ಬ್ರೇಕಿಂಗ್ ನ್ಯೂಸ್
17-09-21 05:06 pm Mangaluru Correspondent ಕರಾವಳಿ
ಮಂಗಳೂರು, ಸೆ.17 : ಪೊಲೀಸರು ಹೆತ್ತವರಿಗೆ, ಗುರು ಹಿರಿಯರಿಗೆ ಮಾತ್ರ ಸೆಲ್ಯೂಟ್ ಮಾಡಬೇಕು. ದುಷ್ಟರು, ವಿದ್ರೋಹಿಗಳ ಪಾಲಿಗೆ ವೀರಭದ್ರರಾಗಬೇಕು. ದುರ್ಗೆಯಂತೆ ಉಗ್ರಾವತಾರ ತಾಳಿ ಶಿಕ್ಷೆ ನೀಡುವಂತಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಆಶಿಸಿದ್ದಾರೆ.
ಮಂಗಳೂರಿನಲ್ಲಿ ಒಂದು ತಿಂಗಳ ಕಾಲ ನಡೆದ ಪೊಲೀಸ್ ಆಕಾಂಕ್ಷಿಗಳ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು.
ಚಲನಚಿತ್ರಗಳಲ್ಲಿ ಪೊಲೀಸರನ್ನು ಹಾಸ್ಯದ ವಸ್ತುವನ್ನಾಗಿ ತೋರಿಸುತ್ತಾರೆ. ಇದರಿಂದ ಸಮಾಜ, ದೇಶಕ್ಕೆ ನಷ್ಟ. ಪೊಲೀಸರನ್ನು ಧೈರ್ಯವಂತರನ್ನಾಗಿ ಮಾಡಿ, ಸತ್ಯ- ನ್ಯಾಯದಲ್ಲಿ ನಡೆಯುವಂತಾಗಿಸಿ ಎಂದು ವೀರೇಂದ್ರ ಹೆಗ್ಗಡೆ ಮನವಿ ಮಾಡಿದರು. ಪೊಲೀಸ್ ಯೂನಿಫಾರ್ಮ್ಗೆ ಬಹಳ ಮಹತ್ವವಿದ್ದು, ಯುವಕ- ಯುವತಿಯರು ಶಿಷ್ಟರ ರಕ್ಷಣೆಯ, ದುಷ್ಟರ ಶಿಕ್ಷಣೆಯ ಪೊಲೀಸ್ ಕೆಲಸವನ್ನು ಆಯ್ಕೆ ಮಾಡಬೇಕೆಂದು ಕರೆ ನೀಡಿದರು.



ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಕಾರ್ಯವೈಖರಿ ಬಹಳ ವಿಭಿನ್ನವಿದೆ. ಪೊಲೀಸರು ಕರ್ತವ್ಯ ನಿರ್ವಹಿಸಿದ ಪ್ರದೇಶದ ಮಣ್ಣಿನ ಮಗ ಆಗುತ್ತಾರೆ. ಶಶಿಕುಮಾರ್ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಮಣ್ಣಿನ ಮಗನಾಗಿದ್ದಾರೆ. ತುಳು ಭಾಷೆಯನ್ನು ಕಲಿತು ಇನ್ನೂ ಹತ್ತಿರವಾಗಿದ್ದಾರೆ ಎಂದು ವೀರೇಂದ್ರ ಹೆಗ್ಗಡೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಂಗಳೂರು ಕಮಿಷನರೇಟ್ ವತಿಯಿಂದ 30 ದಿನಗಳ ಪೊಲೀಸ್ ಆಕಾಂಕ್ಷಿಗಳ ತರಬೇತಿ ಶಿಬಿರ ನಡೆದಿದ್ದು ಸಮಾರೋಪ ಸಮಾರಂಭ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶಿಬಿರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 206 ಮಂದಿ ಭಾಗವಹಿಸಿದ್ದು, ದೈಹಿಕ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ತರಬೇತಿ ನೀಡಲಾಗಿದೆ. ಕರಾವಳಿ ಜಿಲ್ಲೆಯವರು ಪೊಲೀಸ್ ಇಲಾಖೆಗೆ ಬರಬೇಕು ಎಂಬ ಮುತುವರ್ಜಿಯಿಂದ ಕಮಿಷನರ್ ಶಶಿಕುಮಾರ್ ಈ ಶಿಬಿರ ನಡೆಸಿದ್ದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಾಣೆ, ಎಎನ್ಎಫ್ ದಕ್ಷಿಣ ಕನ್ನಡ ಜಿಲ್ಲಾ ಅಧೀಕ್ಷಕ ನಿಖಿಲ್, ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
The valedictory of a month-long training for aspirants to the post of constables and sub-inspectors, was held at St Aloysius Gonzaga hall on Friday September 17. Dharmadhikari of Dharmasthala Dr Veerendra Heggade lighted the lamp to begin the programme.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm