ಬ್ರೇಕಿಂಗ್ ನ್ಯೂಸ್
23-08-21 11:12 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ವಾರದಿಂದಲೇ ಪಿಯುಸಿ ತರಗತಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿದ್ದು ನಿರ್ಧಾರಕ್ಕೆ ಬರಲಾಗಿದೆ.
ಸದ್ಯಕ್ಕೆ ಪಿಯುಸಿ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಗ್ರೇಡೆಡ್ ಆಧರಿಸಿ, ಪಾಳಿಯಂತೆ ತರಗತಿಗಳನ್ನು ವಿಭಜಿಸಿ ಕ್ಲಾಸ್ ನಡೆಸಬೇಕು. ಈ ಬಗ್ಗೆ ಅಧಿಕೃತವಾಗಿ ಜಿಲ್ಲಾಡಳಿತದಿಂದ ಮಾರ್ಗಸೂಚಿ ನೀಡಲಾಗುವುದು ಎಂದು ಸಭೆಯ ಬಳಿಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಅಲ್ಲದೆ, ಪಿಯುಸಿ ತರಗತಿಯ ಫಲಿತಾಂಶ ಆಧರಿಸಿ ಶಾಲೆಗಳನ್ನು ಆರಂಭಿಸಲಾಗುವುದು. ಮುಂದಿನ ಎರಡು ವಾರ ಕಾಲ ಶಾಲೆ ಆರಂಭಿಸುವಂತಿಲ್ಲ. ಆನಂತರ ಶಾಲೆಗಳನ್ನು ನಡೆಸುವ ಬಗ್ಗೆ ಎರಡು ವಾರದ ಬಳಿಕ ನಿರ್ಧರಿಸಲಾಗುವುದು.

ಪಿಯುಸಿ ತರಗತಿ ಆರಂಭಿಸುವುದಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳ ಆರ್ ಟಿಪಿಸಿಆರ್ ಮಾಡಿಸಿ, ನೆಗೆಟಿವ್ ಹೊಂದಿರಬೇಕು. ಆಯಾ ಶಾಲೆಗಳ ಆಡಳಿತ ಮಂಡಳಿ ಈ ಬಗ್ಗೆ ಮುತುವರ್ಜಿ ವಹಿಸಬೇಕು.
ಸದ್ಯಕ್ಕೆ ಹತ್ತರಿಂದ ಹನ್ನೊಂದು ಸಾವಿರ ಟೆಸ್ಟಿಂಗ್ ಆಗ್ತಾ ಇದೆ. ಈ ಹಿಂದೆ ದಿನಕ್ಕೆ ಏಳು ಸಾವಿರ ಪರೀಕ್ಷೆ ಆಗುತ್ತಿದ್ದಾಗ ಪಾಸಿಟಿವ್ ರೇಟ್ 3.9 ಇತ್ತು. ಈಗ ನಾಲ್ಕರಷ್ಟು ಇದೆ. ಇಂದಿನ ಸಭೆಯಲ್ಲಿ ಟೆಸ್ಟಿಂಗನ್ನು ಹೆಚ್ಚಿಸಲು ನಿರ್ಧಾರಕ್ಕೆ ಬರಲಾಗಿದೆ. 14 ರಿಂದ 15 ಸಾವಿರ ಟೆಸ್ಟ್ ಮಾಡಲು ನಿರ್ಧರಿಸಿದ್ದು ಆಮೂಲಕ ಸೋಂಕು ಸಮುದಾಯಕ್ಕೆ ಹರಡಿರುವುದನ್ನು ಪತ್ತೆ ಮಾಡಲಾಗುವುದು. ಪಾಸಿಟಿವ್ ಹೆಚ್ಚು ಬಂದರೂ, ಅದನ್ನು ನಿರ್ವಹಣೆ ಮಾಡುವಷ್ಟು ಸಾಮರ್ಥ್ಯ ಜಿಲ್ಲೆಯಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕೇರಳದಿಂದ ಬಂದಿರುವ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆಗೆಟಿವ್ ಸರ್ಟಿಫಿಕೇಟ್ ಹೊಂದಿದ್ದರೂ ಕ್ವಾರಂಟೈನ್ ಬಳಿಕ ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಕಾಲೇಜು ಆಡಳಿತದ ವಿರುದ್ಧ ನೋಟೀಸ್ ನೀಡಲಾಗಿದೆ. ಯಾವ ಲೋಪದಿಂದ ಪಾಸಿಟಿವ್ ಆಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Mangalore Next week PUC colleges to start, delay in opening schools states Dc Rajendra Kumar
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am