ಬ್ರೇಕಿಂಗ್ ನ್ಯೂಸ್
16-09-21 10:53 am Mangaluru Correspondent ಕರಾವಳಿ
ಮಂಗಳೂರು, ಸೆ.15: ಅಪಘಾತದಲ್ಲಿ ತೀವ್ರ ಗಾಯಗೊಂಡು ನಗರದ ಎಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ 23 ವರ್ಷದ ಯುವತಿಯ ಅಂಗಾಂಗಗಳನ್ನು ಕುಂಟುಬಸ್ಥರು ಅಗತ್ಯ ಇದ್ದವರಿಗೆ ನೆರವಾಗಲೆಂದು ದಾನ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಹಲ್ಲೂರು ನಿವಾಸಿ ಕವನಾ ಮರಳಸಿದ್ದಯ್ಯ ಹಿರೇಮಠ್ (23) ಎಂಬ ಯುವತಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಸೆ.12ರಂದು ಎಜೆ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯ ಬ್ರೈನ್ ಡೆಡ್ ಆಗಿತ್ತು. ದೇಹಕ್ಕೆ ಆಗಿರುವ ಗಾಯಗಳು ಗುಣಮುಖ ಆಗದೇ ಇರುವುದು ಮತ್ತು ಬ್ರೇನ್ ಡೆಡ್ ಆಗಿದ್ದರಿಂದ ಕೋಮಾ ಸ್ಥಿತಿಗೆ ಹೋಗಿದ್ದರು. ಬದುಕುವುದು ಸಾಧ್ಯವಿಲ್ಲ ಎಂಬುದನ್ನು ವೈದ್ಯರು ತಿಳಿಸಿದಾಗ, ಕವನಾ ಸೋದರಿಯರು ಆಕೆಯ ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.

ಕರ್ನಾಟಕ ಸರಕಾರ ಜಾರಿಗೆ ತಂದಿರುವ ಜೀವನ ಸಾರ್ಥಕತೆ ಎನ್ನುವ ಯೋಜನೆಯ ಬಗ್ಗೆ ತಿಳಿದು ತಮ್ಮ ಅಂಗಾಂಗ ಯಾರಿಗಾದರೂ ಅಗತ್ಯ ಇದ್ದವರಿಗೆ ನೆರವಾಗಲೆಂದು ಸೋದರಿಯರು ಅಂಗಾಂಗ ದಾನಕ್ಕೆ ಮುಂದಾಗಿದ್ದರು. ಕವನಾ ಕುಟುಂಬಸ್ಥರ ಕೋರಿಕೆಯಂತೆ, ಜೀವನ ಸಾರ್ಥಕತೆ ಯೋಜನೆಯಡಿ ಅಮೂಲ್ಯ ಅಂಗಗಳನ್ನು ಎಜೆ ಆಸ್ಪತ್ರೆಯವರು ಸಂಗ್ರಹಿಸಿದ್ದು, ಅವನ್ನು ಅವಶ್ಯವುಳ್ಳ ವಿವಿಧ ಆಸ್ಪತ್ರೆಗಳಿಗೆ ತಲುಪಿಸಿದ್ದಾರೆ.
ಇದರಂತೆ, ಒಂದು ಕಿಡ್ನಿಯನ್ನು ಎಜೆ ಆಸ್ಪತ್ರೆಯಲ್ಲೇ ಅಗತ್ಯ ಇದ್ದವರಿಗೆ ಟ್ರಾನ್ಸ್ ಪ್ಲಾಂಟ್ ಮಾಡಲಾಗಿದೆ. ಲಿವರ್ ಅನ್ನು ಸಿಎಂಐ ಬೆಂಗಳೂರು ಆಸ್ಪತ್ರೆಗೆ, ಹೃದಯವನ್ನು ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್, ಇನ್ನೊಂದು ಕಿಡ್ನಿ, ಕಾರ್ನಿಯಾ ಮತ್ತು ಚರ್ಮವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಎಜೆ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗಳಿಗೆ ಮಂಗಳೂರು ಏರ್ಪೋರ್ಟ್ ಮೂಲಕ ಮತ್ತು ಮಣಿಪಾಲ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಅಂಗಗಳನ್ನು ತಲುಪಿಸಲಾಗಿದೆ.
Kavana Maralsiddaya Hiremath from Hallur of Haveri district met with accident at Soratur village of Honnali taluk, Shivamogga was shifted to Mangaluru for treatment and was further referred to A J Hospital & Research Centre on September 12.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm