ಬ್ರೇಕಿಂಗ್ ನ್ಯೂಸ್
18-09-21 08:33 pm Headline Karnataka News Network ಕರಾವಳಿ
ಉಡುಪಿ, ಸೆ.17 : ಕಾಪು ಮೂಲದ ಆಯುರ್ವೇದ ವೈದ್ಯೆ ಡಾ. ಇನ್ಶಾ ಹುದಾ ತಮ್ಮ ವೈದ್ಯಕೀಯ ಸೇವೆಗಾಗಿ ಸಂಯುಕ್ತ ಅರಬ್ ಗಣರಾಜ್ಯ (ಯುಎಇ) ಸರಕಾರದಿಂದ ‘ಗೋಲ್ಡನ್ ವೀಸಾ ಸಮ್ಮಾನ್’ ಪಡೆದಿದ್ದು ಕರಾವಳಿ ಕರ್ನಾಟಕಕ್ಕೆ ಹೆಮ್ಮೆ ಮೂಡಿಸಿದ್ದಾರೆ.
ಡಾ.ಇನ್ಶಾ ಹುದಾ ಉಡುಪಿ ಜಿಲ್ಲೆಯ ಕಾಪು ಮೂಲದವರಾಗಿದ್ದು ಹೆತ್ತವರು ಪೀರ್ ಮುಹಮ್ಮದ್ ಹಾಗೂ ಗುಲ್ಶನ್ ಮುಹಮ್ಮದ್ ಮಧ್ಯಮ ವರ್ಗದವರು. ಡಾ.ಹುದಾ ಅವರು ತನ್ನೆಲ್ಲಾ ಯಶಸ್ಸು, ಸಾಧನೆಗೆ ಹೆತ್ತವರು ಹಾಗೂ ನಿವೃತ್ತ ಅರಣ್ಯಾಧಿಕಾರಿಯಾಗಿದ್ದ ಅಜ್ಜ ಹಾಜಿ ಅಬ್ದುಲ್ಲ ಖಾದರ್ ಅವರೇ ಕಾರಣ ಎಂದು ಹೇಳುತ್ತಾರೆ.
ಉಡುಪಿ ವಿದ್ಯಾನಿಕೇತನದಲ್ಲಿ ತನ್ನ ಪ್ರಾಥಮಿಕ ಕಲಿಕೆ ಪೂರೈಸಿದ ಅವರು ಮುಂದೆ ಕುತ್ಪಾಡಿಯ ಎಸ್ಡಿಎಂ ಕಾಲೇಜಿನಲ್ಲಿ ಮೆರಿಟ್ ಸೀಟ್ನೊಂದಿಗೆ ಆಯುರ್ವೇದ ಸೀಟನ್ನು ಪಡೆದು 2011ರಲ್ಲಿ ಬಿಎಎಂಎಸ್ ಪದವಿ ಪಡೆದಿದ್ದರು. ಆನಂತರ ಮದುವೆಯಾಗಿ ಒಂದು ಮಗುವಿನ ತಾಯಿಯಾಗಿದ್ದು ಉನ್ನತ ಶಿಕ್ಷಣವನ್ನು ಮುಂದುವರಿಸಿದ ಡಾ.ಹುದಾ, 2015ರಲ್ಲಿ ಮಣಿಪಾಲ ವಿವಿ ಮೂಲಕ ಕೆಎಂಸಿಯಲ್ಲಿ ಪಂಚಕರ್ಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು.
2017ರಲ್ಲಿ ಯುಎಇಯಲ್ಲಿ ಅಲ್ಲಿನ ಆರೋಗ್ಯ ಸಚಿವಾಲಯ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾದ ಡಾ.ಹುದಾ, ಆ ದೇಶದಲ್ಲಿ ಆಯುರ್ವೇದ ಚಿಕಿತ್ಸೆ ನೀಡಲು ಪರವಾನಿಗೆಯನ್ನು ಪಡೆದು ಆಯುರ್ವೇದ ಚಿಕಿತ್ಸಾ ಪದ್ಧತಿ ಮೂಲಕ ಚರ್ಮ ರೋಗ, ಬೊಜ್ಜುಗೆ ಚಿಕಿತ್ಸೆ, ಸಂಧಿವಾತ, ಸ್ವಯಂನಿರೋಧಕ ಕಾಯಿಲೆ, ಆತಂಕ, ಖಿನ್ನತೆಗಳಿಗೆ ಚಿಕಿತ್ಸೆ ನೀಡುವ ಮೂಲಕ ಜನಪ್ರಿಯತೆಯನ್ನು ಪಡೆದರು. ಅಲ್ಲದೇ ಯೋಗದ ಮೂಲಕ ಬೆನ್ನುಹುರಿ ಸಮಸ್ಯೆಗೆ ನೀಡುತಿದ್ದ ಚಿಕಿತ್ಸೆ ರೋಗಿಗಳಿಂದ ಭಾರೀ ಮೆಚ್ಚುಗೆ ಪಡೆದಿತ್ತು.
ಆಯುಷ್ ವಿಶ್ವ ಸಮ್ಮೇಳನದಲ್ಲಿ ಜೀವನಶೈಲಿ ರೋಗಗಳ ಕುರಿತಂತೆ ಡಾ. ಹುದಾ ಮಂಡಿಸಿದ ಪ್ರಬಂಧ ಮೆಚ್ಚುಗೆಗೆ ಪಾತ್ರವಾಗಿತ್ತು. ಸದ್ಯಕ್ಕೆ ಡಾ. ಹುದಾ ಅವರು ಯುಎಇಯ ಎಮಿರೆಟ್ಸ್ ಆಯುರ್ವೇದಿಕ್ ಗ್ರಾಜುವೇಟ್ ಅಸೋಸಿಯೇಷನ್ (ಇಎಜಿಎ) ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಭರತನಾಟ್ಯ, ಯಕ್ಷಗಾನ ಪ್ರವೀಣೆ
ಡಾ.ಹುದಾ ಕೇವಲ ಆಯುರ್ವೇದ ಕ್ಷೇತ್ರದಲ್ಲಿ ಮಾತ್ರ ಪರಿಣಿತೆ, ತಜ್ಞೆಯಲ್ಲ. ಆಕೆ ಉತ್ತಮ ಭರತನಾಟ್ಯ ನೃತ್ಯಗಾತಿ ಹಾಗೂ ಯಕ್ಷಗಾನ ಕಲಾವಿದೆಯೂ ಆಗಿದ್ದಾರೆ. ಇದಲ್ಲದೆ, ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪಡೆದಿದ್ದಾರೆ.
In what can be called a proud moment for Coastal Karnataka, Dr Einsha Huda from Kaup, has been awarded a golden visa by the UAE government. She is the first Ayurvedic doctor to be honoured with the golden visa from the twin districts.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm