ಬ್ರೇಕಿಂಗ್ ನ್ಯೂಸ್
30-08-21 04:35 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಕೊರೊನಾ ಕಾರಣಕ್ಕೆ ಹೆಚ್ಚು ಜನರು ಒಂದೇ ಕಡೆ ಸೇರುವುದಕ್ಕೆ ಅವಕಾಶವಿಲ್ಲ. ಆದರೆ, ಒಂದು ಜಾಗದಲ್ಲಿ ಸೇರುವ ಬದಲು ಏಕಕಾಲದಲ್ಲಿ ಜಗತ್ತಿನಾದ್ಯಂತ ಇರುವ ಸಾವಿರಾರು ಆಸಕ್ತರನ್ನು ಒಂದೇ ಕಡೆ ಸೇರಿಸಿ ಸಂವಾದಿಸಬಲ್ಲ ಡಿಜಿಟಲ್ ವೇದಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಅಂಥವುಗಳಲ್ಲಿ ವಾಟ್ಸಪ್, ಫೇಸ್ಬುಕ್ ಬಳಿಕ ಜನರನ್ನು ಹೆಚ್ಚು ಆಕರ್ಷಿಸಿದ್ದು ಕ್ಲಬ್ ಹೌಸ್.
ಹೊಸ ವಿಷ್ಯ ಏನಪ್ಪಾಂದ್ರೆ, ಕರಾವಳಿಯಲ್ಲಿ ಆಗಿಂದಾಗ್ಗೆ ಆಗುತ್ತಿದ್ದ ಹಿಂದು ಸಮಾವೇಶಗಳೂ ಈಗ ಈ ರೀತಿಯ ಡಿಜಿಟಲ್ ಪರದೆಗಳಲ್ಲಿ ಆರಂಭಗೊಂಡಿದೆ. ಮೊಟ್ಟಮೊದಲ ಬಾರಿಗೆ ಆಗಸ್ಟ್ 30ರಂದು ಹೊಸ ರೀತಿಯಲ್ಲಿ ಹಿಂದು ಸಮಾವೇಶ ಆಯೋಜನೆಗೊಂಡಿದ್ದು, ಪ್ರಖರ ಭಾಷಣಕಾರ ಎಂದು ಹೆಸರು ಪಡೆದಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇಂದು ಸಂಜೆ 7.30ಕ್ಕೆ ಕ್ಲಬ್ ಹೌಸ್ ನ ಹಿಂದುತ್ವ ಎನ್ನುವ ಪೇಜ್ ನಲ್ಲಿ ಹಿಂದು ಸಮಾವೇಶ ನಡೆಯಲಿದ್ದು, ಐದು ಸಾವಿರಕ್ಕೂ ಹೆಚ್ಚು ಜನ ಒಂದೆಡೆ ಸೇರಲಿದ್ದಾರೆ. ಮೊದಲ ಬಾರಿಗೆ ಈ ರೀತಿಯ ವೇದಿಕೆಯಲ್ಲಿ ಹಿಂದು ಸಮಾವೇಶ ನಡೆಯುತ್ತಿದ್ದು, ಕಲ್ಲಡ್ಕ ಪ್ರಭಾಕರ ಭಟ್ಟರ ಜೊತೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತಿ ಇರಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ಲೇಖಕ ರೋಹಿತ್ ಚಕ್ರತೀರ್ಥ ನಡೆಸಲಿದ್ದಾರೆ. ಖ್ಯಾತ ಗಾಯಕಿ ರಮ್ಯ ವಸಿಷ್ಠ ಪ್ರಾರ್ಥನೆ ಮತ್ತು ವಂದೇ ಮಾತರಂ ಹಾಡಲಿದ್ದಾರೆ.
ಅಂದಹಾಗೆ, ಹಿಂದುತ್ವ ಪರ ಘೋಷಣೆಗಳು, ಯುವಜನರ ಹಾರಾಟ ಇಲ್ಲದೆ ತಣ್ಣಗಿನ ರೂಪದಲ್ಲಿ ಕೇಳುಗರಲ್ಲಿ ಹಿಂದುತ್ವದ ಪರ ಅಲೆ ಎಬ್ಬಿಸುವ ಸಮಾವೇಶ ನಡೆಯುತ್ತಿರೋದು ಇದೇ ಮೊದಲು.
Mangalore Hindu Samavesha to be organised in Club house app for the first time where members around the world will be able to watch live.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm