ಬ್ರೇಕಿಂಗ್ ನ್ಯೂಸ್
23-08-21 03:24 pm Mangaluru Correspondent ಕರಾವಳಿ
ಉಳ್ಳಾಲ, ಆ.23: ಕರ್ನಾಟಕ ಸರ್ಕಾರ ಗಡಿ ಬಂದ್ ಮಾಡಿರುವುದನ್ನು ವಿರೋಧಿಸಿ ಕೇರಳ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ವತಿಯಿಂದ ತಲಪಾಡಿ ಗಡಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದುಮ ಶಾಸಕ ಸಿ.ಎಚ್.ಕುಞಂಬು, ಕೊರೋನಾ ಹೆಸರಿನಲ್ಲಿ ಕರ್ನಾಟಕ ಬಿಜೆಪಿ ಸರ್ಕಾರ ಗಡಿ ಬಂದ್ ಮಾಡಿ ಗಡಿನಾಡ ಕೇರಳಿಗರಿಗೆ ತೊಂದರೆ ಮಾಡುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ , ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಚುನಾವಣೆ ಸಂದರ್ಭದಲ್ಲಿ ಕೇರಳ ಭೇಟಿ ನೀಡಿ ಗಡಿನಾಡಿನ ಕೇರಳಿಗರಿಗೆ ಪೂರ್ಣ ಬೆಂಬಲ, ಸಹಕಾರ ತಮ್ಮಿಂದ ಇದೆ ಎಂದು ಹೇಳಿದ್ದರು.
ಆದರೆ ಅವರು ಹೇಳಿದ ಮಾತುಗಳನ್ನು ಉಳಿಸಲು ಅವರಿಗೆ ಆಗಲಿಲ್ಲ. ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಆಗಲಿಲ್ಲ ಎಂಬ ಕಾರಣದಿಂದ ಕೇರಳಿಗರಿಗೆ ತೊಂದರೆ ಕೊಡಲು ಹೊರಟಿದ್ದು ನ್ಯಾಯೋಚಿತವಲ್ಲ. ಪ್ರತಿ ವಿಚಾರಗಳಿಗೂ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ಕೇರಳ ಬಿಜೆಪಿಗರು ಈಗ ಮೌನ ಆಗಿದ್ದಾರೆ. ಭರವಸೆ ಮಾತು ನೀಡಿ ಅನ್ಯಾಯ ಮಾಡುವ ಕಟೀಲ್ ರಂತಹ ಸಂಸದರು ಆಡಳಿತ ನಡೆಸಲು ಯೋಗ್ಯರಲ್ಲ. ಗಡಿ ಬಂದ್ ಮಾಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಬಂದ್ ಮಾಡಲೇಬೇಕು ಎಂದಿದ್ದರೆ ಕೇಂದ್ರಕ್ಕೆ ಬಂದ್ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.
ಸಿಪಿಐಎಂ ಮುಖಂಡ ದಯಾನಂದ್, ಶಂಕರ್ ರೈ ಮಾಸ್ಟರ್ ಮಾತನಾಡಿದರು. ಸಿಪಿಐಎಂ ಮಂಜೇಶ್ವರ ಏರಿಯಾ ಮುಖಂಡ ಅರವಿಂದ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ, ಪೈವಳಿಕೆ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಬೂಬಾ ಡಿ., ಕಮಲಾಕ್ಷ, ನವೀನ್, ರವೀಂದ್ರ ಶೆಟ್ಟಿ, ಅಬ್ದುಲ್ ರಜಾಕ್, ಸುಬ್ಬಣ್ಣ ಆಳ್ವ, ಸಮಿತಿ ಸದಸ್ಯ ಅರವಿಂದ್ ಮೊದಲಾದವರು ಇದ್ದರು.
Talpady border issue CPIM protest blocking highway Demanding the Karnataka state govt to freely allow people of Kerala who has got one dose of vaccine.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm