ಬ್ರೇಕಿಂಗ್ ನ್ಯೂಸ್
27-08-21 03:10 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 27: ಆಹಾರ ತಯಾರಿ ಕೇಂದ್ರಗಳಲ್ಲಿ ಮಿತಿಗಿಂತ ಹೆಚ್ಚು ಟೇಸ್ಟಿಂಗ್ ಪೌಡರ್ ಬಳಕೆ ಮಾಡುವುದು ಪತ್ತೆಯಾದರೆ, ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಆಹಾರ ಸುರಕ್ಷತೆ ವಿಚಾರದಲ್ಲಿ ಜಿಲ್ಲಾಧಿಕಾರಿ ಈ ಸೂಚನೆ ನೀಡಿದ್ದಾರೆ. ಗೋಬಿ ಮಂಚೂರಿ ಸೇರಿದಂತೆ ಚೈನೀಸ್ ಐಟಂ ತಯಾರಿ ಕೇಂದ್ರಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಟೇಸ್ಟಿಂಗ್ ಪೌಡರ್ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬಂದಿದೆ. ಇದರಿಂದ ಗ್ರಾಹಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಎಲ್ಲ ಕಡೆ ದಾಳಿ ನಡೆಸಬೇಕು. ಫುಡ್ ಸ್ಯಾಂಪಲನ್ನು ಪ್ರಯೋಗಾಲಯಕ್ಕೆ ಕಳುಹಿಸಿ, ಗುಣಮಟ್ಟ ಖಾತ್ರಿ ಮಾಡಬೇಕು. ಯಾವುದೇ ರೀತಿಯಲ್ಲಿ ಆಹಾರ ಗುಣಮಟ್ಟದಲ್ಲಿ ಕೊರತೆ ಕಂಡುಬಂದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.



ಅಲ್ಲದೆ, ಟೇಸ್ಟಿಂಗ್ ಪೌಡರನ್ನು ಪರವಾನಗಿ ಇಲ್ಲದೆ ಮಾರಾಟ ಮಾಡುವ ವ್ಯಾಪಾರಸ್ಥರ ಮೇಲೆಯೂ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಬೇಕರಿ ಇನ್ನಿತರ ಆಹಾರ ತಯಾರಿ ಕೇಂದ್ರಗಳಿಗೆ ಪ್ರತಿ ತಿಂಗಳು ದಾಳಿ ನಡೆಸಬೇಕು. ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ಬೇಕರಿ ತಿಂಡಿ, ತಿನಿಸುಗಳ ಪ್ಯಾಕೆಟ್ ಗಳಲ್ಲಿ ಬಳಕೆಯ ಅವಧಿ ಬಗ್ಗೆ ನಮೂದೆ ಮಾಡಲಾಗಿದೆಯೇ ಎನ್ನುವ ಬಗ್ಗೆ ತಪಾಸಣೆ ನಡೆಸಬೇಕು. ಪ್ರತಿ ತಿಂಗಳು ಬೇಕರಿ ಇನ್ನಿತರ ಆಹಾರ ಸಾಮಗ್ರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸುವ ಕೆಲಸ ಆಗಬೇಕು ಎಂದು ಜಿಲ್ಲಾಧಿಕಾರಿಗಳು ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಣ್ಣು, ತರಕಾರಿಗಳ ಕೆಮಿಕಲ್ ಬಳಕೆ ಮಾಡುವ ಬಗ್ಗೆಯೂ ನಿಗಾ ವಹಿಸಬೇಕು. ಬಾಳೆಹಣ್ಣು ಇನ್ನಿತರ ಹಣ್ಣುಗಳ ಹೋಲ್ ಸೇಲ್ ವ್ಯಾಪಾರಿಗಳು ಕೆಮಿಕಲ್ ಬಳಕೆ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು. ಅಂಥ ವ್ಯಾಪಾರಿಗಳ ವಿರುದ್ಧ ಕಟ್ಟಿನಿಟ್ಟಿನ ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.
ಸಭೆಯಲ್ಲಿ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಎಎಸ್ಪಿ ಕುಮಾರಚಂದ್ರ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ ನಾಯಕ್ ಉಪಸ್ಥಿತರಿದ್ದರು.
Deputy commissioner (DC) G Jagadeesha warned that a criminal case will be filed against food manufacturers if it is found that they are using excessive amounts of tasting powder in any kind of food manufacture.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am