ಬ್ರೇಕಿಂಗ್ ನ್ಯೂಸ್
06-09-21 01:50 pm Udupi Correspondent ಕರಾವಳಿ
ಉಡುಪಿ, ಸೆ.6 : ಬ್ಯಾಂಕಿನಲ್ಲಿ ಭದ್ರವಾಗಿರಲಿ ಅಂತ ಇಟ್ಟಿದ್ದ ಫಿಕ್ಸೆಡ್ ಡೆಪಾಸಿಟ್ ಹಣವೇ ಕಾಣೆಯಾಗಿದ್ದು ಆನಂತರ ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸಿದ ವ್ಯಕ್ತಿಗೆ ಗ್ರಾಹಕರ ನ್ಯಾಯಾಲಯದಲ್ಲಿ ಗೆಲುವು ಸಿಕ್ಕಿದೆ.
ಕುಂದಾಪುರದ ಉಪ್ಪೂರು ನಿವಾಸಿ ಹರೀಶ್ ಗುಡಿಗಾರ್ ಹಣ ಕಳೆದುಕೊಂಡವರು. ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದಾಗ ಮಲ್ಲೇಶ್ವರಂನ ಸ್ಟೇಟ್ ಬ್ಯಾಂಕಿನಲ್ಲಿ ಸೇವಿಂಗ್ಸ್ ಬ್ಯಾಂಕ್ ಖಾತೆ ಹೊಂದಿದ್ದರು. ಊರಿನಲ್ಲಿ ಸ್ವಂತದೊಂದು ಮನೆ ನಿರ್ಮಿಸಬೇಕೆಂದು ಅಕೌಂಟ್ನಲ್ಲಿ ಹಣ ಕೂಡಿಟ್ಟಿದ್ದರು. ಬೆಂಗಳೂರು ತೊರೆದ ಬಳಿಕ 2019ರಲ್ಲಿ ಉಡುಪಿಯ ಸಂತೆಕಟ್ಟೆಯ ಎಸ್ಬಿಐ ಬ್ರಾಂಚಿಗೆ ತಮ್ಮ ಖಾತೆಯನ್ನು ವರ್ಗಾವಣೆ ಮಾಡಿದ್ದರು. ತನ್ನ ದುಡಿಮೆಯ ಐದೂವರೆ ಲಕ್ಷ ರೂ.ವನ್ನು ಹರೀಶ್ ಫಿಕ್ಸೆಡ್ ಡಿಪಾಸಿಟ್ ಆಗಿ ಇಟ್ಟಿದ್ದರು.


ಈ ನಡುವೆ, 2019 ಆಗಸ್ಟ್ 23 ರಂದು ಮೊಬೈಲ್ಗೆ ಬಂದ ಮೆಸೇಜ್ ಗಮನಿಸಿ ಬ್ಯಾಂಕಿಗೆ ತೆರಳಿ ನೋಡಿದಾಗ, ಫಿಕ್ಸೆಡ್ ಡೆಪಾಸಿಟ್ನಲ್ಲಿದ್ದ ಹಣವೇ ಮಂಗ ಮಾಯವಾಗಿತ್ತು. ಅದರಲ್ಲಿ, ರೂ. 6360 ಮಾತ್ರ ಉಳಿದಿತ್ತು. ಹಣ ಕಳೆದುಕೊಂಡ ಹರೀಶ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದರೂ, ಯಾವುದೇ ಪ್ರಯೋಜನ ಆಗಲಿಲ್ಲ. ಎರಡು ವರ್ಷ ಹಣ ಕಳೆದುಕೊಂಡು ಓದ್ದಾಡಿದ ಹರೀಶ್, ಬಳಿಕ ಗ್ರಾಹಕರ ನ್ಯಾಯಾಲಯಕ್ಕೆ ಹೋಗಿದ್ದಾರೆ.
ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ರವೀಂದ್ರನಾಥ್ ಶಾನುಬಾಗ್ ಬಳಿ ತಮ್ಮ ಅಳಲನ್ನು ತೋಡಿಕೊಂಡು ಗ್ರಾಹಕ ನ್ಯಾಯಾಲಯದ ಕದ ತಟ್ಟಿದರು. ಎಲ್ಲ ತನಿಖೆ ನಡೆದ ಬಳಿಕ ಹರೀಶ್ ಪರವಾಗಿ ತೀರ್ಪು ಬಂದಿತ್ತು. ಕಳೆದುಕೊಂಡ ಹಣವನ್ನು ಬಡ್ಡಿ ಸಮೇತ ಅಂದ್ರೆ, ಐದೂವರೆ ಲಕ್ಷಕ್ಕೆ 10% ಬಡ್ಡಿ ನೀಡಬೇಕು, ಜೊತೆಗೆ 50 ಸಾವಿರ ಪರಿಹಾರ, ಕೋರ್ಟ್ ವೆಚ್ಚ ಎಂದು ಹೆಚ್ಚುವರಿ 10 ಸಾವಿರ ರೂ. ಮೂವತ್ತು ದಿನಗಳ ಒಳಗೆ ನೀಡಬೇಕು ಅಂತ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ.
In public sector bank SBI lacs of fixed deposit is wrong doing customer court given,
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm