ಬ್ರೇಕಿಂಗ್ ನ್ಯೂಸ್
15-09-21 06:02 pm Mangaluru Correspondent ಕರಾವಳಿ
ಉಳ್ಳಾಲ, ಸೆ.15: ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗುತ್ತಿಗೆ ಕಾರ್ಮಿಕನೊಬ್ಬ 33,000 ವೋಲ್ಟ್ ವಿದ್ಯುತ್ ಹರಿಯುವ ಕಂಬಕ್ಕೇರಿ ಭಾಗಶಃ ಸುಟ್ಟು ಹೋದ ಘಟನೆ ತೊಕ್ಕೊಟ್ಟಿನ ಚೆಂಬುಗುಡ್ಡೆ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ, ಶಿಗ್ಗಾಂವಿ ತಾಲೂಕು ಮಣಿಕಟ್ಟೆ ನಿವಾಸಿ ಬೊಮ್ಮಪ್ಪ(26) ವಿದ್ಯುತ್ ಅವಘಡಕ್ಕೆ ಭಾಗಶಃ ಸುಟ್ಟು ಆಸ್ಪತ್ರೆ ಸೇರಿದ ದುರ್ದೈವಿ. ಬೊಮ್ಮಪ್ಪ ಅವರು ಪ್ರವೀಣ್ ಸುವರ್ಣ ಎಂಬ ಮೆಸ್ಕಾಂ ಗುತ್ತಿಗೆದಾರರ ಜೊತೆ ಕಳೆದ ಐದು ತಿಂಗಳುಗಳಿಂದ ಚೆಂಬುಗುಡ್ಡೆ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ಇತರ ಕಾರ್ಮಿಕರ ಜೊತೆ ಬೊಮ್ಮಪ್ಪ ಮೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.







ಈ ವೇಳೆ ಕಚೇರಿಯ ಅಂಗಣದಲ್ಲಿರುವ 33,000 ವೋಲ್ಟ್ ಯಾರ್ಡ್ ನಲ್ಲಿರುವ ಕಂಬಕ್ಕೆ ಏರಿ ಜಂಪರ್ ಟೈಟ್ ಮಾಡುವಂತೆ ಮೆಸ್ಕಾಂ ನ ಎಇಇ ದಯಾನಂದ್ ಎಂಬವರು ಹೇಳಿದ್ದಾರೆ ಎನ್ನಲಾಗುತ್ತಿದೆ. ಹೈ ವೋಲ್ಟ್ ವಿದ್ಯುತ್ ಹರಿಯುತ್ತಿದ್ದರೂ ಲೈನ್ ಆಫ್ ಆಗಿದೆ ಎಂದು ಹೇಳಿ ಕಂಬಕ್ಕೇರಿದ್ದು ಕೆಲವೇ ಕ್ಷಣಗಳಲ್ಲಿ ಇತರ ಕಾರ್ಮಿಕರ ಎದುರೇ ಸುಟ್ಟು ಹೋಗಿದ್ದರು.
ಕೂಡಲೇ ಮೆಸ್ಕಾಂ ಸಿಬ್ಬಂದಿ ಬೊಮ್ಮಪ್ಪನನ್ನ ಕೆಳಗಿಳಿಸಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯುತ್ ಆಘಾತಕ್ಕೆ ಬೊಮ್ಮಪ್ಪ ಅವರ ಸೊಂಟಕ್ಕಿಂತ ಕೆಳಗಿನ ಭಾಗ ಸಂಪೂರ್ಣ ಸುಟ್ಟು ಹೋಗಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಿ ಮೈಸೂರ್ ಇಲೆಕ್ಟ್ರಿಕಲ್ಸ್ ಲಿ. ನ ಅಧ್ಯಕ್ಷರಾದ ಸಂತೋಷ್ ಬೋಳಿಯಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಸ್ಥಳೀಯ ಕೌನ್ಸಿಲರ್ ರಾಜೇಶ್ ಯು.ಬಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೆಸ್ಕಾಂ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
Mangalore Thokottu MESCOM Contractor staff Electrocuted after touching 33 thousand vats current illegally. The person is said to be critically and has been admitted to the local hospital.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm