ಬ್ರೇಕಿಂಗ್ ನ್ಯೂಸ್
20-09-21 12:46 pm Mangaluru Correspondent ಕರಾವಳಿ
ಮುಡಿಪು, ಸೆ.20: ರಸ್ತೆ ಬದಿಯ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬ ಧಿಡೀರ್ ಆಗಿ ರಸ್ತೆ ದಾಟಿ ಓಡುತ್ತಿದ್ದ ವೇಳೆ ಕಾರಿನಡಿಗೆ ಬಿದ್ದರೂ ಪವಾಡ ಸದೃಶ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಮುಡಿಪು ಬಳಿಯ ಇರಾದಲ್ಲಿ ನಡೆದಿದೆ.
ಇರಾ ಸೈಟ್ ಬಸ್ ಸ್ಟಾಪ್ ಬಳಿಯ ಮೈಸೂರು ಮೂಲದ ಇಂಜಿನಿಯರ್ ಶಿವಾನಂದ್ ಪುತ್ರ ಮನೋಜ್ (12)ಎಂಬಾತನೇ ಅಪಘಾತದಲ್ಲಿ ಕಾರಿನಡಿಗೆ ಬಿದ್ದು ಅಪಾಯದಿಂದ ಪಾರಾದ ಬಾಲಕ. ಮನೋಜ್ ತನ್ನ ಮನೆ ಅಂಗಳದಿಂದ ದಿಢೀರ್ ಆಗಿ ರಸ್ತೆಗಿಳಿದು ದಾಟಲೆಂದು ಓಡಿದ್ದು ಇನ್ನೊಂದು ಬದಿಯಿಂದ ಬರುತ್ತಿದ್ದ ಆಲ್ಟೋ ಕಾರು ಡಿಕ್ಕಿಯಾಗಿದೆ. ಆದರೆ, ಕಾರು ಚಾಲಕ ದಿಢೀರ್ ಆಗಿ ಬಾಲಕ ಅಡ್ಡ ಬಂದಿದ್ದರಿಂದ ಗಲಿಬಿಲಿಯಾಗಿ ತಪ್ಪಿಸಲು ಯತ್ನಿಸಿದ್ದಾನೆ. ಆದರೆ ಅಷ್ಟರಲ್ಲಿ ಕಾರು ಡಿಕ್ಕಿಯಾಗಿ ಬಾಲಕ ಅಡಿಗೆ ಬಿದ್ದಿದ್ದು ರಸ್ತೆ ಬದಿಯ ಪೊದೆಯ ಮೂಲಕ ಆತನ ಮೇಲಿಂದಲೇ ಕಾರು ಹರಿದಿದೆ.
ಅದೃಷ್ಟ ಇದ್ದರೆ ಸಾವನ್ನೂ ಗೆಲ್ಲಬಹುದು ಎನ್ನುವಂತೆ, ಬಾಲಕ ಪೊದೆಯ ಎಡೆಗೆ ಬಿದ್ದ ಕಾರಣ ಪವಾಡ ಸದೃಶ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ಬಾಲಕ ಮನೋಜ್ ಎಡ ಕಾಲಿಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಸ್ತೆ ಬದಿ ಮನೆಗಳಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ವಹಿಸಬೇಕಿದ್ದು , ಮಕ್ಕಳು ಆಡುವಾಗ, ರಸ್ತೆ ದಾಟುವ ವೇಳೆ ಜಾಗರೂಕರಾಗಿರಬೇಕಿದೆ.
Video:
Mangalore Car hits 12-year- old-boy in Mudipu sustain injury accident recorded in CCTV. The boy who was supposed to be dead has miraculously escape
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm