ಬ್ರೇಕಿಂಗ್ ನ್ಯೂಸ್
29-08-21 03:49 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 29: ವಯಸ್ಸು ಶತಕದ ಹತ್ತಿರ ಇದ್ದರೂ ಟ್ರಾಫಿಕ್ ವಾರ್ಡನ್ ಚೀಫ್ ಆಗಿ ಯುವಕರು ನಾಚಿಸುವ ರೀತಿ ಸಮಾಜ ಸೇವೆಯಲ್ಲಿ ನಿರತರಾಗಿದ್ದ ಜೋಸೆಫ್ ಗೊನ್ಸಾಲ್ವಿಸ್ ತಮ್ಮ 99ರ ಹರೆಯದಲ್ಲಿ ಕೆಲಸ ನಿಲ್ಲಿಸಿದ್ದಾರೆ. ಕೆಲ ದಿನಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋನ್ಸಾಲ್ವಿಸ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಜೋ ಗೊನ್ಸಾಲ್ವಿಸ್ ಎಂದೇ ಹೆಸರಾಗಿದ್ದ ಅವರು, ಮಂಗಳೂರು ನಗರದ ಫಳ್ನೀರ್ ನಲ್ಲಿ ವಾಸವಿದ್ದರು. ಮೊದಲಿಗೆ ಬ್ರಿಟಿಷ್ ಮೂಲದ ಜೆಎಲ್ ಮೋರಿಸನ್ ಕಂಪನಿಯಲ್ಲಿ ಮ್ಯಾನೇಜ್ಮೆಂಟ್ ಟ್ರೈನೀ ಆಗಿ ಉದ್ಯೋಗಕ್ಕೆ ಸೇರಿದ್ದ ಜೋ ಬಳಿಕ ಅದೇ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದರು. ಕೊನೆಗೆ, ಕಂಪನಿಯಲ್ಲಿ ಭಡ್ತಿ ಪಡೆದು ಎಕ್ಸಿಕ್ಯುಟಿವ್ ಡೈರೆಕ್ಟರ್ ಹುದ್ದೆಗೇರಿದ್ದರು. ಆ ಸಂದರ್ಭದಲ್ಲಿ ಲಂಡನ್ ನಗರದಲ್ಲೇ ಜೋ ಗೊನ್ಸಾಲ್ವಿಸ್ ನೆಲೆಯಾಗಿದ್ದರು.

ಕಂಪನಿ ಉದ್ಯೋಗದಿಂದ ನಿವೃತ್ತಿಯಾದ ಬಳಿಕ ಶಿಕ್ಷಣ ಸಂಸ್ಥೆಗಳು ಮತ್ತು ಚಾರಿಟಿ ಸಂಸ್ಥೆಗಳಲ್ಲಿ ಡೈರೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಉತ್ತರ ಅಮೆರಿಕಾದಲ್ಲಿ ಮಂಗಳೂರಿನ ಸೈಂಟ್ ಅಲೋಸಿಯಸ್ ಅಲ್ಯುಮ್ನಿ ಅಸೋಸಿಯೇಶನ್ ಹೆಸರಲ್ಲಿ ಸಂಘಟನೆಯ ಸ್ಥಾಪಕರಾಗಿದ್ದರು. ನಿವೃತ್ತಿಯ ಬಳಿಕ ಮಂಗಳೂರಿನಲ್ಲಿದ್ದ ವೇಳೆ ಇಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿ, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ಅದರಂತೆ, 2015ರಲ್ಲಿ ಟ್ರಾಫಿಕ್ ವಾರ್ಡನ್ ಸೇವೆ ಆರಂಭಿಸಿದ್ದಲ್ಲದೆ ತಮ್ಮ 94ರ ವಯಸ್ಸಿನಲ್ಲಿ ಚೀಫ್ ವಾರ್ಡನ್ ಆಗಿ ಸೇವೆ ಆರಂಭಿಸಿದ್ದರು.
ನಿಯಮಿತ ಯೋಗ ಅಭ್ಯಾಸ ಮಾಡುತ್ತಾ ಬಂದಿದ್ದರಿಂದ ದೈಹಿಕವಾಗಿ ಸದೃಢರಾಗಿದ್ದರು. ವಯಸ್ಸಾದವರು ಯಾವ ರೀತಿ ದೈಹಿಕ ಆರೋಗ್ಯ ಬೆಳೆಸಿಕೊಳ್ಳಬೇಕು ಎನ್ನುವ ಬಗ್ಗೆ ಆಸಕ್ತರಿಗೆ ತರಬೇತಿ ಟಿಪ್ಸ್ ನೀಡುತ್ತಿದ್ದರು. ತನ್ನ ಉತ್ತಮ ಆರೋಗ್ಯದಿಂದಾಗಿ ಕೊನೆಯ ವರೆಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಜೋ ಗೊನ್ಸಾಲ್ವಿಸ್ ವಿಶೇಷ.
Well-known traffic warden chief Joseph Gonsalves, who had inspired a generation of Mangalureans with his social work and sense of public duty, passed away on Sunday August 29. He was 99.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm