ಬ್ರೇಕಿಂಗ್ ನ್ಯೂಸ್
22-09-21 03:23 pm Mangaluru Correspondent ಕರಾವಳಿ
ಮಂಗಳೂರು, ಸೆ.22: ಕರಾವಳಿಯಲ್ಲಿ ಉಗ್ರರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಏರ್ಪೋರ್ಟ್ ಆವರಣದಲ್ಲಿ ಅಲರ್ಟ್ ಮಾಡಲಾಗಿದೆ. ಡ್ರೋಣ್ ಅಥವಾ ಅನುಮಾನಾಸ್ಪದ ವಸ್ತು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಏರ್ಪೋರ್ಟ್ ಭದ್ರತಾ ಪಡೆ ಸಿಐಎಸ್ಎಫ್ ಮತ್ತು ಬಜ್ಪೆ ಪೊಲೀಸರು ಪರಿಸರದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ವಿಮಾನ ನಿಲ್ದಾಣ ಆಸುಪಾಸಿನ ಅದ್ಯಪಾಡಿ, ಕೆಂಜಾರು, ಕರಂಬಾರು ಪರಿಸರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಯ ಸಿಬಂದಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಪರಿಸರದ ಜನರಲ್ಲಿ ಯಾವುದೇ ರೀತಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಿದ್ದಾರೆ.


ನಾಲ್ಕು ತಿಂಗಳ ಹಿಂದೆ ಏರ್ಪೋರ್ಟ್ ಆವರಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಗೊಂದಲಕ್ಕೆ ಕಾರಣವಾಗಿತ್ತು. ಆನಂತರ, ಏಂಟಿ ಡ್ರೋಣ್ ಸಿಸ್ಟಮ್ ತರಬೇಕು ಎನ್ನುವ ಚಿಂತನೆಯೂ ಪೊಲೀಸ್ ಇಲಾಖೆಯಲ್ಲಿ ನಡೆದಿತ್ತು. ಇದೀಗ ಕರಾವಳಿಯಲ್ಲಿ ಉಗ್ರರ ಹೆಜ್ಜೆ ಗುರುತು ಕಂಡುಬಂದಿದ್ದರಿಂದ ಏರ್ಪೋರ್ಟ್ ಬಗ್ಗೆ ಅಲರ್ಟ್ ಮಾಡಲಾಗಿದೆ.
ಇತ್ತೀಚೆಗಷ್ಟೇ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವುದನ್ನು ಕೇಂದ್ರೀಯ ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿ, ಅಲರ್ಟ್ ಇರುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ದೆಹಲಿ ಪೊಲೀಸರು ಆರು ಮಂದಿ ಉಗ್ರರನ್ನು ಬಂಧಿಸಿದ್ದಲ್ಲದೆ, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದನ್ನು ಭೇದಿಸಿದ್ದರು.
High alert surrounding Mangalore airport CISF train people living nearby to alert on the moment of drones or strange activity.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm