ಬ್ರೇಕಿಂಗ್ ನ್ಯೂಸ್
16-09-21 09:45 pm Mangaluru Correspondent ಕರಾವಳಿ
ಮಂಗಳೂರು, ಸೆ.16 : ನಗರದ ಮರೋಳಿಯ ಶೆಡ್ ಒಂದರಲ್ಲಿ ಟ್ಯಾಂಕರ್ ನಲ್ಲಿ ಅಕ್ರಮವಾಗಿ ಶೇಖರಿಸಲಾಗಿದ್ದ 15 ಸಾವಿರ ಲೀಟರ್ ಡೀಸೆಲನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸದ್ರಿ ಶೆಡ್ ಮರೋಳಿಯ ಯಮುನಾ ಅರ್ಥ್ ಮೂವರ್ಸ್ ಮತ್ತು ಬೋರ್ ವೆಲ್ಸ್ ಸಂಸ್ಥೆಗೆ ಸೇರಿದ್ದು ಅಕ್ರಮವಾಗಿ ದಾಸ್ತಾನು ಮಾಡಿದ್ದ ಡೀಸೆಲ್ ಕೂಡ ಅದೇ ಕಂಪನಿಗೆ ಸೇರಿದ್ದಾಗಿತ್ತು. ಆದರೆ, ಡೀಸೆಲನ್ನು ದಾಸ್ತಾನು ಮಾಡಿರುವ ಬಗ್ಗೆ ಯಾವುದೇ ದಾಖಲೆ ಹೊಂದಿರಲಿಲ್ಲ. ಕಂಪನಿಯ ಬೋರ್ ವೆಲ್ ಉದ್ದೇಶಕ್ಕೆ ಬಳಸಲು ಡೀಸೆಲ್ ಶೇಖರಣೆ ಮಾಡಿದ್ದರೂ ಅದನ್ನು ಅಕ್ರಮವಾಗಿ ಹೀಗೆ ದಾಸ್ತಾನು ಮಾಡಲು ಅವಕಾಶ ಇಲ್ಲ. ಹೀಗಾಗಿ ಕಂಕನಾಡಿ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

ಯಮುನಾ ಅರ್ಥ್ ಮೂವರ್ಸ್ ಸಂಸ್ಥೆಯ ಮಾಲಕ ಪುರುಷೋತ್ತಮ್ ಶೆಟ್ಟಿ ಅವರನ್ನು ಈ ಬಗ್ಗೆ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಆದರೆ, ಯಾವುದೇ ದಾಖಲೆ ಒದಗಿಸಲು ಶೆಟ್ಟಿ ವಿಫಲವಾಗಿದ್ದಾರೆ. ಹೀಗಾಗಿ ಪೆಟ್ರೋಲಿಯಂ ಏಕ್ಟ್ ಪ್ರಕಾರ ಕೇಸು ದಾಖಲಿಸಲಾಗಿದೆ. 15 ಸಾವಿರ ಲೀಟರ್ ಡೀಸೆಲ್ ಮೌಲ್ಯ 12.5 ಲಕ್ಷ ಆಗಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಹಿತಿ ಪ್ರಕಾರ, ಮುಂಬೈನಿಂದ ನೇರವಾಗಿ ರಿಫೈನರಿ ಕಂಪನಿಗಳಿಂದ ಅಥವಾ ಬೇನಾಮಿಯಾಗಿ ಇನ್ನಿತರ ಮೂಲಗಳಿಂದ ಡೀಸೆಲನ್ನು ಕಡಿಮೆ ದರಕ್ಕೆ ಪಡೆದು ದಾಸ್ತಾನು ಮಾಡಲಾಗುತ್ತದೆ. ಅದೇ ರೀತಿ ಯಮುನಾ ಅರ್ಥ್ ಮೂವರ್ಸ್ ಕಂಪನಿಯವರು ಮಾಡಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ. ಇತ್ತೀಚೆಗೆ ಬಂಟ್ವಾಳದಲ್ಲಿ ಡೀಸೆಲ್ ಪೈಪ್ ಲೈನಿಗೆ ಕನ್ನ ಹಾಕಿದ್ದಲ್ಲದೆ, 50 ಸಾವಿರ ಲೀಟರಿಗೂ ಹೆಚ್ಚು ಡೀಸೆಲ್ ಕಳವಾಗಿದ್ದು ಕಂಡುಬಂದಿತ್ತು. ಈ ರೀತಿ ಕಳವು ಮಾಡುವ ಡೀಸೆಲನ್ನು ಬೇನಾಮಿ ರೂಪದಲ್ಲಿ ಮಾರಾಟ ಮಾಡಲಾಗುತ್ತದೆ. ಬೋರ್ ವೆಲ್ ಕಂಪನಿಯವರು ಯಾವ ಮೂಲದಿಂದ ಡೀಸೆಲ್ ಪಡೆದಿದ್ದಾರೆ ಅನ್ನೋದು ಪೊಲೀಸರಿಗೆ ಪತ್ತೆಯಾಗಿಲ್ಲ. ಪೆಟ್ರೋಲ್ ಪಂಪ್ ಹೊರತುಪಡಿಸಿ ಇತರ ಕಡೆ ಡೀಸೆಲ್ ಅಥವಾ ಪೆಟ್ರೋಲ್ ಖರೀದಿಸುವುದು ಕಾನೂನು ಪ್ರಕಾರ ಅಪರಾಧವಾಗುತ್ತದೆ.
Mangalore Police seize illegally stored 15,000 litres of Diesel stored in a tank of tanker lorry from Yamuna Earth Movers and Buildts shed at Maroli. Police sources informed that it was stored without any permit. In this regard, police have taken one person for inquiry.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm