ಬ್ರೇಕಿಂಗ್ ನ್ಯೂಸ್
01-08-20 02:23 pm Mangalore Reporter ಕರಾವಳಿ
ಮಂಗಳೂರು: ವಿದಾನಪರಷತ್ನ ಮಾಜಿ ಸದಸ್ಯ ಐವನ್ ಡಿ’ಸೋಜ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನೆನ್ನೆಯಷ್ಟೇ ಡಿಕೆಶಿ ಜೊತೆ ಹಲವೆಡೆ ಇವರು ತಿರುಗಾಡಿದ್ದರಿಂದ ಜೊತೆಗಿದ್ದವರು ಮತ್ತು ಅವರು ಭೇಟಿ ನೀಡಿರುವ ಮನೆಗಳಲ್ಲಿ ಆತಂಕ ಆವರಿಸಿದೆ.
ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದು, ಕುದ್ರೋಳಿ ಗೋಕರ್ಣಾಥೇಶ್ವರ ದೇವಸ್ಥಾನ, ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಬಿಷಪ್ ಹೌಸ್, ಬೇಕಲ ಖಾಝಿ ಇಬ್ರಾಹಿಂ ಮುಸ್ಲಿಯಾರ್ ಅವರ ಮನೆಗೂ ಭೇಟಿ ನೀಡಿದ್ದರು. ಈ ಸಂದರ್ಭದಲ್ಲೇ ಐವನ್ ಡಿ’ಸೋಜ ಜೊತೆಗಿದ್ದರು. ಅಲ್ಲದೆ ಭಾರೀ ಸಂಖ್ಯೆಯ ಅಭಿಮಾನಿಗಳು ಡಿಕೆಶಿ ಜೊತೆಗಿದ್ದರು. ಶಾಸಕ ಖಾದರ್, ಹರೀಶ್ ಕುಮಾರ್, ರಮಾನಾಥ ರೈ, ಜೆ.ಆರ್.ಲೋಬೋ ಹೀಗೆ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು. ಇದಾದ ಮರುದಿನವೇ ತನಗೆ ಕೊರೊನಾ ಪಾಸಿಟಿವ್ ಬಂದಿದ್ದು, ನೀವೆಲ್ಲರೂ ಪ್ರಾರ್ಥಿಸಿ ಎಂದು ಐವನ್ ಟ್ವೀಟ್ ಮಾಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮುಖಂಡರು ಮಾತ್ರವಲ್ಲದೆ, ಅವರ ಜೊತೆಗಿದ್ದವರು, ಅವರು ಭೇಟಿ ನೀಡಿರುವ ಮನೆಯವರಲ್ಲೂ ಆತಂಕ ಆವರಿಸಿದೆ.
ನಿನ್ನೆ ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಡಿಕೆಶಿ ಸುದ್ದಿಗೋಷ್ಟಿ ನಡೆದಿತ್ತು. ಸುದ್ದಿಗೋಷ್ಟಿಯಲ್ಲಿ ಐವನ್ ಡಿಸೋಜ, ಮಾಜಿ ಸಚುವರಾದ ಯು.ಟಿ.ಖಾದರ್, ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಿಥುನ್ ರೈ ವೇದಿಕೆ ಹಂಚಿಕೊಂಡಿದ್ದರು. ಎಸಿ ಕೊಠಡಿಯಲ್ಲಿ ಸುದ್ದಿಗೋಷ್ಟಿ ನಡೆದಿದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರೆಲ್ಲ ಈಗ ಕ್ವಾರಂಟೈನ್ ಆಗಬೇಕಾಗಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am