ಬ್ರೇಕಿಂಗ್ ನ್ಯೂಸ್
28-08-21 11:15 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 28: ಈಗಿನ ಕೆಲವು ಯುವಕ- ಯುವತಿಯರಿಗೆ ಟಿಕ್ ಟಾಕ್ ವಿಡಿಯೋ ಮಾಡುವುದು ಟ್ರೆಂಡ್ ಆಗಿದೆ. ಆದರೆ, ಎಲ್ಲಿ ಯಾವುದನ್ನು ಮಾಡಬೇಕು ಎಂಬ ಅರಿವು ಇಲ್ಲದೆಯೋ, ಏನಾಗುತ್ತೆ ಎಂಬ ದಾರ್ಷ್ಟ್ಯವೋ ಸಿಕ್ಕಸಿಕ್ಕಲ್ಲಿ ಟಿಕ್ ಟಾಕ್ ಮಾಡಿ ಸಿಕ್ಕಿಬೀಳುತ್ತಾರೆ. ಹಳೆಯಂಗಡಿ ಪ್ರಸಿದ್ಧ ಪಾವಂಜೆ ದೇವಸ್ಥಾನದಲ್ಲಿ ಇಬ್ಬರು ಹುಡುಗಿಯರ ಜೊತೆ ಯುವಕನೊಬ್ಬ ಟಿಕ್ ಟಾಕ್ ವಿಡಿಯೋ ಮಾಡಿದ್ದು ಈಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಮೂಲ್ಕಿ ನಿವಾಸಿ ಪ್ರತೀಕ್ ಶೆಟ್ಟಿ ಎಂಬಾತ ತನ್ನೊಂದಿಗೆ ಇಬ್ಬರು ಹುಡುಗಿಯರ ಜೊತೆ ವಿಡಿಯೋ ಮಾಡಿದ್ದಾನೆ. ದೇವಸ್ಥಾನದ ಒಳಗಿನ ಅಂಗಣದಲ್ಲಿ ವಿಡಿಯೋ ಮಾಡಿರುವಂತಿದೆ. ನಾಲ್ಕು ಮಾದರಿಯ ಬೇರೆ ಬೇರೆ ವಿಡಿಯೋಗಳು ವೈರಲ್ ಆಗಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪಾವಂಜೆ ಮಹಾಲಿಂಗೇಶ್ವರ ಗಣಪತಿ ದೇವಸ್ಥಾನದಲ್ಲಿ ಈ ರೀತಿ ವಿಡಿಯೋ ಮಾಡಲಾಗಿದೆ ಎನ್ನಲಾಗುತ್ತಿದ್ದು ಸ್ಥಳೀಯ ಭಕ್ತರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯೊಬ್ಬ ಯುವಕನಿಗೆ ಫೋನ್ ಮಾಡಿ, ಇನ್ಮುಂದೆ ದೇವಸ್ಥಾನಕ್ಕೆ ಕಾಲಿಟ್ಟಲ್ಲಿ ನಿನ್ನ ಕೈಕಾಲು ಮುರಿಯುತ್ತೇವೆ ಎಂದು ಧಮಕಿ ಹಾಕಿದ್ದಾನೆ. ನಾವು ಕೈಮುಗಿಯುವ ಜಾಗದಲ್ಲಿ ನೀನು ಈ ರೀತಿ ವಿಡಿಯೋ ಮಾಡಿದ್ದೀಯಲ್ಲಾ. ನಿನಗೆ ಯಾರು ಅವಕಾಶ ಕೊಟ್ಟಿದ್ದು ಎಂದು ಕೇಳಿದ್ದಾರೆ. ಅಲ್ಲಿನ ಅರ್ಚಕ ಭಟ್ರಿಗೆ ಹೇಳಿ, ಮಾಡಿದ್ದೇವೆ ಎಂದಿದ್ದಾನೆ. ಯಾರು ಆತ ಭಟ್ಟ, ನಿನಗೆ ಈ ರೀತಿ ವಿಡಿಯೋ ಮಾಡಲು ಹೇಳಿದ್ದು. ಬಾ, ದೇವಸ್ಥಾನಕ್ಕೆ ಬಂದು ಹೇಳು.. ನಾನು ವಿಡಿಯೋ ಡಿಲೀಟ್ ಮಾಡಿದ್ದೇನೆ ಎಂದು ಹುಡುಗ ಹೇಳಿದ್ದಕ್ಕೆ, ಅದು ಎಲ್ಲಾ ಗ್ರೂಪುಗಳಲ್ಲಿ ಬರ್ತಿದೆ. ನೀನು ಡಿಲೀಟ್ ಮಾಡೋದೇನು.. ನಿನ್ನ ಕೈಕಾಲು ತೆಗೀತೇನೆ ಎಂದು ಧಮ್ಕಿ ಹಾಕುವ ಆಡಿಯೋ ಕೂಡ ವೈರಲ್ ಆಗಿದ್ದು ಯುವಕನ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಕೇಳಿಬಂದಿದೆ.
ಇದೇ ವೇಳೆ, ದೇವಸ್ಥಾನದ ವತಿಯಿಂದ ತಪ್ಪಿತಸ್ಥ ಯುವಕ ಮತ್ತು ಹುಡುಗಿಯರು ದೇವಸ್ಥಾನಕ್ಕೆ ಬಂದು ಕ್ಷಮೆ ಕೇಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಹುಡುಗ- ಹುಡುಗಿಯರ ಹುಚ್ಚಾಟಕ್ಕೆ ದೇವಸ್ಥಾನದ ಮರ್ಯಾದೆ ಹರಾಜು ಆಗುವಂತಾಗಿದೆ.
Video:
Mangalore Tiktok vidoe inside Pavanje temple haleangadi goes viral. Boy from Mulki and girls were seen acting inappropriately shooting their videos for Tiktok.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm