ಬ್ರೇಕಿಂಗ್ ನ್ಯೂಸ್
01-09-21 01:29 pm Mangaluru Correspondent ಕರಾವಳಿ
ಮಂಗಳೂರು, ಸೆ.1: ಫಲ್ಗುಣಿ ನದಿಯಿಂದ ವಿಷಯುಕ್ತ ನೀರನ್ನು ಜನರಿಗೆ ಕುಡಿಯಲು ಕೊಡುತ್ತಿರುವ ವಿಚಾರದ ಬಗ್ಗೆ ಹೈಕೋರ್ಟಿಗೆ ವರದಿ ಸಲ್ಲಿಕೆಯಾಗಿದ್ದು, ನ್ಯಾಯಾಧೀಶರು ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯಶೈಲಿ ಬಗ್ಗೆ ಮತ್ತೆ ಗರಂ ಆಗಿದ್ದಾರೆ. ನೀವು ನೀರಿನೊಂದಿಗೆ ವಿಷವನ್ನು ಬೆರಸಿ ಜನರಿಗೆ ಕುಡಿಯಲು ಕೊಡುತ್ತಿದ್ದೀರಾ ಎಂದು ಮಹಾನಗರ ಪಾಲಿಕೆಯನ್ನು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದೆ.

ಮಂಗಳೂರು ತಾಲೂಕಿನ 12 ಗ್ರಾಮಗಳ ವ್ಯಾಪ್ತಿಗೆ ಮರವೂರು ಡ್ಯಾಮಿನಿಂದ ಕುಡಿಯುವ ನೀರನ್ನು ಕೊಡಲಾಗುತ್ತಿದೆ. ಇದರ ಬಗ್ಗೆ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಲಿನ ನೀರನ್ನು ಕುಡಿಯಲು ಕೊಡುತ್ತಿರುವುದಾಗಿ ಆಕ್ಷೇಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿತ್ತು. ಆನಂತರ ಹೈಕೋರ್ಟ್, ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರಕ್ಕೆ ನೀರಿನ ತಪಾಸಣೆಗೆ ಸೂಚನೆ ನೀಡಿತ್ತು. ತಿಂಗಳ ಹಿಂದೆ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀರಿನಲ್ಲಿ ವಿಷಕಾರಿ ವಸ್ತು ಇರುವ ಬಗ್ಗೆ ಹೈಕೋರ್ಟಿಗೆ ವರದಿಯನ್ನೂ ನೀಡಿದ್ದರು.



ಇದೀಗ ಮಾಲಿನ್ಯ ನಿಯಂತ್ರಣ ಮಂಡಳಿಯ ಪರ ವಕೀಲರು ಪ್ರಯೋಗಾಲಯ ವರದಿಯನ್ನು ನ್ಯಾಯಾಧೀಶರ ಮುಂದೆ ಸಲ್ಲಿಸಿದ್ದಾರೆ. ಜಲಾಶಯ ಸೇರುವ ನೀರಿನಲ್ಲಿ ಅಮೋನಿಯಂ ನೈಟ್ರೇಟ್ ಮತ್ತು ಕಬ್ಬಿಣ, ಗಂಧಕ ರೀತಿಯ ವಿಷಕಾರಿ ಅಂಶಗಳು ಇರುವ ಬಗ್ಗೆ ವರದಿ ನೀಡಿದ್ದರು. ಅಲ್ಲದೆ, ಈ ನೀರನ್ನು ಕುಡಿಯಲು ಬಳಸುವುದು ಸೂಕ್ತವಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. ಅಲ್ಲದೆ, ಪಚ್ಚನಾಡಿ ತ್ಯಾಜ್ಯ ಶುದ್ಧೀಕರಣ ಘಟಕದಿಂದ ಯಾವುದೇ ರೀತಿಯಲ್ಲಿ ಕಲುಷಿತ ನೀರನ್ನು ಬಿಡಬಾರದು ಎಂದು ಮಂಗಳೂರಿನ ಪರಿಸರ ಅಧಿಕಾರಿಗಳು ವರದಿಯಲ್ಲಿ ಹೇಳಿದ್ದರು.
ವರದಿಯ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಕುಡಿಯುವ ನೀರು ಮಲಿನವಾಗಿರುವುದು ಗಂಭೀರ ವಿಚಾರ. ನೀವು ಜನರಿಗೆ ನೀರಿನೊಂದಿಗೆ ವಿಷ ಬೆರಸಿ ಕೊಡುತ್ತಿದ್ದೀರಾ ? ನದಿಯಲ್ಲಿ ವಿಷಕಾರಿ ಅಂಶಗಳಿವೆ ಅಂದರೆ, ಅದನ್ನೇ ಕುಡಿಯಲು ಕೊಡುತ್ತಿರೋದಾ.. ಶುದ್ಧ ಕುಡಿಯುವ ನೀರಿಗೆ ಏನು ಪರ್ಯಾಯ ವ್ಯವಸ್ಥೆ ಮಾಡಿದ್ದೀರಿ ಎಂದು ರಾಜ್ಯ ಸರಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆಯನ್ನು ತೀವ್ರವಾಗಿ ಪ್ರಶ್ನೆ ಮಾಡಿದ್ದು, ಮುಂದಿನ ವಿಚಾರಣೆ ದಿನಾಂಕದ ಒಳಗೆ ಪರ್ಯಾಯ ವ್ಯವಸ್ಥೆ ಬಗ್ಗೆ ವರದಿ ನೀಡುವಂತೆ ನಿರ್ದೇಶನ ನೀಡಿದೆ.
Karnataka high court slams MCC over Maravoor dam issue questions if you have drunk poisoned water. The marvoor dam has been polluted by dirty seepage water and has been getting circulated to 12 villages of Mangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm