ಬ್ರೇಕಿಂಗ್ ನ್ಯೂಸ್
06-09-21 01:50 pm Udupi Correspondent ಕರಾವಳಿ
ಉಡುಪಿ, ಸೆ.6 : ಬ್ಯಾಂಕಿನಲ್ಲಿ ಭದ್ರವಾಗಿರಲಿ ಅಂತ ಇಟ್ಟಿದ್ದ ಫಿಕ್ಸೆಡ್ ಡೆಪಾಸಿಟ್ ಹಣವೇ ಕಾಣೆಯಾಗಿದ್ದು ಆನಂತರ ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸಿದ ವ್ಯಕ್ತಿಗೆ ಗ್ರಾಹಕರ ನ್ಯಾಯಾಲಯದಲ್ಲಿ ಗೆಲುವು ಸಿಕ್ಕಿದೆ.
ಕುಂದಾಪುರದ ಉಪ್ಪೂರು ನಿವಾಸಿ ಹರೀಶ್ ಗುಡಿಗಾರ್ ಹಣ ಕಳೆದುಕೊಂಡವರು. ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದಾಗ ಮಲ್ಲೇಶ್ವರಂನ ಸ್ಟೇಟ್ ಬ್ಯಾಂಕಿನಲ್ಲಿ ಸೇವಿಂಗ್ಸ್ ಬ್ಯಾಂಕ್ ಖಾತೆ ಹೊಂದಿದ್ದರು. ಊರಿನಲ್ಲಿ ಸ್ವಂತದೊಂದು ಮನೆ ನಿರ್ಮಿಸಬೇಕೆಂದು ಅಕೌಂಟ್ನಲ್ಲಿ ಹಣ ಕೂಡಿಟ್ಟಿದ್ದರು. ಬೆಂಗಳೂರು ತೊರೆದ ಬಳಿಕ 2019ರಲ್ಲಿ ಉಡುಪಿಯ ಸಂತೆಕಟ್ಟೆಯ ಎಸ್ಬಿಐ ಬ್ರಾಂಚಿಗೆ ತಮ್ಮ ಖಾತೆಯನ್ನು ವರ್ಗಾವಣೆ ಮಾಡಿದ್ದರು. ತನ್ನ ದುಡಿಮೆಯ ಐದೂವರೆ ಲಕ್ಷ ರೂ.ವನ್ನು ಹರೀಶ್ ಫಿಕ್ಸೆಡ್ ಡಿಪಾಸಿಟ್ ಆಗಿ ಇಟ್ಟಿದ್ದರು.


ಈ ನಡುವೆ, 2019 ಆಗಸ್ಟ್ 23 ರಂದು ಮೊಬೈಲ್ಗೆ ಬಂದ ಮೆಸೇಜ್ ಗಮನಿಸಿ ಬ್ಯಾಂಕಿಗೆ ತೆರಳಿ ನೋಡಿದಾಗ, ಫಿಕ್ಸೆಡ್ ಡೆಪಾಸಿಟ್ನಲ್ಲಿದ್ದ ಹಣವೇ ಮಂಗ ಮಾಯವಾಗಿತ್ತು. ಅದರಲ್ಲಿ, ರೂ. 6360 ಮಾತ್ರ ಉಳಿದಿತ್ತು. ಹಣ ಕಳೆದುಕೊಂಡ ಹರೀಶ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದರೂ, ಯಾವುದೇ ಪ್ರಯೋಜನ ಆಗಲಿಲ್ಲ. ಎರಡು ವರ್ಷ ಹಣ ಕಳೆದುಕೊಂಡು ಓದ್ದಾಡಿದ ಹರೀಶ್, ಬಳಿಕ ಗ್ರಾಹಕರ ನ್ಯಾಯಾಲಯಕ್ಕೆ ಹೋಗಿದ್ದಾರೆ.
ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ರವೀಂದ್ರನಾಥ್ ಶಾನುಬಾಗ್ ಬಳಿ ತಮ್ಮ ಅಳಲನ್ನು ತೋಡಿಕೊಂಡು ಗ್ರಾಹಕ ನ್ಯಾಯಾಲಯದ ಕದ ತಟ್ಟಿದರು. ಎಲ್ಲ ತನಿಖೆ ನಡೆದ ಬಳಿಕ ಹರೀಶ್ ಪರವಾಗಿ ತೀರ್ಪು ಬಂದಿತ್ತು. ಕಳೆದುಕೊಂಡ ಹಣವನ್ನು ಬಡ್ಡಿ ಸಮೇತ ಅಂದ್ರೆ, ಐದೂವರೆ ಲಕ್ಷಕ್ಕೆ 10% ಬಡ್ಡಿ ನೀಡಬೇಕು, ಜೊತೆಗೆ 50 ಸಾವಿರ ಪರಿಹಾರ, ಕೋರ್ಟ್ ವೆಚ್ಚ ಎಂದು ಹೆಚ್ಚುವರಿ 10 ಸಾವಿರ ರೂ. ಮೂವತ್ತು ದಿನಗಳ ಒಳಗೆ ನೀಡಬೇಕು ಅಂತ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ.
In public sector bank SBI lacs of fixed deposit is wrong doing customer court given,
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm