ಬ್ರೇಕಿಂಗ್ ನ್ಯೂಸ್
08-09-20 12:34 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 8: ಸಮುದ್ರ ಮಧ್ಯೆ ಕಾಣೆಯಾದರೆ ಯಾರಾದ್ರೂ ಬದುಕು ಬರೋದುಂಟೇ..? ಆದರೆ ಇಲ್ಲೂಬ್ಬ ಮೀನು ಕಾರ್ಮಿಕ ಸಮುದ್ರ ಮಧ್ಯೆ ಪರ್ಸೀನ್ ಬೋಟ್ ನಿಂದ ಮಿಸ್ಸಿಂಗ್ ಆಗಿದ್ದರೂ ಎರಡು ದಿನಗಳ ನಂತರ ಪವಾಡ ಸದೃಶ ಬದುಕಿ ಬಂದಿದ್ದಾನೆ. ಹೌದು.. ಆಯುಷ್ಯ ಇದ್ದರೆ ಸಮುದ್ರಕ್ಕೆ ಬಿದ್ದರೂ ಬದುಕಿ ಬರಬಹುದು ಎನ್ನುವ ಮಾತು ಬಂದಿದ್ದು ಇದಕ್ಕೇ ಇರಬೇಕು.
ಮಂಗಳೂರಿನ ಹಳೆ ಬಂದರಿನಿಂದ ತೆರಳಿದ್ದ ಫಾಲ್ಕನ್ ಹೆಸರಿನ ಪರ್ಸೀನ್ ಬೋಟ್ ಎರಡು ದಿನಗಳ ಹಿಂದೆ ಸಮುದ್ರ ಮಧ್ಯೆ ಮೀನಿಗೆ ಬಲೆ ಹಾಕುವ ಯತ್ನದಲ್ಲಿತ್ತು. ಈ ವೇಳೆ, ಪರ್ಸೀನ್ ಬೋಟಿನ ಜೊತೆಗಿರುವ ಡಿಂಗಿ ಹೆಸರಿನ ಸಣ್ಣ ಬೋಟಿನಲ್ಲಿ ಕುಳಿತು ಕಾರ್ಮಿಕ ಸುನಿಲ್ ಡಿಸೋಜ ಬಲೆ ವಿಸ್ತರಿಸಲೆಂದು ನೀರಿಗೆ ಇಳಿದಿದ್ದರು. ಆದರೆ ಈ ವೇಳೆ ಜೋರಾಗಿ ಗಾಳಿ ಬಂದಿದ್ದರಿಂದ ಡಿಂಗಿ ಬೋಟಿಗೆ ಕಟ್ಟಿದ್ದ ಹಗ್ಗ ಕಡಿದು ಹೋಗಿದೆ. ಡಿಂಗಿ ಬೋಟ್ ಕಾರ್ಮಿಕನ ಸಹಿತ ಗಾಳಿಯೊಂದಿಗೆ ತೇಲಿ ಹೋಗಿದ್ದು, ಪರ್ಸೀನ್ ಬೋಟಿನಿಂದ ಮಿಸ್ ಆಗಿತ್ತು. ಪರ್ಸೀನ್ ಬೋಟಿನಲ್ಲಿದ್ದ ಸಿಬಂದಿ ಸಮುದ್ರ ಮಧ್ಯೆ ಹುಡುಕಾಟ ನಡೆಸಿದ್ರೂ ಡಿಂಗಿ ಆಗಲೀ, ಅದರಲ್ಲಿದ್ದ ಕಾರ್ಮಿಕನಾಗಲೀ ಪತ್ತೆಯಾಗಿರಲಿಲ್ಲ. ಆನಂತ್ರ ಪರ್ಸೀನ್ ಬೋಟ್ ಮಂಗಳೂರು ಬಂದರಿಗೆ ಹಿಂತಿರುಗಿ ಬಂದಿತ್ತು.

ಎರಡು ದಿನಗಳ ಬಳಿಕ ಉಡುಪಿ ಜಿಲ್ಲೆಯ ಮಲ್ಪೆಯ ಟ್ರಾಲ್ ಬೋಟಿನವರು ಆಳಸಮುದ್ರ ಮೀನುಗಾರಿಕೆಯಿಂದ ಹಿಂತಿರುಗುತ್ತಿದ್ದಾಗ ಸಮುದ್ರ ಮಧ್ಯದಲ್ಲಿ ಪತ್ತೆಯಾದ ಡಿಂಗಿಯನ್ನು ಗಮನಿಸಿದ್ದು ಅದರಲ್ಲಿದ್ದ ಕಾರ್ಮಿಕನನ್ನು ರಕ್ಷಣೆ ಮಾಡಿದ್ದಾರೆ. ಗಾಳಿ ಬಂದ ದಿಕ್ಕಿನಲ್ಲಿ ಸಮುದ್ರ ಮಧ್ಯೆ ಚಲಿಸುತ್ತಾ ಹೋಗುತ್ತಿದ್ದ ಡಿಂಗಿ ಬೋಟಿನಲ್ಲಿ ಅನ್ನ, ನೀರು ಇಲ್ಲದೆ ಎರಡು ದಿನ ಕಳೆದ ಕಾರ್ಮಿಕನನ್ನು ಹಿಡಿದು ಮಲ್ಪೆ ಬಂದರಿಗೆ ಕರೆತಂದಿದ್ದಾರೆ. ಕಾರ್ಮಿಕ ಸುನಿಲ್ ಡಿಸೋಜನಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಎರಡು ದಿನ ಕಳೆದಿದ್ದರಿಂದ ಸುನಿಲ್ ಜೀವಂತ ಬರುವುದು ಸಂಶಯ ಆಗಿತ್ತು. ಡಿಂಗಿ ಬೋಟ್ ಸಮುದ್ರ ಮಧ್ಯೆ ಮುಳುಗಿರಬಹುದು ಎಂದು ಅಂದಾಜು ಮಾಡಲಾಗಿತ್ತು. ಆದರೆ, ಸುನಿಲ್ ಡಿಸೋಜ ಪವಾಡ ಸದೃಶ ಬದುಕಿ ಬಂದಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm