ಬ್ರೇಕಿಂಗ್ ನ್ಯೂಸ್
06-09-20 09:16 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 06: ದ.ಕ. ಜಿಲ್ಲೆಯಲ್ಲಿ ಕೊರೋನ ಹಾವಳಿ ಮಿತಿಮೀರಿದ್ದು, ರವಿವಾರ ಮತ್ತೆ 326 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಓರ್ವ ಸೋಂಕಿತ ಮೃತಪಟ್ಟಿದ್ದು, 202 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮಂಗಳೂರು ತಾಲೂಕಿನ ಓರ್ವ ಸೋಂಕಿತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ 168 ಮಂದಿಯಲ್ಲಿ ಸಾಮಾನ್ಯ ಶೀತ ಲಕ್ಷಣ ಕಂಡುಬಂದಿದೆ. ಸೋಂಕಿತರ ಸಂಪರ್ಕದಲ್ಲಿದ್ದ 34 ಮಂದಿ, ತೀವ್ರ ಉಸಿರಾಟ ತೊಂದರೆಯ 15, ಸೋಂಕು ನಿಗೂಢ ಪ್ರಕರಣದಲ್ಲಿ 109 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
118 ಪುರುಷರು ಹಾಗೂ 74 ಮಹಿಳೆಯರು ಸೇರಿದಂತೆ 192 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿವೆ. 81 ಪುರುಷರು ಹಾಗೂ 53 ಮಹಿಳೆಯರು ಸಹಿತ 134 ಮಂದಿಯಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.
ಸೋಂಕಿತರ ಪೈಕಿ ಮಂಗಳೂರು ತಾಲೂಕು ಅಗ್ರಸ್ಥಾನದಲ್ಲಿದೆ. ಮಂಗಳೂರು-187, ಬಂಟ್ವಾಳ-39, ಪುತ್ತೂರು-28, ಸುಳ್ಯ-27, ಬೆಳ್ತಂಗಡಿ-33, ಹೊರಜಿಲ್ಲೆಯ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,926ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ರವಿವಾರ 202 ಮಂದಿ ವಿವಿಧ ಆಸ್ಪತ್ರೆ, ಮನೆ, ಕೋವಿಡ್ ಆರೈಕೆ ಕೇಂದ್ರದಿಂದ ಬಿಡುಗಡೆಯಾಗಿದ್ದಾರೆ. ಈ ಪೈಕಿ ಮನೆಯಿಂದ 110 ಮಂದಿ, ಕೋವಿಡ್ ಆರೈಕೆ ಕೇಂದ್ರದಿಂದ ಇಬ್ಬರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 11,441 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3084 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm