ಬ್ರೇಕಿಂಗ್ ನ್ಯೂಸ್
23-08-21 03:24 pm Mangaluru Correspondent ಕರಾವಳಿ
ಉಳ್ಳಾಲ, ಆ.23: ಕರ್ನಾಟಕ ಸರ್ಕಾರ ಗಡಿ ಬಂದ್ ಮಾಡಿರುವುದನ್ನು ವಿರೋಧಿಸಿ ಕೇರಳ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ವತಿಯಿಂದ ತಲಪಾಡಿ ಗಡಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದುಮ ಶಾಸಕ ಸಿ.ಎಚ್.ಕುಞಂಬು, ಕೊರೋನಾ ಹೆಸರಿನಲ್ಲಿ ಕರ್ನಾಟಕ ಬಿಜೆಪಿ ಸರ್ಕಾರ ಗಡಿ ಬಂದ್ ಮಾಡಿ ಗಡಿನಾಡ ಕೇರಳಿಗರಿಗೆ ತೊಂದರೆ ಮಾಡುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ , ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಚುನಾವಣೆ ಸಂದರ್ಭದಲ್ಲಿ ಕೇರಳ ಭೇಟಿ ನೀಡಿ ಗಡಿನಾಡಿನ ಕೇರಳಿಗರಿಗೆ ಪೂರ್ಣ ಬೆಂಬಲ, ಸಹಕಾರ ತಮ್ಮಿಂದ ಇದೆ ಎಂದು ಹೇಳಿದ್ದರು.
ಆದರೆ ಅವರು ಹೇಳಿದ ಮಾತುಗಳನ್ನು ಉಳಿಸಲು ಅವರಿಗೆ ಆಗಲಿಲ್ಲ. ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಆಗಲಿಲ್ಲ ಎಂಬ ಕಾರಣದಿಂದ ಕೇರಳಿಗರಿಗೆ ತೊಂದರೆ ಕೊಡಲು ಹೊರಟಿದ್ದು ನ್ಯಾಯೋಚಿತವಲ್ಲ. ಪ್ರತಿ ವಿಚಾರಗಳಿಗೂ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ಕೇರಳ ಬಿಜೆಪಿಗರು ಈಗ ಮೌನ ಆಗಿದ್ದಾರೆ. ಭರವಸೆ ಮಾತು ನೀಡಿ ಅನ್ಯಾಯ ಮಾಡುವ ಕಟೀಲ್ ರಂತಹ ಸಂಸದರು ಆಡಳಿತ ನಡೆಸಲು ಯೋಗ್ಯರಲ್ಲ. ಗಡಿ ಬಂದ್ ಮಾಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಬಂದ್ ಮಾಡಲೇಬೇಕು ಎಂದಿದ್ದರೆ ಕೇಂದ್ರಕ್ಕೆ ಬಂದ್ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.




ಸಿಪಿಐಎಂ ಮುಖಂಡ ದಯಾನಂದ್, ಶಂಕರ್ ರೈ ಮಾಸ್ಟರ್ ಮಾತನಾಡಿದರು. ಸಿಪಿಐಎಂ ಮಂಜೇಶ್ವರ ಏರಿಯಾ ಮುಖಂಡ ಅರವಿಂದ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ, ಪೈವಳಿಕೆ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಬೂಬಾ ಡಿ., ಕಮಲಾಕ್ಷ, ನವೀನ್, ರವೀಂದ್ರ ಶೆಟ್ಟಿ, ಅಬ್ದುಲ್ ರಜಾಕ್, ಸುಬ್ಬಣ್ಣ ಆಳ್ವ, ಸಮಿತಿ ಸದಸ್ಯ ಅರವಿಂದ್ ಮೊದಲಾದವರು ಇದ್ದರು.
Talpady border issue CPIM protest blocking highway Demanding the Karnataka state govt to freely allow people of Kerala who has got one dose of vaccine.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am