ಬ್ರೇಕಿಂಗ್ ನ್ಯೂಸ್
01-09-21 01:29 pm Mangaluru Correspondent ಕರಾವಳಿ
ಮಂಗಳೂರು, ಸೆ.1: ಫಲ್ಗುಣಿ ನದಿಯಿಂದ ವಿಷಯುಕ್ತ ನೀರನ್ನು ಜನರಿಗೆ ಕುಡಿಯಲು ಕೊಡುತ್ತಿರುವ ವಿಚಾರದ ಬಗ್ಗೆ ಹೈಕೋರ್ಟಿಗೆ ವರದಿ ಸಲ್ಲಿಕೆಯಾಗಿದ್ದು, ನ್ಯಾಯಾಧೀಶರು ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯಶೈಲಿ ಬಗ್ಗೆ ಮತ್ತೆ ಗರಂ ಆಗಿದ್ದಾರೆ. ನೀವು ನೀರಿನೊಂದಿಗೆ ವಿಷವನ್ನು ಬೆರಸಿ ಜನರಿಗೆ ಕುಡಿಯಲು ಕೊಡುತ್ತಿದ್ದೀರಾ ಎಂದು ಮಹಾನಗರ ಪಾಲಿಕೆಯನ್ನು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದೆ.
ಮಂಗಳೂರು ತಾಲೂಕಿನ 12 ಗ್ರಾಮಗಳ ವ್ಯಾಪ್ತಿಗೆ ಮರವೂರು ಡ್ಯಾಮಿನಿಂದ ಕುಡಿಯುವ ನೀರನ್ನು ಕೊಡಲಾಗುತ್ತಿದೆ. ಇದರ ಬಗ್ಗೆ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಲಿನ ನೀರನ್ನು ಕುಡಿಯಲು ಕೊಡುತ್ತಿರುವುದಾಗಿ ಆಕ್ಷೇಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿತ್ತು. ಆನಂತರ ಹೈಕೋರ್ಟ್, ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರಕ್ಕೆ ನೀರಿನ ತಪಾಸಣೆಗೆ ಸೂಚನೆ ನೀಡಿತ್ತು. ತಿಂಗಳ ಹಿಂದೆ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀರಿನಲ್ಲಿ ವಿಷಕಾರಿ ವಸ್ತು ಇರುವ ಬಗ್ಗೆ ಹೈಕೋರ್ಟಿಗೆ ವರದಿಯನ್ನೂ ನೀಡಿದ್ದರು.
ಇದೀಗ ಮಾಲಿನ್ಯ ನಿಯಂತ್ರಣ ಮಂಡಳಿಯ ಪರ ವಕೀಲರು ಪ್ರಯೋಗಾಲಯ ವರದಿಯನ್ನು ನ್ಯಾಯಾಧೀಶರ ಮುಂದೆ ಸಲ್ಲಿಸಿದ್ದಾರೆ. ಜಲಾಶಯ ಸೇರುವ ನೀರಿನಲ್ಲಿ ಅಮೋನಿಯಂ ನೈಟ್ರೇಟ್ ಮತ್ತು ಕಬ್ಬಿಣ, ಗಂಧಕ ರೀತಿಯ ವಿಷಕಾರಿ ಅಂಶಗಳು ಇರುವ ಬಗ್ಗೆ ವರದಿ ನೀಡಿದ್ದರು. ಅಲ್ಲದೆ, ಈ ನೀರನ್ನು ಕುಡಿಯಲು ಬಳಸುವುದು ಸೂಕ್ತವಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. ಅಲ್ಲದೆ, ಪಚ್ಚನಾಡಿ ತ್ಯಾಜ್ಯ ಶುದ್ಧೀಕರಣ ಘಟಕದಿಂದ ಯಾವುದೇ ರೀತಿಯಲ್ಲಿ ಕಲುಷಿತ ನೀರನ್ನು ಬಿಡಬಾರದು ಎಂದು ಮಂಗಳೂರಿನ ಪರಿಸರ ಅಧಿಕಾರಿಗಳು ವರದಿಯಲ್ಲಿ ಹೇಳಿದ್ದರು.
ವರದಿಯ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಕುಡಿಯುವ ನೀರು ಮಲಿನವಾಗಿರುವುದು ಗಂಭೀರ ವಿಚಾರ. ನೀವು ಜನರಿಗೆ ನೀರಿನೊಂದಿಗೆ ವಿಷ ಬೆರಸಿ ಕೊಡುತ್ತಿದ್ದೀರಾ ? ನದಿಯಲ್ಲಿ ವಿಷಕಾರಿ ಅಂಶಗಳಿವೆ ಅಂದರೆ, ಅದನ್ನೇ ಕುಡಿಯಲು ಕೊಡುತ್ತಿರೋದಾ.. ಶುದ್ಧ ಕುಡಿಯುವ ನೀರಿಗೆ ಏನು ಪರ್ಯಾಯ ವ್ಯವಸ್ಥೆ ಮಾಡಿದ್ದೀರಿ ಎಂದು ರಾಜ್ಯ ಸರಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆಯನ್ನು ತೀವ್ರವಾಗಿ ಪ್ರಶ್ನೆ ಮಾಡಿದ್ದು, ಮುಂದಿನ ವಿಚಾರಣೆ ದಿನಾಂಕದ ಒಳಗೆ ಪರ್ಯಾಯ ವ್ಯವಸ್ಥೆ ಬಗ್ಗೆ ವರದಿ ನೀಡುವಂತೆ ನಿರ್ದೇಶನ ನೀಡಿದೆ.
Karnataka high court slams MCC over Maravoor dam issue questions if you have drunk poisoned water. The marvoor dam has been polluted by dirty seepage water and has been getting circulated to 12 villages of Mangalore.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm