ಬ್ರೇಕಿಂಗ್ ನ್ಯೂಸ್
06-09-20 10:57 pm Headline Karnataka News Network ಕರಾವಳಿ
ಮಂಗಳೂರು, ಸಪ್ಟೆಂಬರ್ 06: ಶಿಕ್ಷಕ ಕೇವಲ ಪಠ್ಯ ಪುಸ್ತಕಕಕ್ಕೆ ಸೀಮಿತವಾಗುವುದಲ್ಲ. ಪಠ್ಯೇತರವಾಗಿಯೂ ಶಿಷ್ಯ ಸಂಬಂಧವನ್ನು ಜೀವನಪೂರ್ತಿ ಮುಂದುವರಿಸುವಂತಹ ಮಧುರ ಬಾಂಧವ್ಯ ಬೆಳೆಸಿದಾಗ ಶಿಕ್ಷಕರ ಜೀವನ ಸಾರ್ಥಕವಾಗುತ್ತದೆ ಎಂದು ಕಾನತ್ತಡ್ಕ ಶ್ರೀ ಕೃಷ್ಣ ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕರಾದ ಕಾನ ಈಶ್ವರ ಭಟ್ ಹೇಳಿದರು.
ಅವರು ಉಕ್ಕುಡ ಪಬ್ಲಿಕ್ ಸ್ಕೂಲ್ ನಲ್ಲಿ ವಿಟ್ಲ ರಾಜಧಾನಿ ಜ್ಯುವೆಲ್ಲರ್ಸ್ ಸಹಯೋಗದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದರು.


ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯ ಪ್ರೌಢಶಾಲೆಯ ಶಿಕ್ಷಕರಾದ ಕಾನ ಈಶ್ವರ ಭಟ್, ಪಂಬತ್ತಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಅಬ್ಬೊಕ್ಕರೆ ಬ್ಯಾರಿ ಕರೋಪಾಡಿ, ವಿಟ್ಲ ಸಂತರೀಟಾ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಜೂಲಿಯಾನಾ ಮೇರಿ ಲೋಬೋ ಮಂಗಳಪದವು ಅವರನ್ನು ಶಿಕ್ಷಕರ ದಿನಾಚರಣೆ ಪ್ರಯುಕ್ತ ಸನ್ಮಾನಿಸಲಾಯಿತು. ರಾಜಧಾನಿ ಜ್ಯುವೆಲ್ಲರ್ಸ್ ಮಾಲಕರಾದ ತಾನಾಜಿ ಬಾಬರ್ ಸನ್ಮಾನ ಕಾರ್ಯಕ್ರಮ ನೆರವೇರಿಸಿ ಶುಭ ಹಾರೈಸಿದರು. ಶಾಲೆಯಿಂದ ನಿರ್ಗಮಿಸಿ ಪ್ರೌಢಶಾಲೆಗೆ ತೆರಳುತ್ತಿರುವ ಹಿರಿಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಉಕ್ಕುಡ ಪಬ್ಲಿಕ್ ಸ್ಕೂಲ್ ಅಧ್ಯಕ್ಷರಾದ ರಶೀದ್ ವಿಟ್ಲ ಮಾತನಾಡಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರು, ಅವರ ತಂದೆಗೆ ಅರ್ಚಕರಾಗಬೇಕೆಂಬ ಮನಸ್ಸಿತ್ತು. ಆದರೆ ರಾಧಾಕೃಷ್ಣನ್ ಅವರಿಗೆ ಶಿಕ್ಷಕರಾಗಬೇಕೆಂಬ ಹುಮ್ಮಸ್ಸು. ಈ ವಿಚಾರದಲ್ಲಿ ತಂದೆ ಸೋತರು. ಸರ್ವಪಳ್ಳಿ ರಾಧಾಕೃಷ್ಣನ್ ಶಿಕ್ಷಕರಾದ ಕಾರಣ ನಾವಿಂದು ಶಿಕ್ಷಕರ ದಿನವನ್ನು ಆಚರಿಸುತ್ತಿದ್ದೇವೆ ಎಂದರು. ಉಕ್ಕುಡ ಪಬ್ಲಿಕ್ ಸ್ಕೂಲ್ ಪ್ರಭಾರ ಮುಖ್ಯ ಶಿಕ್ಷಕರಾದ ಆಯಿಷತಿಲ್ ಆರಿಫಾ, ಶಿಕ್ಷಕರಾದ ದಿವ್ಯಶ್ರೀ, ಜ್ಯೋತ್ಸ್ನಾ, ಆಬಿದಾ, ರಶೀದಾ ಬೇಗಮ್, ಪವಿತ್ರ ಹಾಗೂ ಶಿಕ್ಷಕೇತರ ಸಿಬ್ಬಂದಿ ಪರಮೇಶ್ವರಿ ಅವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶಾಲೆಯ ಮಾಜಿ ಅಧ್ಯಕ್ಷರಾದ ಅಬ್ದುಲ್ ಹಮೀದ್ ಟಿ.ಎಚ್.ಎಂ.ಎ., ಕಾರ್ಯದರ್ಶಿ ಹನೀಫ್ ಕುದ್ದುಪದವು, ಕೋಶಾಧಿಕಾರಿ ಅನ್ವರ್ ಉಕ್ಕುಡ, ಸಂಚಾಲಕ ಅಬೂಬಕರ್ ಟೆಲಿಫೋನ್, ಉಪಾಧ್ಯಕ್ಷ ಅಬ್ಬಾಸ್ ಕಲ್ಲಂಗಳ, ಜೊತೆ ಕಾರ್ಯದರ್ಶಿ ಮುನೀರ್ ದರ್ಬೆ, ಸದಸ್ಯ ಸಿದ್ದೀಕ್ ಆಲಂಗಾರು, ಉಕ್ಕುಡ ಬದ್ರಿಯಾ ಜುಮಾ ಮಸೀದಿ ಕೋಶಾಧಿಕಾರಿ ಅಬ್ದುಲ್ ರಹಿಮಾನ್ ಹಾಜಿ ಕೇಪು, ಅಬ್ದುರಹ್ಮಾನ್ ದರ್ಬೆ, ಅಬೂಬಕರ್ ಮೆಹರಾಜ್, ಡಿ.ಕೆ. ಅಬ್ದುಲ್ ಖಾದರ್, ಮಹಮೂದ್ ಕಾನತ್ತಡ್ಕ, ಹಮೀದ್ ಜಿಸ್ತಿಯಾ, ರಿಝ್ವಾನ್ ಉಕ್ಕುಡ, ಹಸನ್ ಕಲ್ಲಂಗಳ, ಅಲಾಮ್ ಜಿಸ್ತಿಯಾ ಉಪಸ್ಥಿತರಿದ್ದರು. ಆಯಿಷತಿಲ್ ಆರಿಫಾ ಸ್ವಾಗತಿಸಿ ನಿರೂಪಿಸಿದರು. ಹಳೆ ವಿದ್ಯಾರ್ಥಿಗಳಾದ ಶೈಮಾ ಆಲಂಗಾರು, ಝುಬೈರಾ ಆಲಂಗಾರು, ಮೆಹಶೂಫ ಉಕ್ಕುಡ ಪ್ರಾರ್ಥಿಸಿದರು.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am