ಬ್ರೇಕಿಂಗ್ ನ್ಯೂಸ್
21-09-21 01:16 pm Mangaluru Correspondent ಕರಾವಳಿ
ಮಂಗಳೂರು, ಸೆ.21: ಫ್ಲಾಟ್ ಲೀಸಿಗೆ ಕೊಡುವುದಾಗಿ ನಕಲಿ ಡಾಕ್ಯುಮೆಂಟ್ ತೋರಿಸಿ, ಮಹಿಳೆಯೊಬ್ಬರಿಂದ 5 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಮೂಲದ ಮಹಿಳೆಯಾಗಿದ್ದು, ನಗರದ ಮೆಡಿಕಲ್ ಸ್ಟೋರ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ 2020ರ ಜೂನ್ ತಿಂಗಳಲ್ಲಿ ಇವರು ಬಾಡಿಗೆ ಮನೆ ಪಡೆಯಲು ಹುಡುಕಾಟದಲ್ಲಿದ್ದರು. ಈ ವೇಳೆ, ಕದ್ರಿ ಪರಿಸರದ ನಿವಾಸಿ ಪ್ರದೀಪ್ ಎಂಬ ಬ್ರೋಕರ್ ಪರಿಚಯ ಆಗಿದ್ದು, ಕೆ.ಎಸ್.ರಾವ್ ರಸ್ತೆಯ ಅಪಾರ್ಟ್ಮೆಂಟ್ ಒಂದರಲ್ಲಿ ಗ್ರೌಂಡ್ ಫ್ಲೋರಿನಲ್ಲಿ ಮನೆಯೊಂದು ಲೀಸಿಗೆ ಇರುವುದಾಗಿ ತಿಳಿಸಿದ್ದಾರೆ.
ಮನೆಯನ್ನು ನೋಡಿದ ಮಹಿಳೆ, ಇಷ್ಟ ಆಗಿದ್ದರಿಂದ ಅದನ್ನು 5 ಲಕ್ಷ ರೂಪಾಯಿಗೆ ಲೀಸಿಗೆ ಪಡೆಯಲು ಮುಂದಾಗಿದ್ದರು. ಅದರಂತೆ, ಬ್ರೋಕರ್ ಪ್ರದೀಪ್, ಮನೆಯ ಮಾಲೀಕನೆಂದು ಮೊಹಮ್ಮದ್ ಅಶ್ರಫ್ ಎಂಬವರನ್ನು ತೋರಿಸಿದ್ದರು. ಇವರು ಮನೆ ಮಾಲೀಕರಾಗಿದ್ದು, 5 ಲಕ್ಷ ರೂಪಾಯಿ ಇವರ ಹೆಸರಲ್ಲಿ ಡಿಪಾಸಿಟ್ ಮಾಡುವಂತೆ ಹೇಳಿದ್ದರು. ಮಹಿಳೆ ಬಳಿಕ ಹಣ ಒಟ್ಟುಗೂಡಿಸಿ, ಮಹಮ್ಮದ್ ಅಶ್ರಫ್ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು. ಆನಂತರ, ಎರಡೂ ಪಾರ್ಟಿಗಳಿಂದ ಲೀಸ್ ಅಗ್ರೀಮೆಂಟ್ ನಡೆದಿದ್ದು, ಮಹಿಳೆ ತನ್ನ ವಾಸವನ್ನು ಬದಲಿಸಿ ಅಲ್ಲಿಗೆ ಶಿಫ್ಟ್ ಮಾಡಿಕೊಂಡಿದ್ದರು.
ಆದರೆ, ಮೂರು ತಿಂಗಳ ನಂತರ ಮೊಹಮ್ಮದ್ ಆಲಿ ಎಂಬಾತ ಬಂದಿದ್ದು, ಈ ಮನೆ ತನ್ನ ಹೆಸರಲ್ಲಿದೆ. ನೀವು ಬಂದು ಮೂರು ತಿಂಗಳು ಆಯ್ತಲ್ಲಾ. ಬಾಡಿಗೆ ಕೊಡುವಂತೆ ಒತ್ತಾಯಿಸಿದ್ದಾನೆ. ಮಹಿಳೆ ತಾನು ಮಾಡಿದ್ದ ಲೀಸ್ ಅಗ್ರೀಮೆಂಟ್ ತೋರಿಸಿ, 5 ಲಕ್ಷ ರೂ. ಡಿಪಾಸಿಟ್ ಮಾಡಿದ್ದನ್ನು ಹೇಳಿದ್ದಾರೆ. ಆದರೆ, ಅದ್ಯಾವುದಕ್ಕೂ ಒಪ್ಪದ ಆತ, ಈ ಮನೆ ನನ್ನ ಹೆಸರಲ್ಲಿದೆ. ನೀವು ಯಾರಿಗೆ ಹಣ ಹಾಕಿದ್ದೀರೋ ಗೊತ್ತಿಲ್ಲ ಎಂದು ಹೇಳಿದ್ದಾನೆ. ಅಷ್ಟರಲ್ಲಿ ತಾನು ಮೋಸ ಹೋಗಿದ್ದು ಮಹಿಳೆಗೆ ಅರಿವಾಗಿದ್ದು ನಕಲಿ ಡಾಕ್ಯುಮೆಂಟ್ ಹೆಸರಲ್ಲಿ ವಂಚನೆ ಮಾಡಿರುವ ಬಗ್ಗೆ ಬಂದರು ಠಾಣೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ಐಪಿಸಿ 419, 420 ಮತ್ತು ಸೆಕ್ಷನ್ 34ರಡಿ ಕೇಸು ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ವಂಚಕರು ಇದೇ ರೀತಿ ಹಲವರನ್ನು ಮೋಸ ಮಾಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಖಾಲಿ ಮನೆಗಳನ್ನು ಬಾಡಿಗೆ ಪಡೆದು, ಬಳಿಕ ಅದನ್ನೇ ಬೇರೆಯವರಿಗೆ ಲೀಸಿಗೆ ಕೊಟ್ಟು ದೊಡ್ಡ ಮೊತ್ತವನ್ನು ಪಡೆದು ವಂಚಿಸುವುದು ಇವರ ಜಾಲವಾಗಿದೆ.
Mangaluru woman duped with Fake lease document cheated of five lakhs. It is said that fake documents about a flat located on K S Rao Road here were created and a lady was cheated to the extent of five lac rupees on that basis. A woman from Beltangady working in a private medical store in the city was searching for a house on rent in June 2020.
12-06-25 11:07 pm
HK News Desk
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
13-06-25 03:08 pm
HK News Desk
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
PM Modi, Ahmedabad, Plane Crash: ವಿಮಾನ ದುರಂತ...
13-06-25 12:25 pm
Lone Survivor, Ahmedabad Plane Crash: ಟೇಕ್ ಆ...
12-06-25 10:11 pm
Ahmedabad Plane Crash, 241 Dead, One survives...
12-06-25 08:52 pm
13-06-25 03:46 pm
Mangalore Correspondent
Special Task Force, Home Minister Parameshwar...
13-06-25 01:05 pm
Mangalore Student Death, Kuthar, Hiba Aiman:...
13-06-25 09:38 am
Mangalore, Co Pilot Clive Kunder: ಕೋ ಪೈಲಟ್ ಕ್...
12-06-25 10:26 pm
Mangalore, Shobha Karandlaje: ಮೋದಿ ಸರ್ಕಾರಕ್ಕೆ...
12-06-25 05:46 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm