ಬ್ರೇಕಿಂಗ್ ನ್ಯೂಸ್
28-08-21 07:47 pm Mangaluru Correspondent ಕರಾವಳಿ
ಉಳ್ಳಾಲ, ಆ.28: ಮೀನಿಗೆ ಹಾಕಿದ ಬಲೆ ಎಳೆಯುತ್ತಿದ್ದ ವೇಳೆ ನಾಡದೋಣಿಯಿಂದ ಬಿದ್ದು ಸಮುದ್ರಪಾಲಾಗಿದ್ದ ಮೀನುಗಾರನನ್ನು ಮತ್ತೊಂದು ನಾಡದೋಣಿಯ ಮೀನುಗಾರರು ರಕ್ಷಿಸಿದ ಘಟನೆ ಉಳ್ಳಾಲದ ಅಳಿವೆಬಾಗಿಲಿನಲ್ಲಿ ನಡೆದಿದೆ.
ಕಸಬಾ ಬೆಂಗ್ರೆಯ ನಾಡದೋಣಿ ಇಂದು ಮಧ್ಯಾಹ್ನ ಅಳಿವೆಬಾಗಿಲಿನಲ್ಲಿ ಹಿಂತಿರುಗುತ್ತಿದ್ದಾಗ ಮೀನಿಗೆ ಹಾಕಿದ್ದ ಬಲೆಯನ್ನು ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ದೋಣಿಯ ಇಂಜಿನ್ ಕೆಟ್ಟು ನಿಂತಿದ್ದು ಇದೇ ಸಂದರ್ಭದಲ್ಲಿ ದೋಣಿಗೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸಿದ ಪರಿಣಾಮ ದೋಣಿಯಲ್ಲಿದ್ದ ಕಸಬ ಬೆಂಗ್ರೆ ನಿವಾಸಿ ನವಾಝ್(35) ಸಮುದ್ರಕ್ಕೆ ಎಸೆಯಲ್ಪಟ್ಟಿದ್ದಾರೆ.


ನವಾಝ್ ಅವರು ಅಳಿವೆ ಬಾಗಿಲಿನ ರಣಭಯಂಕರ ಸಮುದ್ರದಲ್ಲಿ ಸುಮಾರು ಅರ್ಧ ತಾಸಿನಷ್ಟು ಕಾಲ ಥರ್ಮಾಕೋಲಿನ ಸಹಾಯದಿಂದ ಈಜಾಡಿದ್ದಾರೆ. ಈ ವೇಳೆ ಅದೇ ದಾರಿಯಿಂದ ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ಉಳ್ಳಾಲ ಹೊಯ್ಗೆಯ ನಿಶಾನ್ ಜಾಯ್ ಮಾಲಕತ್ವದ ಓಶಿಯನ್ ಬ್ರೀಝ್ ನಾಡದೋಣಿಯ ಮೀನುಗಾರರು ಸಮುದ್ರದಲ್ಲಿ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿದ್ದ ನವಾಝ್ ನನ್ನು ಗಮನಿಸಿದ್ದು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ದೋಣಿಯಲ್ಲಿದ್ದ ಹೊಯ್ಗೆ ನಿವಾಸಿ ಪ್ರೇಮ್ ಪ್ರಕಾಶ್, ಸೂರ್ಯಪ್ರಕಾಶ್, ಅನಿಲ್ ಮೊಂತೇರೊ, ಅಜಿತ್ ಬೆಂಗರೆ, ರಿತೇಶ್ ಹೊಯ್ಗೆ ಬಝಾರ್ ಜೊತೆಗೂಡಿ ನವಾಝ್ ಅವರಿಗೆ ರೋಪ್ ಎಸೆದು ದೋಣಿಯೊಳಗೆ ಎಳೆತಂದು ರಕ್ಷಿಸಿದ್ದಾರೆ.
ರಕ್ಷಣೆಗೊಳಗಾದ ಕಸಬಾ ಬೆಂಗ್ರೆ ನಿವಾಸಿ ನವಾಝ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಚೇತರಿಸಿಕೊಂಡಿದ್ದಾರೆ.
Mangalore fisherman falls overboard survives in sea for hours rescued in Ullal.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am