ಬ್ರೇಕಿಂಗ್ ನ್ಯೂಸ್
23-08-21 11:12 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ವಾರದಿಂದಲೇ ಪಿಯುಸಿ ತರಗತಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿದ್ದು ನಿರ್ಧಾರಕ್ಕೆ ಬರಲಾಗಿದೆ.
ಸದ್ಯಕ್ಕೆ ಪಿಯುಸಿ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಗ್ರೇಡೆಡ್ ಆಧರಿಸಿ, ಪಾಳಿಯಂತೆ ತರಗತಿಗಳನ್ನು ವಿಭಜಿಸಿ ಕ್ಲಾಸ್ ನಡೆಸಬೇಕು. ಈ ಬಗ್ಗೆ ಅಧಿಕೃತವಾಗಿ ಜಿಲ್ಲಾಡಳಿತದಿಂದ ಮಾರ್ಗಸೂಚಿ ನೀಡಲಾಗುವುದು ಎಂದು ಸಭೆಯ ಬಳಿಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಅಲ್ಲದೆ, ಪಿಯುಸಿ ತರಗತಿಯ ಫಲಿತಾಂಶ ಆಧರಿಸಿ ಶಾಲೆಗಳನ್ನು ಆರಂಭಿಸಲಾಗುವುದು. ಮುಂದಿನ ಎರಡು ವಾರ ಕಾಲ ಶಾಲೆ ಆರಂಭಿಸುವಂತಿಲ್ಲ. ಆನಂತರ ಶಾಲೆಗಳನ್ನು ನಡೆಸುವ ಬಗ್ಗೆ ಎರಡು ವಾರದ ಬಳಿಕ ನಿರ್ಧರಿಸಲಾಗುವುದು.

ಪಿಯುಸಿ ತರಗತಿ ಆರಂಭಿಸುವುದಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳ ಆರ್ ಟಿಪಿಸಿಆರ್ ಮಾಡಿಸಿ, ನೆಗೆಟಿವ್ ಹೊಂದಿರಬೇಕು. ಆಯಾ ಶಾಲೆಗಳ ಆಡಳಿತ ಮಂಡಳಿ ಈ ಬಗ್ಗೆ ಮುತುವರ್ಜಿ ವಹಿಸಬೇಕು.
ಸದ್ಯಕ್ಕೆ ಹತ್ತರಿಂದ ಹನ್ನೊಂದು ಸಾವಿರ ಟೆಸ್ಟಿಂಗ್ ಆಗ್ತಾ ಇದೆ. ಈ ಹಿಂದೆ ದಿನಕ್ಕೆ ಏಳು ಸಾವಿರ ಪರೀಕ್ಷೆ ಆಗುತ್ತಿದ್ದಾಗ ಪಾಸಿಟಿವ್ ರೇಟ್ 3.9 ಇತ್ತು. ಈಗ ನಾಲ್ಕರಷ್ಟು ಇದೆ. ಇಂದಿನ ಸಭೆಯಲ್ಲಿ ಟೆಸ್ಟಿಂಗನ್ನು ಹೆಚ್ಚಿಸಲು ನಿರ್ಧಾರಕ್ಕೆ ಬರಲಾಗಿದೆ. 14 ರಿಂದ 15 ಸಾವಿರ ಟೆಸ್ಟ್ ಮಾಡಲು ನಿರ್ಧರಿಸಿದ್ದು ಆಮೂಲಕ ಸೋಂಕು ಸಮುದಾಯಕ್ಕೆ ಹರಡಿರುವುದನ್ನು ಪತ್ತೆ ಮಾಡಲಾಗುವುದು. ಪಾಸಿಟಿವ್ ಹೆಚ್ಚು ಬಂದರೂ, ಅದನ್ನು ನಿರ್ವಹಣೆ ಮಾಡುವಷ್ಟು ಸಾಮರ್ಥ್ಯ ಜಿಲ್ಲೆಯಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕೇರಳದಿಂದ ಬಂದಿರುವ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆಗೆಟಿವ್ ಸರ್ಟಿಫಿಕೇಟ್ ಹೊಂದಿದ್ದರೂ ಕ್ವಾರಂಟೈನ್ ಬಳಿಕ ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಕಾಲೇಜು ಆಡಳಿತದ ವಿರುದ್ಧ ನೋಟೀಸ್ ನೀಡಲಾಗಿದೆ. ಯಾವ ಲೋಪದಿಂದ ಪಾಸಿಟಿವ್ ಆಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Mangalore Next week PUC colleges to start, delay in opening schools states Dc Rajendra Kumar
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm