ಬ್ರೇಕಿಂಗ್ ನ್ಯೂಸ್
05-09-21 06:02 pm Headline Karnataka News Network ಕರಾವಳಿ
ಪುತ್ತೂರು, ಸೆ.5 : ರೈಲ್ವೇ ಹಳಿಗೆ ಅಳವಡಿಸಿರುವ ಜಾಯಿಂಟ್ ಕ್ಲಿಪ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಸುಮಾರು ಒಂದು ತಿಂಗಳಿನಿಂದ ರೈಲು ಹಳಿಯಿಂದ ಕಬ್ಬಿಣದ ಕ್ಲಿಪ್ಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮಫ್ತಿಯಲ್ಲಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದರು.

ಶನಿವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಮಫ್ತಿಯಲ್ಲಿದ್ದ ರೈಲ್ವೇ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಒಂದು ಟಾಟಾ ಏಸ್ ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಆರೋಪಿಗಳನ್ನು ಸಕಲೇಶಪುರ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿದ್ದಾರೆ. ರೈಲು ಹಳಿಗೆ ಅಳವಡಿಸುವ ಎಂಟು ಆಕಾರದ ಜಾಯಿಂಟ್ ಕ್ಲಿಪ್ ಗಳನ್ನು ಕೆಲವರು ಸೇರಿಕೊಂಡು ವ್ಯವಸ್ಥಿತವಾಗಿ ಕಳವು ಮಾಡುತ್ತಿದ್ದರು. ಆದರೆ, ಈ ರೀತಿ ಜಾಯಿಂಟ್ ಗಳನ್ನು ತೆರವು ಮಾಡಿದಲ್ಲಿ ಹಳಿ ಬಿಗಿತ ಕಳಕೊಂಡು ಸಡಿಲವಾಗುತ್ತದೆ. ಇದರಿಂದ ರೈಲು ಹಳಿ ತಪ್ಪಿ ಉರುಳಿ ಬೀಳುವ ಸಾಧ್ಯತೆ ಇರುತ್ತದೆ. ಹೀಗಾಗಿ ರೈಲಿನ ಕ್ಲಿಪ್ ಕಳವು ಮಾಡುವುದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು ವಿಧ್ವಂಸಕ ಕೃತ್ಯದ ಉದ್ದೇಶ ಇದರ ಹಿಂದಿತ್ತಾ ಅನ್ನುವುದರ ಬಗ್ಗೆ ತನಿಖೆ ನಡೆಸಲಿದ್ದಾರೆ.
Puttur Two arrested for stealing Railway track Join clips railway police take the case seriously. Police arrested the two after the public gave cops information after which police who came in civil dress caught the culprits read handed.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm