ಬ್ರೇಕಿಂಗ್ ನ್ಯೂಸ್
08-09-21 10:46 pm Mangaluru Correspondent ಕರಾವಳಿ
ಮಂಗಳೂರು, ಸೆ.8 : ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಸಂಪೂರ್ಣವಾಗಿ ಎರಡು ತಿಂಗಳ ಕಾಲ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗ್ಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳುವ ಉದ್ದೇಶ ಇದ್ದವರು ಕೂಡ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದ ವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಅಲ್ಲದೆ, ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಇದ್ಯಾದಿ ಎಲ್ಲ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಪ್ರವೇಶ ಮಾಡದಂತೆ ಸೂಚಿಸಿದ್ದಾರೆ. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲೀಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದೇ ಇದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Nipah outbreak in Kerala. Karnataka govt issues advisory No entry into kerala for two months order Mangalore DC. The Karnataka government has asked districts bordering Kerala to be extra vigilant. The district authorities have been asked to monitor those arriving from Kerala for symptoms like fever, altered mental status, severe weakness, headache, respiratory distress, cough, vomiting, muscle pain, convulsion and diarrhoea.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm