ಬ್ರೇಕಿಂಗ್ ನ್ಯೂಸ್
18-09-21 09:25 pm Mangaluru Correspondent ಕರಾವಳಿ
ಮಂಗಳೂರು, ಸೆ.18 : ಕೋವಿಡ್ ಸೋಂಕು ಇಳಿಕೆಯಾದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಕೆಲವು ಷರತ್ತುಗಳನ್ನು ವಿಧಿಸಿ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ.
ದೇವಾಲಯಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಆಡಳಿತ ವರ್ಗವು ಜವಾಬ್ದಾರಿ ಹೊಂದಿರತಕ್ಕದ್ದು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿಯನ್ನು ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ದೇವಾಲಯಗಳಿಗೆ ಬರುವ ಭಕ್ತರು ಎರಡು ಡೋಸ್ ಲಸಿಕೆ ಪಡೆದಿದ್ದರೂ 72 ಗಂಟೆಗಳಿಗಿಂತ ಮುಂಚಿತ ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ಭಕ್ತರಿಗೆ ಲಸಿಕೆ ಪಡೆಯುವ ಬಗ್ಗೆ ಸಲಹೆಗಳನ್ನು ನೀಡುವ ಕುರಿತು ಹಾಗೂ ಜಾಗೃತಿ ಮೂಡಿಸಲು ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ದೇವಾಲಯಕ್ಕೆ ಬರುವ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ ಅಂತಹವರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ದೇವಸ್ಥಾನಗಳಲ್ಲಿ ಕೋವಿಡ್ ಲಸಿಕೆ ಕೇಂದ್ರ ತೆರೆಯಲು ಕ್ರಮ ವಹಿಸಬೇಕು.
ದೇವಾಲಯಗಳಲ್ಲಿ ನಡೆಯುವ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ ಸಹಿತ ವಿವಿಧ ಸೇವೆಗಳನ್ನು ಆದಷ್ಟು ಮಿತಿಗೊಳಿಸಿ, ಜನಸಂದಣಿಯಾಗದಂತೆ ಕನಿಷ್ಠ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
Devotees permitted to enter Kukke Shri Subrahmanya Temple and Dharmasthala with covid 19 report orders Mangalore Dc Dr Rajendra.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm