ಬ್ರೇಕಿಂಗ್ ನ್ಯೂಸ್
23-08-21 11:12 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ವಾರದಿಂದಲೇ ಪಿಯುಸಿ ತರಗತಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿದ್ದು ನಿರ್ಧಾರಕ್ಕೆ ಬರಲಾಗಿದೆ.
ಸದ್ಯಕ್ಕೆ ಪಿಯುಸಿ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಗ್ರೇಡೆಡ್ ಆಧರಿಸಿ, ಪಾಳಿಯಂತೆ ತರಗತಿಗಳನ್ನು ವಿಭಜಿಸಿ ಕ್ಲಾಸ್ ನಡೆಸಬೇಕು. ಈ ಬಗ್ಗೆ ಅಧಿಕೃತವಾಗಿ ಜಿಲ್ಲಾಡಳಿತದಿಂದ ಮಾರ್ಗಸೂಚಿ ನೀಡಲಾಗುವುದು ಎಂದು ಸಭೆಯ ಬಳಿಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಅಲ್ಲದೆ, ಪಿಯುಸಿ ತರಗತಿಯ ಫಲಿತಾಂಶ ಆಧರಿಸಿ ಶಾಲೆಗಳನ್ನು ಆರಂಭಿಸಲಾಗುವುದು. ಮುಂದಿನ ಎರಡು ವಾರ ಕಾಲ ಶಾಲೆ ಆರಂಭಿಸುವಂತಿಲ್ಲ. ಆನಂತರ ಶಾಲೆಗಳನ್ನು ನಡೆಸುವ ಬಗ್ಗೆ ಎರಡು ವಾರದ ಬಳಿಕ ನಿರ್ಧರಿಸಲಾಗುವುದು.

ಪಿಯುಸಿ ತರಗತಿ ಆರಂಭಿಸುವುದಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳ ಆರ್ ಟಿಪಿಸಿಆರ್ ಮಾಡಿಸಿ, ನೆಗೆಟಿವ್ ಹೊಂದಿರಬೇಕು. ಆಯಾ ಶಾಲೆಗಳ ಆಡಳಿತ ಮಂಡಳಿ ಈ ಬಗ್ಗೆ ಮುತುವರ್ಜಿ ವಹಿಸಬೇಕು.
ಸದ್ಯಕ್ಕೆ ಹತ್ತರಿಂದ ಹನ್ನೊಂದು ಸಾವಿರ ಟೆಸ್ಟಿಂಗ್ ಆಗ್ತಾ ಇದೆ. ಈ ಹಿಂದೆ ದಿನಕ್ಕೆ ಏಳು ಸಾವಿರ ಪರೀಕ್ಷೆ ಆಗುತ್ತಿದ್ದಾಗ ಪಾಸಿಟಿವ್ ರೇಟ್ 3.9 ಇತ್ತು. ಈಗ ನಾಲ್ಕರಷ್ಟು ಇದೆ. ಇಂದಿನ ಸಭೆಯಲ್ಲಿ ಟೆಸ್ಟಿಂಗನ್ನು ಹೆಚ್ಚಿಸಲು ನಿರ್ಧಾರಕ್ಕೆ ಬರಲಾಗಿದೆ. 14 ರಿಂದ 15 ಸಾವಿರ ಟೆಸ್ಟ್ ಮಾಡಲು ನಿರ್ಧರಿಸಿದ್ದು ಆಮೂಲಕ ಸೋಂಕು ಸಮುದಾಯಕ್ಕೆ ಹರಡಿರುವುದನ್ನು ಪತ್ತೆ ಮಾಡಲಾಗುವುದು. ಪಾಸಿಟಿವ್ ಹೆಚ್ಚು ಬಂದರೂ, ಅದನ್ನು ನಿರ್ವಹಣೆ ಮಾಡುವಷ್ಟು ಸಾಮರ್ಥ್ಯ ಜಿಲ್ಲೆಯಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕೇರಳದಿಂದ ಬಂದಿರುವ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆಗೆಟಿವ್ ಸರ್ಟಿಫಿಕೇಟ್ ಹೊಂದಿದ್ದರೂ ಕ್ವಾರಂಟೈನ್ ಬಳಿಕ ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಕಾಲೇಜು ಆಡಳಿತದ ವಿರುದ್ಧ ನೋಟೀಸ್ ನೀಡಲಾಗಿದೆ. ಯಾವ ಲೋಪದಿಂದ ಪಾಸಿಟಿವ್ ಆಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Mangalore Next week PUC colleges to start, delay in opening schools states Dc Rajendra Kumar
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm