ಬ್ರೇಕಿಂಗ್ ನ್ಯೂಸ್
13-09-21 11:59 am Mangaluru Correspondent ಕರಾವಳಿ
ಮಂಗಳೂರು, ಸೆ.13: ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹವು ತಣ್ಣೀರುಬಾವಿ ಬೀಚ್ ಸಮೀಪ ರವಿವಾರ ರಾತ್ರಿ ವೇಳೆ ಪತ್ತೆಯಾಗಿದೆ.
ಕಸಬಾ ಬೆಂಗರೆ ನಿವಾಸಿ ಮುಹಮ್ಮದ್ ಶರೀಫ್ (35) ಎಂಬವರ ಮೃತದೇಹ ಪತ್ತೆಯಾಗಿದೆ.
ಸೆ.11ರಂದು ನಸುಕಿನಜಾವ ಮೀನುಗಾರಿಕೆಗೆ ತೆರಳಿದ್ದ ಐವರ ಪೈಕಿ ನಾಲ್ವರು ರಕ್ಷಣೆಗೊಳಗಾಗಿದ್ದರು. ಆದರೆ ಶರೀಫ್ ನಾಪತ್ತೆಯಾಗಿದ್ದರು. ಇವರಿಗಾಗಿ ಕಳೆದ ಎರಡು ದಿನಗಳಿಂದ ತೀವ್ರ ಶೋಧ ಕಾರ್ಯ ನಡೆದಿತ್ತು. ಶನಿವಾರ ಕಡಲು ಪ್ರಕ್ಷುಬ್ಧತೆಯಿಂದ ಕೂಡಿದ್ದರಿಂದ ಇಡೀ ದಿನ ಹುಡುಕಾಟ ನಡೆದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ರವಿವಾರವೂ ಪತ್ತೆ ಕಾರ್ಯ ಮುಂದುವರಿದಿತ್ತು. ಸಂಜೆ ವೇಳೆ ಸ್ಥಳೀಯ ಮುಳುಗುತಜ್ಞರ ಶ್ರಮದಿಂದಾಗಿ ಕೊನೆಗೂ ಶರೀಫ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೀನುಗಾರ ಶರೀಫ್ ನಾಪತ್ತೆಯಾಗಿದ್ದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಮುದ್ರದಲ್ಲಿ ಕಬ್ಬಿಣದ ಪೈಪುಗಳು: ನಾಪತ್ತೆಯಾಗಿದ್ದ ಶರೀಫ್ ಅವರಿಗಾಗಿ ಸತತ ಎರಡು ದಿನಗಳಿಂದ ಪತ್ತೆ ಕಾರ್ಯ ನಡೆದಿತ್ತು. ಹುಡುಕಾಟಕ್ಕೆ ಸಮುದ್ರಕ್ಕೆ ಧುಮುಕಿದ ಡಿವೈಎಫ್ಐ ಕಾರ್ಯಕರ್ತ ಮಯ್ಯದ್ದಿ ಎಂಬವರ ಕಾಲಿಗೆ ಗಂಭೀರ ಗಾಯವಾಗಿದೆ. ಕಡಲಲ್ಲಿ ಕಬ್ಬಿಣದ ಪೈಪುಗಳು ಇದ್ದವು ಎಂದು ಆರೋಪಿಸಲಾಗಿದೆ. ಗಾಯಾಳು ಮಯ್ಯದ್ದಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Read: ಪಣಂಬೂರು ತೀರದಲ್ಲಿ ಗಿಲ್ ನೆಟ್ ಬೋಟ್ ಪಲ್ಟಿ ; ಒಬ್ಬ ಮೀನುಗಾರ ಸಮುದ್ರಪಾಲು
Panambur Gill net boat Accident missing fishermen body found in Tannirbhavi beach. The deceased has been identified as Sharrif (35).
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm