ಬ್ರೇಕಿಂಗ್ ನ್ಯೂಸ್
01-09-21 03:57 pm Udupi Correspondent ಕರಾವಳಿ
ಉಡುಪಿ, ಸೆ.1: ಯಾವುದೇ ರಾಜ್ಯದ ಗಡಿಯನ್ನು ಹೊಂದಿರದ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಿರುವ ವಿಚಾರದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉಡುಪಿ ಯಾವುದೇ ಗಡಿ ಜಿಲ್ಲೆಗಳ ಸಾಲಿಗೆ ಸೇರುವುದಿಲ್ಲ. ಯಾವುದೇ ಇತರೇ ರಾಜ್ಯದ ಗಡಿಯನ್ನೂ ಹೊಂದಿಕೊಂಡಿಲ್ಲ. ಉಡುಪಿ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕೂಡ ಕಡಿಮೆಯಿದೆ. ಪಾಸಿಟಿವ್ ರೇಟ್ ಶೇ. 1.5 ಕ್ಕೆ ಇಳಿಕೆಯಾಗಿದೆ. ಹೀಗಿದ್ದರೂ ಈ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಿದ್ದು ಯಾಕೆಂದು ಗೊತ್ತಾಗಲ್ಲ. ಹೀಗಾಗಿ ಉಡುಪಿ ಜಿಲ್ಲೆಯನ್ನು ವೀಕೆಂಡ್ ಕರ್ಫ್ಯೂ ನಿಂದ ಹೊರಗಿಡಬೇಕು ಎಂದು ಒತ್ತಾಯಿಸಿದರು.
ಉಡುಪಿ ಜಿಲ್ಲೆಯ ಜನರು ಕಟ್ಟುನಿಟ್ಟಾಗಿ ಕೋವಿಡ್ ನಿಯಮ ಪಾಲಿಸುತ್ತಿದ್ದಾರೆ. ದಿನಕ್ಕೆ ಹತ್ತು ಸಾವಿರದಷ್ಟು ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಕರ್ಫ್ಯೂ ವಿಧಿಸಿದರೆ ವ್ಯಾಪಾರಸ್ಥರಿಗೆ ಮತ್ತೊಮ್ಮೆ ಸಮಸ್ಯೆಯಾಗುತ್ತೆ. ಈ ಬಗ್ಗೆ ನಾನು ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ. ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರ ಜೊತೆಯೂ ಚರ್ಚಿಸಿದ್ದೇನೆ. ಸಚಿವ ಸುನಿಲ್ ಕೂಡ ನನ್ನ ನಿಲುವು ಒಪ್ಪಿದ್ದಾರೆ. ಆರೋಗ್ಯ ಸಚಿವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ ಎಂದು ರಘುಪತಿ ಭಟ್ ತಿಳಿಸಿದ್ದಾರೆ.




ಜಿಲ್ಲೆಯಲ್ಲಿ ಶಾಲೆಗಳು ಕೂಡ ಆರಂಭಗೊಂಡಿದ್ದು, ಈ ನಡುವೆ ಕರ್ಪ್ಯೂ ಹೇರುವುದು ಸರಿಯಲ್ಲ. ನಮ್ಮಲ್ಲಿ ಶೇ. 70 ಮೊದಲ ಡೋಸ್ ಹಾಗೂ ಶೇ. 30 ರಷ್ಟು ಎರಡನೇ ಡೋಸ್ ಲಸಿಕೆ ನೀಡಿಯಾಗಿದೆ. ವ್ಯಾಕ್ಸಿನೇಶನ್ ಆದ ಮೇಲೂ ಕರ್ಪ್ಯೂ ಜಾರಿಯಾದರೆ ಜನರು ವಿಶ್ವಾಸ ಕಳೆದುಕೊಳ್ಳುತ್ತಾರೆ. ಗಡಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಸರಿಯಾದ ನಿರ್ಧಾರ. ಆದರೆ ಉಡುಪಿ ಜಿಲ್ಲೆಗೆ ಸರಿಯಲ್ಲ ಎಂದು ಹೇಳಿದರು.
ಸಾರ್ವಜನಿಕ ಗಣೇಶೋತ್ಸವ ವಿಚಾರದಲ್ಲಿ ಪ್ರತಿಕ್ರಿಯಿಸಿದ ಶಾಸಕ ರಘುಪತಿ ಭಟ್, ಗಣೇಶೋತ್ಸವವನ್ನು ಕಳೆದ ವರ್ಷವೂ ವಿಜೃಂಭಣೆಯಿಲ್ಲದೆ ಆಚರಣೆ ಮಾಡಿದ್ದೇವೆ. ಹಾಗೆಂದು ಕೋವಿಡ್ ಸಮಯದಲ್ಲಿ ಮೆರವಣಿಗೆ ಮಾಡಬೇಕೆಂಬ ಅಪೇಕ್ಷೆ ಸರಿಯಲ್ಲ. ಶಾಸ್ತ್ರೋಕ್ತವಾಗಿ ಗಣೇಶನ ಮೂರ್ತಿ ಇಟ್ಟು ಪೂಜಿಸಲು ಅನುಮತಿ ಸಿಗಲಿದೆ. ಸರ್ಕಾರ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಲಿದೆ ಎಂದು ಹೇಳಿದರು.
Udupi MLA Raghupathi bhat slams govt over weekend curfew in Udupi
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm