ಬ್ರೇಕಿಂಗ್ ನ್ಯೂಸ್
23-08-21 03:24 pm Mangaluru Correspondent ಕರಾವಳಿ
ಉಳ್ಳಾಲ, ಆ.23: ಕರ್ನಾಟಕ ಸರ್ಕಾರ ಗಡಿ ಬಂದ್ ಮಾಡಿರುವುದನ್ನು ವಿರೋಧಿಸಿ ಕೇರಳ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ವತಿಯಿಂದ ತಲಪಾಡಿ ಗಡಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದುಮ ಶಾಸಕ ಸಿ.ಎಚ್.ಕುಞಂಬು, ಕೊರೋನಾ ಹೆಸರಿನಲ್ಲಿ ಕರ್ನಾಟಕ ಬಿಜೆಪಿ ಸರ್ಕಾರ ಗಡಿ ಬಂದ್ ಮಾಡಿ ಗಡಿನಾಡ ಕೇರಳಿಗರಿಗೆ ತೊಂದರೆ ಮಾಡುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ , ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಚುನಾವಣೆ ಸಂದರ್ಭದಲ್ಲಿ ಕೇರಳ ಭೇಟಿ ನೀಡಿ ಗಡಿನಾಡಿನ ಕೇರಳಿಗರಿಗೆ ಪೂರ್ಣ ಬೆಂಬಲ, ಸಹಕಾರ ತಮ್ಮಿಂದ ಇದೆ ಎಂದು ಹೇಳಿದ್ದರು.
ಆದರೆ ಅವರು ಹೇಳಿದ ಮಾತುಗಳನ್ನು ಉಳಿಸಲು ಅವರಿಗೆ ಆಗಲಿಲ್ಲ. ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಆಗಲಿಲ್ಲ ಎಂಬ ಕಾರಣದಿಂದ ಕೇರಳಿಗರಿಗೆ ತೊಂದರೆ ಕೊಡಲು ಹೊರಟಿದ್ದು ನ್ಯಾಯೋಚಿತವಲ್ಲ. ಪ್ರತಿ ವಿಚಾರಗಳಿಗೂ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ಕೇರಳ ಬಿಜೆಪಿಗರು ಈಗ ಮೌನ ಆಗಿದ್ದಾರೆ. ಭರವಸೆ ಮಾತು ನೀಡಿ ಅನ್ಯಾಯ ಮಾಡುವ ಕಟೀಲ್ ರಂತಹ ಸಂಸದರು ಆಡಳಿತ ನಡೆಸಲು ಯೋಗ್ಯರಲ್ಲ. ಗಡಿ ಬಂದ್ ಮಾಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಬಂದ್ ಮಾಡಲೇಬೇಕು ಎಂದಿದ್ದರೆ ಕೇಂದ್ರಕ್ಕೆ ಬಂದ್ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.




ಸಿಪಿಐಎಂ ಮುಖಂಡ ದಯಾನಂದ್, ಶಂಕರ್ ರೈ ಮಾಸ್ಟರ್ ಮಾತನಾಡಿದರು. ಸಿಪಿಐಎಂ ಮಂಜೇಶ್ವರ ಏರಿಯಾ ಮುಖಂಡ ಅರವಿಂದ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ, ಪೈವಳಿಕೆ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಬೂಬಾ ಡಿ., ಕಮಲಾಕ್ಷ, ನವೀನ್, ರವೀಂದ್ರ ಶೆಟ್ಟಿ, ಅಬ್ದುಲ್ ರಜಾಕ್, ಸುಬ್ಬಣ್ಣ ಆಳ್ವ, ಸಮಿತಿ ಸದಸ್ಯ ಅರವಿಂದ್ ಮೊದಲಾದವರು ಇದ್ದರು.
Talpady border issue CPIM protest blocking highway Demanding the Karnataka state govt to freely allow people of Kerala who has got one dose of vaccine.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm