ಬ್ರೇಕಿಂಗ್ ನ್ಯೂಸ್
29-08-21 02:25 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಸೆಪ್ಟಂಬರ್ ಒಂದರಿಂದ ಜಿಲ್ಲೆಯಾದ್ಯಂತ ದ್ವಿತೀಯ ಪಿಯು ತರಗತಿಯನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅನುಮತಿ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಕಲಿಕೆಯು ಮಹತ್ವದ್ದಾಗಿರುವುದರಿಂದ ಇದರ ಅಗತ್ಯವನ್ನು ಮನಗಂಡು ಷರತ್ತುಗಳೊಂದಿಗೆ ತರಗತಿ ನಡೆಸಲು ಅನುಮತಿ ನೀಡಿದ್ದಾಗಿ ತಿಳಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಸೆ.15ರ ವರೆಗೂ ಭೌತಿಕ ತರಗತಿಗಳನ್ನು ನಡೆಸದಂತೆ ಆದೇಶ ನೀಡಿದ್ದ ಜಿಲ್ಲಾಧಿಕಾರಿ ಈಗ ದ್ವಿತೀಯ ಪಿಯುಸಿ ತರಗತಿಗಳನ್ನು ನಡೆಸಲೇಬೇಕಾದ ಅನಿವಾರ್ಯತೆ ಇರುವುದರಿಂದ ಸೆ.1ರಿಂದ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಿ ತರಗತಿ ನಡೆಸುವಂತೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಮೊದಲ ಪಿಯು ತರಗತಿಯನ್ನು ಹಾಗೂ ಪದವಿ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಪೂರ್ವಾನುಮತಿ ಪಡೆದು ಸೆ.15ರ ಬಳಿಕ ತರಗತಿ ಆರಂಭಿಸುವಂತೆ ಸೂಚಿಸಿದ್ದಾರೆ. ಕೇರಳದಿಂದ ಬರುವ ವಿದ್ಯಾರ್ಥಿಗಳು ಏಳು ದಿನಗಳ ಕಾಲ ಕ್ವಾರಂಟೈನ್ ಇಡಲು ಕಾಲೇಜಿನಲ್ಲಿ ವಸತಿ ಸಹಿತ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಅಲ್ಲದೆ, ಸೋಂಕು ಪೀಡಿತ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ ಗಳನ್ನು ಕಡ್ಡಾಯವಾಗಿ ತೆರೆಯಬೇಕು. ಏಳು ದಿನಗಳ ಕ್ವಾರಂಟೈನ್ ಬಳಿಕ ವಿದ್ಯಾರ್ಥಿಗಳು ಆರ್ ಟಿವಿಸಿಆರ್ ಟೆಸ್ಟ್ ಮಾಡಿಸಿ ತರಗತಿಗೆ ಹಾಜರಾಗಬೇಕು. ಕ್ವಾರಂಟೈನಲ್ಲಿದ್ದರೂ, ವಿದ್ಯಾರ್ಥಿಗಳು ಆನ್ ಲೈನ್ ತರಗತಿಯಲ್ಲಿ ಭಾಗವಹಿಸಬೇಕು ಎಂದು ಷರತ್ತು ವಿಧಿಸಿದ್ದಾರೆ.
ಕಾಲೇಜಿನಲ್ಲಿ ನೂರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇರುವಂತಿಲ್ಲ. ಮೂರು ದಿನಗಳಿಗೊಮ್ಮೆ ಪಾಳಿಯಂತೆ ತರಗತಿ ನಡೆಸಬೇಕು. ಪಾಳಿಯಂತೆ ನಡೆಸುವ ತರಗತಿಯಲ್ಲಿ 50 ಶೇಕಡಾ ವಿದ್ಯಾರ್ಥಿಗಳು ಮಾತ್ರ ಇರಬೇಕು. ಮೂರು ದಿನ ಆನ್ ಲೈನ್, ಇತರ ಮೂರು ದಿನ ಭೌತಿಕ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಇದಲ್ಲದೆ, ಕಾಲೇಜಿನ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬಂದಿಗಳು ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಪ್ರಮಾಣ ಪತ್ರ ಹೊಂದಿರಬೇಕು. ಅಲ್ಲದೆ, ಕೊರೊನಾ ಲಸಿಕೆಯನ್ನು ಹಾಕಿಸಿರಬೇಕು. ಕಾಲೇಜು ತರಗತಿ ವೇಳೆ ಕೋವಿಡ್ ನಿಯಮ ಪಾಲನೆಯಾಗುವ ಬಗ್ಗೆ ನಿಗಾ ವಹಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು, ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು, ಆಯಾ ಕಾಲೇಜುಗಳ ಪ್ರಾಂಶುಪಾಲರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೇರಳದಿಂದ ಪ್ರತೀ ದಿನ ಬರುವ ವಿದ್ಯಾರ್ಥಿಗಳು ಮತ್ತು ಇತರ ಕಾಲೇಜು ಸಿಬಂದಿ ಏಳು ದಿನಗಳಿಗೊಮ್ಮೆ ಆರ್ ಟಿಪಿಸಿಆರ್ ಟೆಸ್ಟ್ ನಡೆಸಿ, ಕೋವಿಡ್ ನೆಗೆಟಿವ್ ವರದಿ ಹಾಜರುಪಡಿಸಬೇಕು ಎಂದು ಜಿಲ್ಲಾಧಿಕಾರಿ ಷರತ್ತು ವಿಧಿಸಿದ್ದಾರೆ.
Deputy commissioner (DC) of Dakshina Kannada district Dr Rajendra K V has issued guidelines ahead of the resumption of physical classes for second PU students in the district. After several months of closure due to second wave of coronavirus, physical classes for second PU students are now set to begin from September 1.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am