ಬ್ರೇಕಿಂಗ್ ನ್ಯೂಸ್
03-09-21 03:31 pm Mangaluru Correspondent ಕರಾವಳಿ
ಉಳ್ಳಾಲ, ಸೆ.3: ದ್ವಿಚಕ್ರ ವಾಹನಗಳಿಗೂ ಚಲಿಸಲಾಗದ ಸ್ಥಿತಿಯಲ್ಲಿ ಕೆಟ್ಟು ಕೆರ ಹಿಡಿದಿದ್ದ ಕುಂಪಲ ಸರಳಾಯ ಕಾಲನಿ ಮುಖ್ಯ ರಸ್ತೆಗೆ ಕೊನೆಗೂ ಕಾಯಕಲ್ಪ ದೊರಕಿದ್ದು ರಸ್ತೆ ಕಾಂಕ್ರಿಟೀಕರಣಕ್ಕೆ ಶಾಸಕ ಯು.ಟಿ. ಖಾದರ್ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.
ಕುಂಪಲ ಸರಳಾಯ ಕಾಲನಿ ಮಧ್ಯಮ ವರ್ಗದ ಜನರೇ ಹೆಚ್ಚು ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶವಾಗಿದೆ. ಹಿಂದೆಯೂ ಈ ಕಾಲನಿಯ ಅಡ್ಡ ರಸ್ತೆಗಳು ನಾದುರಸ್ಥಿಯಲ್ಲಿದ್ದಾಗ ಇಲ್ಲಿನ ಪ್ರದೇಶವಾಸಿಗಳು ಸರಕಾರದ ಅನುದಾನವನ್ನ ಕಾಯದೆ ಸ್ವಂತ ಹಣವನ್ನೇ ಒಗ್ಗೂಡಿಸಿ ಸುಸಜ್ಜಿತ ಕಾಂಕ್ರೀಟ್ ಅಡ್ಡ ರಸ್ತೆಗಳನ್ನು ತಾವೇ ನಿರ್ಮಿಸಿ ಸುದ್ದಿಯಾಗಿದ್ದರು.
ಸರಳಾಯ ಕಾಲನಿಯಿಂದ ಪಿಲಾರು ಪಲ್ಲ ಸಂಪರ್ಕದ ಮುಖ್ಯ ರಸ್ತೆಯು ಕಳೆದ ಹಲವಾರು ವರುಷಗಳಿಂದ ನಡೆಯಲೂ ಯೋಗ್ಯವಿಲ್ಲದ ಕಚ್ಛಾ ರಸ್ತೆಯಾಗಿಯೇ ಉಳಿದಿತ್ತು. ಈ ರಸ್ತೆಗಳಿಂದ ಸಂಚರಿಸುವ ದ್ವಿಚಕ್ರ ವಾಹನಗಳು ರಸ್ತೆ ನಡುವಿನ ಹೊಂಡಗಳಿಗೆ ಸಿಲುಕಿ ಪಲ್ಟಿ ಹೊಡೆಯುತ್ತಾ ಸಾಗುತ್ತಿದ್ದವು.






ರಸ್ತೆಯ ದುಸ್ಥಿಯನ್ನ ಅವಲೋಕಿಸಿದ್ದ ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರು ಕಾಂಕ್ರಿಟೀಕರಣಕ್ಕೆ ತಕ್ಷಣ ಅನುದಾನ ಮಂಜೂರು ಮಾಡಿದ್ದಾರೆ. ಇಂದು ನೂತನ ಕಾಂಕ್ರಿಟೀಕರಣ ಕಾಮಗಾರಿಗೆ ಅವರು ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ನೂತನವಾಗಿ ನಿರ್ಮಾಣವಾಗುವ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುಣಮಟ್ಟವನ್ನ ಸ್ಥಳೀಯರೇ ಅಳೆಯುವಂತಾಗಬೇಕು. ರಸ್ತೆಯು ಮೂವತ್ತು ವರ್ಷಗಳ ಬಳಕೆಗೆ ಯೋಗ್ಯವಿರುವಂತೆ ಗುಣಮಟ್ಟವನ್ನು ಗುತ್ತಿಗೆದಾರರು ಕಾಯ್ದುಕೊಳ್ಳಬೇಕು. ಕಾಂಕ್ರೀಟ್ ರಸ್ತೆಯ ಗುಣ ಮಟ್ಟಕ್ಕೆ ಕುಂಪಲ - ಚೇತನನಗರ ಮುಖ್ಯ ರಸ್ತೆಯೆ ಮಾದರಿ ಎಂದರು. ರಸ್ತೆ ನಿರ್ಮಾಣದ ವೇಳೆ ಸ್ಥಳೀಯರು ತಾಳ್ಮೆ ವಹಿಸಿದಲ್ಲಿ ಅತ್ಯುತ್ತಮ ರಸ್ತೆ ನಿರ್ಮಾಣವಾಗಲಿದೆ ಎಂದರು.
ಇದೇ ವೇಳೆ ಕುಂಪಲ ಆಶ್ರಯ ಕಾಲನಿಯಲ್ಲಿ ನಿರ್ಮಾಣಗೊಂಡ ನೂತನ ಇಂಟರ್ ಲಾಕ್ ರಸ್ತೆಯನ್ನೂ ಅವರು ಉದ್ಘಾಟಿಸಿದರು.ಪ್ರಮುಖರಾದ ಶ್ರೀಧರ ಆಳ್ವ, ಸದಾಶಿವ ಉಳ್ಳಾಲ್, ದಿನೇಶ್ ಕುಂಪಲ, ದೇವೇಶ ಸರಳಾಯ, ನಳಿನಿ, ಸೋಮೇಶ್ವರ ಪುರಸಭೆಯ ನಿಕಟ ಪೂರ್ವ ಸದಸ್ಯರಾದ ಪುರುಷೋತ್ತಮ ಶೆಟ್ಟಿ ಪಿಲಾರ್, ದೀಪಕ್ ಪಿಲಾರ್, ಉದಯಗಟ್ಟಿ ಪಿಲಾರ್, ಮುಖಂಡರಾದ ಸತೀಶ್ ಉಳ್ಳಾಲ್, ವಿನೋದ್, ಎ.ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.
Kumpala colony in ullal road concrete work to begin and inauguration.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm