ಬ್ರೇಕಿಂಗ್ ನ್ಯೂಸ್
19-09-21 02:39 pm Udupi Correspondent ಕರಾವಳಿ
ಕುಂದಾಪುರ, ಸೆ.19: ನಶೆಯಲ್ಲಿದ್ದ ಕಂಟೇನರ್ ಚಾಲಕ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಅಡ್ಡಾದಿಡ್ಡಿ ಚಲಿಸಿ ಆತಂಕ ಸೃಷ್ಟಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಬಳಿ ನಡೆದಿದೆ.
ವೇಗ ತಡೆಗಾಗಿ ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಅದನ್ನು ಬರೋಬ್ಬರಿ ನಾಲ್ಕು ಕಿ.ಮೀ. ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಸ್ಥಳೀಯರು, ಆಟೋ ಚಾಲಕರು ಕಂಟೇನರ್ ಚಾಲಕನ ಗಮನಕ್ಕೆ ತಂದರೂ ಆತನಿಗೆ ಗೊತ್ತಾಗಿರಲಿಲ್ಲ.







ಮುಳ್ಳಿಕಟ್ಟೆ ಎಂಬಲ್ಲಿ ಹೆದ್ದಾರಿಗೆ ಅಡ್ಡಲಾಗಿ ವೇಗ ತಡೆಗಾಗಿ ಬ್ಯಾರಿಕೇಡ್ ಹಾಕಿದ್ದು ಅದನ್ನು ಎಳಕೊಂಡೇ ಸಾಗಿದ್ದಾನೆ. ಆನಂತರ, ಅರಾಟೆ ಸೇತುವೆಯ ತಡೆಗೋಡೆಗೂ ಡಿಕ್ಕಿಯಾಗಿ ಮುಂದೆ ಸಾಗಿದ್ದಾನೆ. ಕಂಟೈನರ್ ಅನ್ನು ನಿಲ್ಲಿಸಲು ಮುಳ್ಳಿಕಟ್ಟೆಯ ರಿಕ್ಷಾ ಚಾಲಕರು ಹರ ಸಾಹಸ ಮಾಡಿದ್ದಾರೆ. ಕೊನೆಗೆ ಕಂಟೈನರ್ ಮುಂದಿನ ಗಾಜಿಗೆ ಕಲ್ಲೆಸೆದು ಸ್ಥಳೀಯರು ಚಾಲಕನಿಗೆ ಲಾರಿ ನಿಲ್ಲಿಸಲು ಆಗ್ರಹಿಸಿದ್ದಾರೆ. ನಂತರ ಹೆಮ್ಮಾಡಿಯ WFK ಬಳಿ ಕಂಟೈನರನ್ನು ತಡೆದು ಸಾರ್ವಜನಿಕರೇ ಸೇರಿ ಚಾಲಕನನ್ನು ಲಾರಿಯಿಂದ ಇಳಿಸಿದ್ದಾರೆ.
ಚಾಲಕನನ್ನು ಬಳಿಕ ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚಾಲಕ ಗಾಂಜಾ ಅಥವಾ ಮದ್ಯ ಸೇವಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಛತ್ತಿಸ್ ಗಢ ನೋಂದಣಿಯ ಕಂಟೈನರ್ ಆಗಿದ್ದು ಕುರುಚಲು ಹುಲ್ಲನ್ನು ಸಾಗಿಸುತ್ತಿದ್ದ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರ ಭೇಟಿ ನೀಡಿ, ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Video:
Kundapura Truck Driver creates havoc consuming alcohol traffic police risk life to stop truck.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm