ಬ್ರೇಕಿಂಗ್ ನ್ಯೂಸ್
03-09-21 10:22 pm Mangaluru Correspondent ಕರಾವಳಿ
ಮಂಗಳೂರು, ಸೆ.3 : ರಾಷ್ಟ್ರೀಯ ತನಿಖಾ ದಳದ ಕಚೇರಿ ಮಂಗಳೂರಿನಲ್ಲಿ ಆಗತ್ತೆ ಎನ್ನುವ ಸುದ್ದಿ ಹಬ್ಬುತ್ತಿರುವಾಗಲೇ ಆರ್ಥಿಕ ಅಪರಾಧಗಳ ಬಗ್ಗೆ ತನಿಖೆ ನಡೆಸುವ ಕೇಂದ್ರ ಸರಕಾರದ ಕಂದಾಯ ಇಲಾಖೆ ಅಧೀನದ ಜಾರಿ ನಿರ್ದೇಶನಾಲಯ (ಇಡಿ) ವಲಯ ಕಚೇರಿಯನ್ನು ಮಂಗಳೂರಿನಲ್ಲಿ ಸದ್ದಿಲ್ಲದೆ ಆರಂಭಿಸಲಾಗಿದೆ.
ನಗರದ ಕಂಕನಾಡಿಯಲ್ಲಿ ಉಪ ವಲಯ ಕಚೇರಿ ಸೆ.3 ರಿಂದಲೇ ಆರಂಭಗೊಂಡಿರುವ ಬಗ್ಗೆ ಇಡಿ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ. ವಲಯ ಕಚೇರಿ ಬೆಂಗಳೂರಿನಲ್ಲಿದ್ದು ಅದರ ಅಧೀನದಲ್ಲಿ ಉಪ ಕಚೇರಿಯನ್ನು ತೆರೆಯಲಾಗಿದ್ದು ಇದರ ವ್ಯಾಪ್ತಿ ಕರ್ನಾಟಕದ 15 ಜಿಲ್ಲೆಗಳನ್ನು ಒಳಗೊಂಡಿದೆ.

ಮಂಗಳೂರಿನ ಕಚೇರಿಯು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟ, ಹಾವೇರಿ, ಬೀದರ್, ಗುಲ್ಬರ್ಗ, ಬಿಜಾಪುರ, ರಾಯಚೂರು, ಧಾರವಾಡ, ಗದಗ, ಕೊಪ್ಪಳ ವ್ಯಾಪ್ತಿಯನ್ನು ಹೊಂದಿರುತ್ತದೆ. ಇಷ್ಟೂ ಜಿಲ್ಲೆಗಳ ವ್ಯಾಪ್ತಿಗೆ ಡೆಪ್ಯುಟಿ ಡೈರೆಕ್ಟರ್ ಒಬ್ಬರನ್ನು ಮುಖ್ಯಸ್ಥನಾಗಿ ನೇಮಕ ಮಾಡಲಾಗಿದೆ. ಇವರು ಬೆಂಗಳೂರು ವಲಯ ಕಚೇರಿಯ ಅಧೀನದಲ್ಲಿ 15 ಜಿಲ್ಲೆಗಳ ವ್ಯಾಪ್ತಿಯಲ್ಲಿ ದಾಳಿ, ತನಿಖೆ ನಡೆಸುವ ಜವಾಬ್ದಾರಿ ಹೊಂದಿರುತ್ತಾರೆ.
ಐಟಿ ಮತ್ತು ಇಡಿ ಪರಸ್ಪರ ಹತ್ತಿರದ ನಂಟನ್ನು ಹೊಂದಿರುವ ಪ್ರತ್ಯೇಕ ತನಿಖಾ ವಿಭಾಗ. ತೆರಿಗೆ ವಂಚನೆ ಇನ್ನಿತರ ಪ್ರಕರಣಗಳನ್ನು ಐಟಿ ಅಧಿಕಾರಿಗಳು ನಡೆಸಿದರೆ, ಯಾವುದೇ ಪ್ರಕರಣಗಳಲ್ಲಿ ಬೇಕಾಬಿಟ್ಟಿ ಹಣದ ವಹಿವಾಟು ನಡೆದಿದ್ದರೆ, ಆಮೂಲಕ ಕೋಟ್ಯಂತರ ರೂಪಾಯಿ ವಂಚನೆ ಆಗಿರೋದು ಮತ್ತು ಹಣದ ಮೂಲವನ್ನು ಪತ್ತೆ ಮಾಡುವುದು ಇಡಿ ಅಧಿಕಾರಿಗಳ ತನಿಖೆ ಆಗಿರುತ್ತದೆ. ಕರ್ನಾಟಕದಲ್ಲಿ ಬೆಂಗಳೂರಲ್ಲೇ ಕಚೇರಿ ಇದ್ದುಕೊಂಡು ಇಡೀ ರಾಜ್ಯ ವ್ಯಾಪ್ತಿಯಲ್ಲಿ ದಾಳಿ, ತನಿಖೆ ನಡೆಸಲಾಗುತ್ತಿತ್ತು. ಇದೀಗ ಉಪ ವಲಯ ಕಚೇರಿಯೆಂದು ರಾಜ್ಯದಲ್ಲಿ ಬೆಂಗಳೂರನ್ನು ಬಿಟ್ಟರೆ ಅತಿ ಹೆಚ್ಚು ವಾಣಿಜ್ಯ ವಹಿವಾಟು ನಡೆಯುವ ಮಂಗಳೂರಿನಲ್ಲಿ ಹೊಸತಾಗಿ ಆರಂಭಿಸಲಾಗಿದೆ. ಬಾಕಿ ಉಳಿದಿರುವ ಆರ್ಥಿಕ ಅಪರಾಧಗಳ ತನಿಖೆಗೆ ಇನ್ನಷ್ಟು ವೇಗ ಸಿಗಲಿದೆ ಎನ್ನಲಾಗುತ್ತಿದೆ.
The new sub-zonal office of Directorate of Enforcement, department of Revenue, government of India, started functioning at its office at Kankanady from Friday September 3. The sub zonal office will function under the Bengaluru zonal office. The Mangaluru sub-zonal office shall be headed by a deputy director.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm