ಬ್ರೇಕಿಂಗ್ ನ್ಯೂಸ್
06-09-21 01:50 pm Udupi Correspondent ಕರಾವಳಿ
ಉಡುಪಿ, ಸೆ.6 : ಬ್ಯಾಂಕಿನಲ್ಲಿ ಭದ್ರವಾಗಿರಲಿ ಅಂತ ಇಟ್ಟಿದ್ದ ಫಿಕ್ಸೆಡ್ ಡೆಪಾಸಿಟ್ ಹಣವೇ ಕಾಣೆಯಾಗಿದ್ದು ಆನಂತರ ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸಿದ ವ್ಯಕ್ತಿಗೆ ಗ್ರಾಹಕರ ನ್ಯಾಯಾಲಯದಲ್ಲಿ ಗೆಲುವು ಸಿಕ್ಕಿದೆ.
ಕುಂದಾಪುರದ ಉಪ್ಪೂರು ನಿವಾಸಿ ಹರೀಶ್ ಗುಡಿಗಾರ್ ಹಣ ಕಳೆದುಕೊಂಡವರು. ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದಾಗ ಮಲ್ಲೇಶ್ವರಂನ ಸ್ಟೇಟ್ ಬ್ಯಾಂಕಿನಲ್ಲಿ ಸೇವಿಂಗ್ಸ್ ಬ್ಯಾಂಕ್ ಖಾತೆ ಹೊಂದಿದ್ದರು. ಊರಿನಲ್ಲಿ ಸ್ವಂತದೊಂದು ಮನೆ ನಿರ್ಮಿಸಬೇಕೆಂದು ಅಕೌಂಟ್ನಲ್ಲಿ ಹಣ ಕೂಡಿಟ್ಟಿದ್ದರು. ಬೆಂಗಳೂರು ತೊರೆದ ಬಳಿಕ 2019ರಲ್ಲಿ ಉಡುಪಿಯ ಸಂತೆಕಟ್ಟೆಯ ಎಸ್ಬಿಐ ಬ್ರಾಂಚಿಗೆ ತಮ್ಮ ಖಾತೆಯನ್ನು ವರ್ಗಾವಣೆ ಮಾಡಿದ್ದರು. ತನ್ನ ದುಡಿಮೆಯ ಐದೂವರೆ ಲಕ್ಷ ರೂ.ವನ್ನು ಹರೀಶ್ ಫಿಕ್ಸೆಡ್ ಡಿಪಾಸಿಟ್ ಆಗಿ ಇಟ್ಟಿದ್ದರು.
ಈ ನಡುವೆ, 2019 ಆಗಸ್ಟ್ 23 ರಂದು ಮೊಬೈಲ್ಗೆ ಬಂದ ಮೆಸೇಜ್ ಗಮನಿಸಿ ಬ್ಯಾಂಕಿಗೆ ತೆರಳಿ ನೋಡಿದಾಗ, ಫಿಕ್ಸೆಡ್ ಡೆಪಾಸಿಟ್ನಲ್ಲಿದ್ದ ಹಣವೇ ಮಂಗ ಮಾಯವಾಗಿತ್ತು. ಅದರಲ್ಲಿ, ರೂ. 6360 ಮಾತ್ರ ಉಳಿದಿತ್ತು. ಹಣ ಕಳೆದುಕೊಂಡ ಹರೀಶ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದರೂ, ಯಾವುದೇ ಪ್ರಯೋಜನ ಆಗಲಿಲ್ಲ. ಎರಡು ವರ್ಷ ಹಣ ಕಳೆದುಕೊಂಡು ಓದ್ದಾಡಿದ ಹರೀಶ್, ಬಳಿಕ ಗ್ರಾಹಕರ ನ್ಯಾಯಾಲಯಕ್ಕೆ ಹೋಗಿದ್ದಾರೆ.
ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ರವೀಂದ್ರನಾಥ್ ಶಾನುಬಾಗ್ ಬಳಿ ತಮ್ಮ ಅಳಲನ್ನು ತೋಡಿಕೊಂಡು ಗ್ರಾಹಕ ನ್ಯಾಯಾಲಯದ ಕದ ತಟ್ಟಿದರು. ಎಲ್ಲ ತನಿಖೆ ನಡೆದ ಬಳಿಕ ಹರೀಶ್ ಪರವಾಗಿ ತೀರ್ಪು ಬಂದಿತ್ತು. ಕಳೆದುಕೊಂಡ ಹಣವನ್ನು ಬಡ್ಡಿ ಸಮೇತ ಅಂದ್ರೆ, ಐದೂವರೆ ಲಕ್ಷಕ್ಕೆ 10% ಬಡ್ಡಿ ನೀಡಬೇಕು, ಜೊತೆಗೆ 50 ಸಾವಿರ ಪರಿಹಾರ, ಕೋರ್ಟ್ ವೆಚ್ಚ ಎಂದು ಹೆಚ್ಚುವರಿ 10 ಸಾವಿರ ರೂ. ಮೂವತ್ತು ದಿನಗಳ ಒಳಗೆ ನೀಡಬೇಕು ಅಂತ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ.
In public sector bank SBI lacs of fixed deposit is wrong doing customer court given,
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm