ಬ್ರೇಕಿಂಗ್ ನ್ಯೂಸ್
23-08-21 03:24 pm Mangaluru Correspondent ಕರಾವಳಿ
ಉಳ್ಳಾಲ, ಆ.23: ಕರ್ನಾಟಕ ಸರ್ಕಾರ ಗಡಿ ಬಂದ್ ಮಾಡಿರುವುದನ್ನು ವಿರೋಧಿಸಿ ಕೇರಳ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ವತಿಯಿಂದ ತಲಪಾಡಿ ಗಡಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದುಮ ಶಾಸಕ ಸಿ.ಎಚ್.ಕುಞಂಬು, ಕೊರೋನಾ ಹೆಸರಿನಲ್ಲಿ ಕರ್ನಾಟಕ ಬಿಜೆಪಿ ಸರ್ಕಾರ ಗಡಿ ಬಂದ್ ಮಾಡಿ ಗಡಿನಾಡ ಕೇರಳಿಗರಿಗೆ ತೊಂದರೆ ಮಾಡುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ , ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಚುನಾವಣೆ ಸಂದರ್ಭದಲ್ಲಿ ಕೇರಳ ಭೇಟಿ ನೀಡಿ ಗಡಿನಾಡಿನ ಕೇರಳಿಗರಿಗೆ ಪೂರ್ಣ ಬೆಂಬಲ, ಸಹಕಾರ ತಮ್ಮಿಂದ ಇದೆ ಎಂದು ಹೇಳಿದ್ದರು.
ಆದರೆ ಅವರು ಹೇಳಿದ ಮಾತುಗಳನ್ನು ಉಳಿಸಲು ಅವರಿಗೆ ಆಗಲಿಲ್ಲ. ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಆಗಲಿಲ್ಲ ಎಂಬ ಕಾರಣದಿಂದ ಕೇರಳಿಗರಿಗೆ ತೊಂದರೆ ಕೊಡಲು ಹೊರಟಿದ್ದು ನ್ಯಾಯೋಚಿತವಲ್ಲ. ಪ್ರತಿ ವಿಚಾರಗಳಿಗೂ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ಕೇರಳ ಬಿಜೆಪಿಗರು ಈಗ ಮೌನ ಆಗಿದ್ದಾರೆ. ಭರವಸೆ ಮಾತು ನೀಡಿ ಅನ್ಯಾಯ ಮಾಡುವ ಕಟೀಲ್ ರಂತಹ ಸಂಸದರು ಆಡಳಿತ ನಡೆಸಲು ಯೋಗ್ಯರಲ್ಲ. ಗಡಿ ಬಂದ್ ಮಾಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಬಂದ್ ಮಾಡಲೇಬೇಕು ಎಂದಿದ್ದರೆ ಕೇಂದ್ರಕ್ಕೆ ಬಂದ್ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.




ಸಿಪಿಐಎಂ ಮುಖಂಡ ದಯಾನಂದ್, ಶಂಕರ್ ರೈ ಮಾಸ್ಟರ್ ಮಾತನಾಡಿದರು. ಸಿಪಿಐಎಂ ಮಂಜೇಶ್ವರ ಏರಿಯಾ ಮುಖಂಡ ಅರವಿಂದ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ, ಪೈವಳಿಕೆ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಬೂಬಾ ಡಿ., ಕಮಲಾಕ್ಷ, ನವೀನ್, ರವೀಂದ್ರ ಶೆಟ್ಟಿ, ಅಬ್ದುಲ್ ರಜಾಕ್, ಸುಬ್ಬಣ್ಣ ಆಳ್ವ, ಸಮಿತಿ ಸದಸ್ಯ ಅರವಿಂದ್ ಮೊದಲಾದವರು ಇದ್ದರು.
Talpady border issue CPIM protest blocking highway Demanding the Karnataka state govt to freely allow people of Kerala who has got one dose of vaccine.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm