ಬ್ರೇಕಿಂಗ್ ನ್ಯೂಸ್
22-08-21 10:40 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದಿದ್ದ ಮತ್ತೆ ಐದು ಮಂದಿ ಮಂಗಳೂರು ಮೂಲದ ನಿವಾಸಿಗಳು ಭಾರತದ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಬಂದಿದ್ದಾರೆ.
ವಾಯುಪಡೆ ವಿಮಾನದಲ್ಲಿ ಭಾರತ ಮೂಲದ ನೂರಾರು ನಿವಾಸಿಗಳನ್ನು ಕಾಬೂಲಿನಿಂದ ತಜಕಿಸ್ತಾನಕ್ಕೆ ಒಯ್ಯಲಾಗಿತ್ತು. ತಜಕಿಸ್ತಾನ ಭಾರತದ ಮಿತ್ರರಾಷ್ಟ್ರ ಆಗಿರುವುದರಿಂದ ಕಾಬೂಲಿನಿಂದ ಹತ್ತಿರ ಇರುವ ತಜಕಿಸ್ತಾನಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಕಾಬೂಲ್ ಏರ್ಪೋರ್ಟ್ ನಲ್ಲಿ ವಿವಿಧ ದೇಶಗಳ ವಿಮಾನಗಳು ತಮ್ಮ ನಿವಾಸಿಗಳನ್ನು ಒಯ್ಯಲು ಸರದಿಯಂತೆ ಸಾಲು ಗಟ್ಟಿರುವುದರಿಂದ ದೊಡ್ಡ ಗಾತ್ರದ ವಿಮಾನಗಳು ಇಳಿಯಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ.
ಸದ್ಯ ಕೆಲವು ಅಫ್ಘನ್ ನಿವಾಸಿಗಳು ಸೇರಿದಂತೆ 150 ಕ್ಕೂ ಹೆಚ್ಚು ಮಂದಿಯನ್ನು ಭಾರತೀಯ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಕರೆತರಲಾಗಿದೆ. ಅದರಲ್ಲಿ ಮಂಗಳೂರಿನ ಐದು ಮಂದಿ ಇದ್ದಾರೆಂದು ವಿಮಾನ ಯಾನ ಸಚಿವಾಲಯ ದೃಢಪಡಿಸಿದೆ. ಇದನ್ನು ಮಂಗಳೂರು ಪೊಲೀಸರು ಕೂಡ ಖಚಿಪಡಿಸಿದ್ದಾರೆ.
ಮೂಡುಬಿದ್ರೆ ನಿವಾಸಿ ಜಗದೀಶ ಪೂಜಾರಿ, ದಿನೇಶ್ ರೈ ಬಜ್ಪೆ, ತೊಕ್ಕೊಟ್ಟಿನ ಪ್ರಸಾದ್ ಆನಂದ್, ಕಿನ್ನಿಗೋಳಿಯ ಡೆಸ್ಮಂಡ್ ಡೇವಿಡ್ ಡಿಸೋಜ, ಮಂಗಳೂರು ಉರ್ವಾ ನಿವಾಸಿ ಶ್ರವಣ್ ಅಂಚನ್ ಈಗ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರು ಬೆಂಗಳೂರು ಮೂಲಕ ಮಂಗಳೂರಿಗೆ ಬರಲಿದ್ದಾರೆ. ಇವರ ಜೊತೆಗೆ ಒಬ್ಬ ಬೆಂಗಳೂರು ನಿವಾಸಿ ಹಿರೇಕ್ ದೇಬನಾಥ್, ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿ ತನ್ವೀನ್ ಅಬ್ದುಲ್ ಕೂಡ ಅಫ್ಘಾನಿಸ್ತಾನದಿಂದ ಬಂದಿದ್ದಾರೆ.
ಮಂಗಳೂರು ಮೂಲದ ಜೆರೋಮ್ ಸಿಕ್ವೇರಾ ಮತ್ತು ಚಿಕ್ಕಮಗಳೂರಿನ ಎನ್.ಆರ್. ಪುರದ ಫಾದರ್ ರಾಬರ್ಟ್ ಕ್ಲೈವ್ ಕಾಬೂಲ್ ಏರ್ಪೋರ್ಟ್ ನಲ್ಲಿ ಸುರಕ್ಷಿತವಾಗಿದ್ದಾರೆ. ಅವರನ್ನು ಕರೆತರುವ ಕೆಲಸ ಆಗುತ್ತಿದೆ ಎಂದು ವಿದೇಶಾಂಗ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.
Five Mangaloreans stranded in Afghan Kabul rescued reach Delhi Airport
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 08:36 pm
HK News Staffer
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm