ಬ್ರೇಕಿಂಗ್ ನ್ಯೂಸ್
23-08-21 03:24 pm Mangaluru Correspondent ಕರಾವಳಿ
ಉಳ್ಳಾಲ, ಆ.23: ಕರ್ನಾಟಕ ಸರ್ಕಾರ ಗಡಿ ಬಂದ್ ಮಾಡಿರುವುದನ್ನು ವಿರೋಧಿಸಿ ಕೇರಳ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ವತಿಯಿಂದ ತಲಪಾಡಿ ಗಡಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದುಮ ಶಾಸಕ ಸಿ.ಎಚ್.ಕುಞಂಬು, ಕೊರೋನಾ ಹೆಸರಿನಲ್ಲಿ ಕರ್ನಾಟಕ ಬಿಜೆಪಿ ಸರ್ಕಾರ ಗಡಿ ಬಂದ್ ಮಾಡಿ ಗಡಿನಾಡ ಕೇರಳಿಗರಿಗೆ ತೊಂದರೆ ಮಾಡುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ , ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಚುನಾವಣೆ ಸಂದರ್ಭದಲ್ಲಿ ಕೇರಳ ಭೇಟಿ ನೀಡಿ ಗಡಿನಾಡಿನ ಕೇರಳಿಗರಿಗೆ ಪೂರ್ಣ ಬೆಂಬಲ, ಸಹಕಾರ ತಮ್ಮಿಂದ ಇದೆ ಎಂದು ಹೇಳಿದ್ದರು.
ಆದರೆ ಅವರು ಹೇಳಿದ ಮಾತುಗಳನ್ನು ಉಳಿಸಲು ಅವರಿಗೆ ಆಗಲಿಲ್ಲ. ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಆಗಲಿಲ್ಲ ಎಂಬ ಕಾರಣದಿಂದ ಕೇರಳಿಗರಿಗೆ ತೊಂದರೆ ಕೊಡಲು ಹೊರಟಿದ್ದು ನ್ಯಾಯೋಚಿತವಲ್ಲ. ಪ್ರತಿ ವಿಚಾರಗಳಿಗೂ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ಕೇರಳ ಬಿಜೆಪಿಗರು ಈಗ ಮೌನ ಆಗಿದ್ದಾರೆ. ಭರವಸೆ ಮಾತು ನೀಡಿ ಅನ್ಯಾಯ ಮಾಡುವ ಕಟೀಲ್ ರಂತಹ ಸಂಸದರು ಆಡಳಿತ ನಡೆಸಲು ಯೋಗ್ಯರಲ್ಲ. ಗಡಿ ಬಂದ್ ಮಾಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಬಂದ್ ಮಾಡಲೇಬೇಕು ಎಂದಿದ್ದರೆ ಕೇಂದ್ರಕ್ಕೆ ಬಂದ್ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.
ಸಿಪಿಐಎಂ ಮುಖಂಡ ದಯಾನಂದ್, ಶಂಕರ್ ರೈ ಮಾಸ್ಟರ್ ಮಾತನಾಡಿದರು. ಸಿಪಿಐಎಂ ಮಂಜೇಶ್ವರ ಏರಿಯಾ ಮುಖಂಡ ಅರವಿಂದ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ, ಪೈವಳಿಕೆ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಬೂಬಾ ಡಿ., ಕಮಲಾಕ್ಷ, ನವೀನ್, ರವೀಂದ್ರ ಶೆಟ್ಟಿ, ಅಬ್ದುಲ್ ರಜಾಕ್, ಸುಬ್ಬಣ್ಣ ಆಳ್ವ, ಸಮಿತಿ ಸದಸ್ಯ ಅರವಿಂದ್ ಮೊದಲಾದವರು ಇದ್ದರು.
Talpady border issue CPIM protest blocking highway Demanding the Karnataka state govt to freely allow people of Kerala who has got one dose of vaccine.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm