಬೆಂಗಳೂರು ನಿವಾಸಿ ಹಿರೇಕ್ ದೇಬನಾಥ್, ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿ ತನ್ವೀನ್ ಅಬ್ದುಲ್ ಕೂಡ ಅಫ್ಘಾನಿಸ್ತಾನದಿಂದ ಬಂದಿದ್ದಾರೆ.
ಮಂಗಳೂರು ಮೂಲದ ಜೆರೋಮ್ ಸಿಕ್ವೇರಾ ಮತ್ತು ಚಿಕ್ಕಮಗಳೂರಿನ ಎನ್.ಆರ್. ಪುರದ ಫಾದರ್ ರಾಬರ್ಟ್ ಕ್ಲೈವ್ ಕಾಬೂಲ್ ಏರ್ಪೋರ್ಟ್ ನಲ್ಲಿ ಸುರಕ್ಷಿತವಾಗಿದ್ದಾರೆ. ಅವರನ್ನು ಕರೆತರುವ ಕೆಲಸ ಆಗುತ್ತಿದೆ ಎಂದು ವಿದೇಶಾಂಗ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.
Five Mangaloreans stranded in Afghan Kabul rescued reach Delhi Airport
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am