ಬ್ರೇಕಿಂಗ್ ನ್ಯೂಸ್
30-08-21 10:13 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಕೇರಳಕ್ಕೆ ಹೊಂದಿಕೊಂಡಿದ್ದಲ್ಲದೆ, ಕೋವಿಡ್ ಪ್ರಕರಣ ಕಡಿಮೆಯಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು, ಹಾಸನ ಮತ್ತು ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಲಾಕ್ಡೌನ್ ಮುಂದುವರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದೇ ವೇಳೆ, ಮಹಾರಾಷ್ಟ್ರ ಹೊಂದಿಕೊಂಡಿರುವ ಬೆಳಗಾವಿ, ವಿಜಯಪುರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ವಿಧಿಸಿದ್ದ ವೀಕೆಂಡ್ ಕರ್ಫ್ಯೂ ಹಿಂದಕ್ಕೆ ಪಡೆಯಲಾಗಿದೆ.
ಸೆ.13ರ ವರೆಗೆ ಹೊಸ ಆದೇಶ ಜಾರಿಯಲ್ಲಿ ಇರಲಿದ್ದು ಅಲ್ಲೀ ವರೆಗೂ ನೈಟ್ ಕರ್ಫ್ಯೂ ಮತ್ತು ಇತರೇ ಕೋವಿಡ್ ನಿಯಮಗಳು ಅನ್ವಯವಾಗಲಿದೆ. ಇದೇ ವೇಳೆ, ದಕ್ಷಿಣ ಕನ್ನಡ ಸೇರಿ ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಮದುವೆ ಇನ್ನಿತರ ಕೌಟುಂಬಿಕ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ.
ಆದರೆ, ಮದುವೆ ಸಮಾರಂಭಗಳು ಸಣ್ಣ ಹಾಲ್ ಗಳಲ್ಲಿ ಅದರ ಸಾಮರ್ಥ್ಯದ ಅರ್ಧದಷ್ಟು ಮತ್ತು ದೊಡ್ಡ ಹಾಲ್ ಗಳಲ್ಲಿ 400ಕ್ಕೆ ಮೀರದಂತೆ ಜನರು ಸೇರಲು ಅವಕಾಶ ನೀಡಲಾಗಿದೆ. ವೀಕೆಂಡ್ ಲಾಕ್ಡೌನ್ ಇದ್ದರೂ ಈ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅವಕಾಶ ಇರುತ್ತದೆ. ಪರೀಕ್ಷೆಗೆ ಬರುವವರು ಹಾಲ್ ಟಿಕೆಟ್ ತೋರಿಸಿ ಸಂಚರಿಸಬಹುದು.
ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು. ಜೊತೆಗೆ, ಮೆಡಿಕಲ್, ಇಂಜಿನಿಯರಿಂಗ್ ಇನ್ನಿತರ ಉನ್ನತ ಶಿಕ್ಷಣಕ್ಕೆ ಬರುವ ವಿದ್ಯಾರ್ಥಿಗಳು ಏಳು ದಿನಗಳ ಕಾಲ ಕ್ವಾರಂಟೈನ್ ಇರಬೇಕು. ಆನಂತರ ಮತ್ತೊಮ್ಮೆ ಟೆಸ್ಟ್ ಮಾಡಿಸಿ, ನೆಗೆಟಿವ್ ಆದಲ್ಲಿ ಮಾತ್ರ ಕಾಲೇಜು ತರಗತಿ ತೆರಳಬಹುದು. ಕೇರಳ, ಮಹಾರಾಷ್ಟ್ರ ಗಡಿಭಾಗದಲ್ಲಿ ಪೊಲೀಸರ ಚೆಕ್ ಪೋಸ್ಟ್ ತಪಾಸಣೆ ಈಗಿನಂತೆಯೇ ಪರಿಶೀಲನೆ ಯಥಾಸ್ಥಿತಿ ಇರಲಿದೆ.
Night curfew would be relaxed in all areas except Kodagu, Hassan, Dakshina Kannada and Udupi districts, which share borders with Kerala. Karnataka government on Monday decided to ease night curfew regulations imposed in the state due to Covid-19 in most areas except four districts, which are sharing its borders with Kerala.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm