ಬ್ರೇಕಿಂಗ್ ನ್ಯೂಸ್
23-08-21 10:18 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 23: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆ ಸೇರಿದ್ದಾರೆ.
ಕಾಬೂಲಿನ ನ್ಯಾಟೋ ಏರ್ ಬೇಸ್ ನಲ್ಲಿ ಕೆಲಸಕ್ಕಿದ್ದ ನಾಲ್ವರನ್ನು ಅಮೆರಿಕದ ವಾಯುಪಡೆ ಆಗಸ್ಟ್ 17 ರಂದು ಕತಾರ್ ಗೆ ಏರ್ ಲಿಫ್ಟ್ ಮಾಡಿತ್ತು. ಅಲ್ಲಿಂದ ಭಾರತದ ವಾಯುಪಡೆ ವಿಮಾನ ಭಾನುವಾರ ದೆಹಲಿಗೆ ಕರೆತಂದಿತ್ತು.


ದೆಹಲಿಯಿಂದ ತೊಕ್ಕೊಟ್ಟು ಕೊಲ್ಯ ನಿವಾಸಿ ಪ್ರಸಾದ್ ಆನಂದ್ ಇಂದು ಬೆಳಗ್ಗೆ ಮನೆ ಸೇರಿದ್ದರೆ, ನಾಲ್ಕು ಮಂದಿ ಇದೀಗ ಮಂಗಳೂರು ವಿಮಾನ ನಿಲ್ದಾಣ ತಲುಪಿದ್ದಾರೆ. ಮೂಡುಬಿದ್ರೆಯ ಜಗದೀಶ ಪೂಜಾರಿ, ಬಜ್ಪೆಯ ದಿನೇಶ್ ರೈ, ಕಿನ್ನಿಗೋಳಿ ಪಕ್ಷಿಕೆರೆಯ ಡೆಸ್ಮಂಡ್ ಡೇವಿಡ್ ಡಿಸೋಜ, ಮಂಗಳೂರು ಉರ್ವಾದ ಶ್ರವಣ್ ಅಂಚನ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ.
ದೆಹಲಿಯಿಂದ ರಾತ್ರಿ 8.30 ಕ್ಕೆ ಆಗಮಿಸಿದ ವಿಮಾನದಲ್ಲಿ ಸುರಕ್ಷಿತವಾಗಿ ತಾಯ್ನಾಡು ತಲುಪಿದ್ದಾರೆ. ಇವೆರೆಲ್ಲ 2011 ರಲ್ಲಿ ಉದ್ಯೋಗಕ್ಕೆಂದು ಕಾಬೂಲ್ ಮಿಲಿಟರಿ ಬೇಸ್ ಗೆ ತೆರಳಿದ್ದರು. ದಿನೇಶ್ ರೈ ಮೆಕ್ಯಾನಿಕ್ ಆಗಿದ್ದರೆ, ಇತರರು ಬೇರೆ ಬೇರೆ ಉದ್ಯೋಗದಲ್ಲಿದ್ದರು.



ಜುಲೈ 17 ರಂದು ನಮ್ಮನ್ನು ಕತಾರ್ ಏರ್ಪೋರ್ಟ್ ಗೆ ಏರ್ ಲಿಫ್ಟ್ ಮಾಡಲಾಗಿತ್ತು. ನ್ಯಾಟೋ ಏರ್ ಬೇಸ್ ನಲ್ಲಿ ನಮಗೆ ಯಾವುದೇ ತೊಂದರೆ ಇರಲಿಲ್ಲ. ಹೊರಗೆ ತಾಲಿಬಾನಿಗಳಿಂದ ಗುಂಡಿನ ದಾಳಿಯ ಶಬ್ದ ಕೇಳಿಬರುತ್ತಿತ್ತು. ಒಳಗಡೆ ಇದ್ದವರಿಗೆ ತೊಂದರೆ ಇರಲಿಲ್ಲ. ತುಂಬ ಸುರಕ್ಷಿತವಾಗಿದ್ದೆವು. ಅಮೆರಿಕದ ಪಡೆ ಕತಾರ್ ಗೆ ಒಯ್ದು ಉಳಿಸಿಕೊಂಡಿತ್ತು. ಅಲ್ಲಿಂದ ಭಾರತದ ವಾಯುಪಡೆ ಪರಿಶೀಲನೆ ನಡೆಸಿ, ದೆಹಲಿಗೆ ಕರೆತಂದಿದೆ. ನಾವು ಅಮೆರಿಕ ಮತ್ತು ಭಾರತದ ವಾಯುಪಡೆಗೆ ಧನ್ಯವಾದ ಹೇಳುತ್ತೇವೆ ಎಂದು ಡೆಸ್ಮಂಡ್ ಡಿಸೋಜ ಹೇಳಿದ್ದಾರೆ.
ಈ ಪೈಕಿ ದಿನೇಶ್ ರೈ, ಕಾಬೂಲ್ ಏರ್ಪೋರ್ಟ್ ನಲ್ಲಿ ಜನ ಮುತ್ತಿಗೆ ಹಾಕಿದ್ದು ಸಿಕ್ಕ ಸಿಕ್ಕ ವಿಮಾನದಲ್ಲಿ ಹತ್ತಿ ನೆಲಕ್ಕೆ ಬಿದ್ದಿರುವುದನ್ನು ನೋಡಿದ್ದರಂತೆ. ತಾಲಿಬಾನ್ ಪಡೆಗಳ ಅಟ್ಟಹಾಸದ ಬಗ್ಗೆ ಭಯ ಬಿದ್ದು ಅಲ್ಲಿನ ಜನರು ಬೇರೆ ಕಡೆಗೆ ತೆರಳಲು ಯತ್ನಿಸುತ್ತಿದ್ದರು ಎಂದು ಸ್ಮರಿಸಿದ್ದಾರೆ.
Four Mangalorean stranded in Afghan Kabul reach Mangalore Airport. The four stranded reached Delhi from QATAAR and now reached Mangalore International Airport.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 08:36 pm
HK News Staffer
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm