ಬ್ರೇಕಿಂಗ್ ನ್ಯೂಸ್
07-09-20 06:26 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 7: ಅಂಗಡಿ ಮಾಲಕ ತಾನು ವ್ಯಾಪಾರ ಮಾಡುತ್ತಿದ್ದ ಅಂಗಡಿಗೆ ತಾನೇ ಬೆಂಕಿ ಹಚ್ಚಿ ಭಸ್ಮ ಮಾಡಿದ ವಿಚಿತ್ರ ಘಟನೆ ದಕ್ಷಿಣ ಕನ್ನಡದ ಪುತ್ತೂರು ಸಮೀಪ ನಡೆದಿದೆ. ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದ್ದು ಈ ಘಟನೆ ಸ್ಥಳೀಯರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಅಂಗಡಿ ಮಾಲಿಕ ತನ್ನ ಅಂಗಡಿಗೆ ತಾನೇ ಬೆಂಕಿ ಇಟ್ಟಿದೇಕೆ ಎಂಬುದು ಮಾತ್ರ ನಿಗೂಢವಾಗಿದೆ.
ಮಾವಿನಕಟ್ಟೆ ನಿವಾಸಿ ಮಹಮ್ಮದ್ ಎಂಬವರು ಕಳೆದ 4 ವರ್ಷಗಳಿಂದ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಲಾಕ್ಡೌನ್ ಬಳಿಕ ಕಳೆದ ಎರಡು ತಿಂಗಳಿನಿಂದ ಅಂಗಡಿಯಲ್ಲಿ ವ್ಯಾಪಾರ ಆರಂಭಿಸಿದ್ದರು. ಅಂಗಡಿಯಲ್ಲಿ ಸ್ಟೇಶನರಿ ಸಾಮಾಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಕೂಡಾ ಅದರೊಳಗಿತ್ತು. ಇಂದು ಬೆಳಗ್ಗೆ ಎಂದಿನಂತೆ ಮಹಮ್ಮದ್ರವರು ಅಂಗಡಿ ಬಾಗಿಲು ತೆರೆದಿದ್ದರು. ಮಧ್ಯಾಹ್ನ ಆಗುತ್ತಲೇ ಅಂಗಡಿಯೊಳಗಿನಿಂದ ಹೊರಗೆ ಬಂದು ತನ್ನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅಂಗಡಿಯೊಳಗೆ ಬೆಂಕಿ ಹಾಕುತ್ತಿರುವ ದೃಶ್ಯವನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಅಂಗಡಿಯತ್ತ ಧಾವಿಸಿದ್ದು ಆ ವೇಳೆ ಬೆಂಕಿ ನಂದಿಸದಂತೆ ಮಾಲಕ ಮಹಮ್ಮದ್ ತಡೆದಿದ್ದಾರೆ ಎಂದು ಹೇಳಲಾಗಿದೆ.
ತನ್ನ ಅಂಗಡಿಗೆ ಬೆಂಕಿ ಇಟ್ಟ ಮಹಮ್ಮದ್ ನಂತರ ತನ್ನ ಮನೆಯತ್ತ ತೆರಳಿದ್ದಾರೆ. ಆದರೆ ಸ್ಥಳೀಯರು ಮಹಮ್ಮದ್ ಮನೆಗೆ ತೆರಳಿದ ಬಳಿಕ ಅಂಗಡಿಯೊಳಗಿನ ಬೆಂಕಿಯನ್ನು ನಂದಿಸಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಂಪ್ಯ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm